ಆ್ಯಪ್ನಗರ

ನಿಖಿಲ್ ಕುಮಾರಸ್ವಾಮಿಗೆ ಬೆಂಬಲ ಇಲ್ಲ: 'ಗೋಬ್ಯಾಕ್ ಡಿಕೆಶಿ' ಎಂದ ಕೈ ನಾಯಕರು

ಜಿಲ್ಲೆಯಲ್ಲಿ ಈಗಾಗಲೇ ಕಾಂಗ್ರೆಸ್ ಅಸ್ತಿತ್ವಕ್ಕೆಕ್ಕೆ ಬಂದಿದೆ. ಈ ಚುನಾವಣೆಯಲ್ಲೂ ಜೆಡಿಎಸ್ ಬೆಂಬಲಿಸಿ ಎಂದೇಳುವ ಮೂಲಕ ಕಾಂಗ್ರೆಸ್ ನಾಶವಾಗಲು ಅವಕಾಶ ಕೊಡಬೇಡಿ ಎಂದು ಸಭೆಯಲ್ಲಿದ್ದ ಜಿಲ್ಲಾ ಕಾಂಗ್ರೆಸ್ ಮುಖಂಡರು ಪ್ರತಿಕ್ರಿಯಿಸಿದ್ದಾರೆಂದು ತಿಳಿದುಬಂದಿದೆ.

Vijaya Karnataka Web 12 Mar 2019, 7:07 pm
ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ಅವರಿಗೆ ಯಾವುದೇ ರೀತಿಯ ಬೆಂಬಲ ನೀಡದಂತೆ ತೀರ್ಮಾನ ಹೊರಡಿಸಿರುವ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಇದೀಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಲವು ಮುಖಂಡರು ತಿರುಗಿ ಬಿದ್ದಿದ್ದಾರೆ. ಒಂದಷ್ಟು ಮಂದಿ ‘ಗೋಬ್ಯಾಕ್ ಡಿಕೆಶಿ’ ಎಂದು ಪ್ರಚಾರ ಮಾಡುತ್ತಿದ್ದಾರೆ.
Vijaya Karnataka Web dks


ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆ ಕರೆದಿದ್ದ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಜಿಲ್ಲೆಯ ಬಹುತೇಕ ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಮುಖಂಡರು ಜಿಲ್ಲೆಯಲ್ಲಿ ಕಾಂಗ್ರೆಸ್ ಕಳೆಗುಂದಲು ಬಿಡಬೇಡಿ’ ಎಂದು ಒಂದು ಸಾಲಿನ ಮನವಿ ಮಾಡಿ ವಾಪಾಸ್ಸಾಗಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಕಾಂಗ್ರೆಸ್ ಅಸ್ತಿತ್ವಕ್ಕೆಕ್ಕೆ ಬಂದಿದೆ. ಈ ಚುನಾವಣೆಯಲ್ಲೂ ಜೆಡಿಎಸ್ ಬೆಂಬಲಿಸಿ ಎಂದೇಳುವ ಮೂಲಕ ಕಾಂಗ್ರೆಸ್ ನಾಶವಾಗಲು ಅವಕಾಶ ಕೊಡಬೇಡಿ ಎಂದು ಸಭೆಯಲ್ಲಿದ್ದ ಜಿಲ್ಲಾ ಕಾಂಗ್ರೆಸ್ ಮುಖಂಡರು ಪ್ರತಿಕ್ರಿಯಿಸಿದ್ದಾರೆಂದು ತಿಳಿದುಬಂದಿದೆ.

ಈ ಮೂಲಕ ಟ್ರಬಲ್ ಶೂಟರ್ ಎಂದೇ ಗುರುತಿಸಲ್ಪಟ್ಟಿರುವ ಡಿಕೆಶಿ ಅವರಿಗೆ ಜಿಲ್ಲಾ ಕಾಂಗ್ರೆಸ್ ಮುಖಂಡರು ಟ್ರಬಲ್ ನೀಡಿದ್ದಾರೆ. ಮೈತ್ರಿ ಅಭ್ಯರ್ಥಿ ಜೆಡಿಎಸ್‌ನ ನಿಖಿಲ್‌ಕುಮಾರ್ ಅವರನ್ನು ಚುನಾವಣೆಯಲ್ಲಿ ಬೆಂಬಲಿಸಿ ಕೆಲಸ ಮಾಡಬೇಕು ಎನ್ನುವ ಸಚಿವ ಡಿ.ಕೆ.ಶಿವಕುಮಾರ್ ಅವರ ನಿಲುವು ಜಿಲ್ಲಾ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಕೋಪಕ್ಕೆ ಕಾರಣವಾಗಿದೆ.

ಈ ಮಧ್ಯೆ ಕಾಂಗ್ರೆಸ್‌ನ ನಗರಸಭೆ ಮಾಜಿ ಸದಸ್ಯ ಅನಿಲ್‌ಕುಮಾರ್ ಅವರು ಗೋಬ್ಯಾಕ್ ಡಿಕೆಶಿ ಎಂದು ಪ್ರಚಾರ ಮಾಡುತ್ತಿದ್ದಾರೆ. ನಾವು ಯಾವುದೇ ಕಾರಣಕ್ಕೂ ನಿಖಿಲ್ ಅವರನ್ನು ಒಪ್ಪುವುದಿಲ್ಲ. ನಾವು ಅವರ ಪರವಾಗಿ ಚುನಾವಣೆಯಲ್ಲಿ ಕೆಲಸವನ್ನೂ ಮಾಡುವುದಿಲ್ಲ. ಜಿಲ್ಲೆಯಲ್ಲಿ ಒಬ್ಬರೇ ಒಬ್ಬ ಕಾಂಗ್ರೆಸ್ ಶಾಸಕರಿಲ್ಲ. ಯಾರ ಬಳಿ ನಮ್ಮ ಸಮಸ್ಯೆ ಹೇಳಿಕೊಳ್ಳಬೇಕು ಎಂದು ಪ್ರಶ್ನಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ