ಆ್ಯಪ್ನಗರ

ಗ್ರಾಪಂ ಸದಸ್ಯನ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಇಬ್ಬರು ಆರೋಪಿಗಳ ಬಂಧನ ವಿಕ ಸುದ್ದಿಲೋಕ ಪಾಂಡವಪುರ (ಮಂಡ್ಯ) ತಾಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ಸೋಮವಾರ ರಾತ್ರಿ ಗ್ರಾಮ ಪಂಚಾಯಿತಿ ಸದಸ್ಯ ತಿಮ್ಮೇಗೌಡರ ಹತ್ಯೆ ಪ್ರಕರಣಕ್ಕೆ ...

Vijaya Karnataka 21 Feb 2019, 5:00 am
ಪಾಂಡವಪುರ (ಮಂಡ್ಯ): ತಾಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ಸೋಮವಾರ ರಾತ್ರಿ ಗ್ರಾಮ ಪಂಚಾಯಿತಿ ಸದಸ್ಯ ತಿಮ್ಮೇಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮದನ್‌ನ ತಂದೆ ಯೋಗೇಗೌಡ ಹಾಗೂ ತಾಯಿ ಜಯಲಕ್ಷ್ಮಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
Vijaya Karnataka Web grama panchayat member murder case two arrested
ಗ್ರಾಪಂ ಸದಸ್ಯನ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ


ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿ ನಡೆಯುತ್ತಿದ್ದ ಗ್ರಾಮದೇವತೆ ದೇವಿರಮ್ಮನ ಉತ್ಸವದಲ್ಲೇ ಯೋಗೇಗೌಡ, ಪತ್ನಿ ಜಯಲಕ್ಷ್ಮಿ, ಪುತ್ರ ಮದನ್‌, ಸೋದರ ಆನಂದ್‌ ಆಲಿಯಾಸ್‌ ದೇವೇಗೌಡ(ಹಣ್ಣಿನ ಅಂಗಡಿಗೌಡ), ಕುಮಾರ್‌, ಚಂದು ಸೇರಿ ಚಾಕು, ಲಾಂಗು, ಮಚ್ಚುಗಳಿಂದ ಗ್ರಾಮದ ಯಜಮಾನ ಹಾಗೂ ಗ್ರಾಮ ಪಂಚಾಯಿತಿ ಸದಸ್ಯ ತಿಮ್ಮೇಗೌಡ ಅವರನ್ನು ಬರ್ಬರವಾಗಿ ಹತ್ಯೆಮಾಡಿ ಪರಾರಿಯಾಗಿದ್ದರು. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು.

ಪೊಲೀಸರು ತಕ್ಷ ಣ ಕಾರಾರ‍ಯಚರಣೆ ನಡೆಸಿ ಒಬ್ಬ ಆರೋಪಿ ಆನಂದ್‌ ಆಲಿಯಾಸ್‌ ದೇವೇಗೌಡನನ್ನು ಮಂಗಳವಾರವೇ ಬಂಧಿಸಿದ್ದರು. ಇದೀಗ ಪ್ರಕರಣದ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಲಯದ ಸೂಚನೆಯಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದ ಆರೋಪಿಗಳನ್ನು ಸದ್ಯದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ