ಆ್ಯಪ್ನಗರ

ಬಣಜಿಗರ ವಿದ್ಯಾರ್ಥಿ ನಿಲಯ ಅಭಿವೃದ್ಧಿಗೆ ಅನುದಾನ

ಬಣಜಿಗರ ವಿದ್ಯಾರ್ಥಿ ನಿಲಯಕ್ಕೆ ಮೂಲ ಸೌಲಭ್ಯಗಳಿಗೆ ತಗಲುವ ಅನುದಾನವನ್ನು ತನ್ನ ಸ್ಥಳೀಯ ಸಂಸ್ಥೆ ವತಿಯಿಂದ ನೀಡುವುದಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಾಂಖ್ಯಿಕ ಮತ್ತು ಯೋಜನಾ ಇಲಾಖೆ ಸಚಿವ ಎಂ.ಆರ್. ಸೀತಾರಾಂ ಭರವಸೆ ನೀಡಿದರು.

Vijaya Karnataka 22 Jan 2018, 5:15 am
ಮಂಡ್ಯ: ಬಣಜಿಗರ ವಿದ್ಯಾರ್ಥಿ ನಿಲಯಕ್ಕೆ ಮೂಲ ಸೌಲಭ್ಯಗಳಿಗೆ ತಗಲುವ ಅನುದಾನವನ್ನು ತನ್ನ ಸ್ಥಳೀಯ ಸಂಸ್ಥೆ ವತಿಯಿಂದ ನೀಡುವುದಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಾಂಖ್ಯಿಕ ಮತ್ತು ಯೋಜನಾ ಇಲಾಖೆ ಸಚಿವ ಎಂ.ಆರ್. ಸೀತಾರಾಂ ಭರವಸೆ ನೀಡಿದರು.
Vijaya Karnataka Web grants for banjiragar student development
ಬಣಜಿಗರ ವಿದ್ಯಾರ್ಥಿ ನಿಲಯ ಅಭಿವೃದ್ಧಿಗೆ ಅನುದಾನ


ಸರ್ವ ಬಣಜಿಗ (ಬಲಿಜ)ರ ಸಂಘದ ವತಿಯಿಂದ ನಗರದ ಯೋಗೀನಾರೇಯಣ ಸಮುದಾಯ ಭವನದಲ್ಲಿ ಭಾನುವಾರ ನಡೆದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

ಬಣಜಿಗರ ವಿದ್ಯಾರ್ಥಿ ನಿಲಯಕ್ಕೆ ಶೀಘ್ರ ರೂಪುರೇಷೆ ಸಿದ್ಧಪಡಿಸಿಕೊಟ್ಟರೆ ಇಲಾಖೆಯೊಂದಿಗೆ ಚರ್ಚಿಸಿ ಎರಡು ತಿಂಗಳೊಳಗೆ ಅನುದಾನ ಬಿಡುಗಡೆ ಮಾಡಿ, ಕೆಲಸ ಪ್ರಾರಂಭಿಸಲಾಗುವುದು. ಬಣಜಿಗ ಸಂಘ ಕಳೆದ 48 ವರ್ಷಗಳಿಂದಲೂ ಸಮುದಾಯದ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅವಕಾಶ ಕಲ್ಪಿಸಿದೆ. ಇತ್ತೀಚೆಗೆ ತುಮಕೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಹಾಸನ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರತಿಭಾ ಪುರಸ್ಕಾರ ನೀಡುತ್ತಿದೆ. ಇದರ ಸಾಲಿಗೆ ಮಂಡ್ಯ ಕೂಡ ಸೇರ್ಪಡೆಯಾಗಿದೆ. ಜಿಲ್ಲೆಯಲ್ಲಿ ಸಮುದಾಯದ ವಿದ್ಯಾರ್ಥಿ ಗಳಿಗಾಗಿ ವಸತಿ ನಿಲಯವಿದೆ ಎಂದು ಹೇಳಿದರು.

ಇಂದು ಸುಮಾರು 60 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ನಗದು ಹಣದ ಸಹಾಯ ಮಾಡಲಾಗುತ್ತಿದೆ. ಇದನ್ನು ಬಳಸಿಕೊಂಡು ಉತ್ತಮ ವಿದ್ಯಾಭ್ಯಾಸ ಮಾಡಿ ಸಮಾಜದಲ್ಲಿ ಹುನ್ನತ ಹುದ್ದೆಗಳನ್ನು ಅಲಂಕರಿಸಿ ಮುಂದಿನ ದಿನಗಳಲ್ಲಿ ನಮ್ಮ ಸಮುದಾಯದ ಮಕ್ಕಳಿಗೆ ನಿಮ್ಮಿಂದ ಸಹಾಯ, ಸಹಕಾರ ನೀಡುವ ಮೂಲಕ ಸಮುದಾಯದ ಋಣ ತೀರಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಮೈಸೂರು ಅರಗು ಮತ್ತು ಬಣ್ಣದ ಕಾರ್ಖಾನೆ ಅಧ್ಯಕ್ಷ ಎಚ್.ಎ. ವೆಂಕಟೇಶ್, ಹಿರಿಯ ನೇತ್ರ ತಜ್ಞ ಡಾ. ಎಚ್.ವಿ. ಜಗನ್ನಾಥಶೆಟ್ಟಿ, ಸರ್ವ ಬಣಜಿಗ ಸಂಘದ ಅಧ್ಯಕ್ಷ ಎಂ.ಎಸ್. ವೆಂಕಟೇಶ್‌ಬಾಬು, ಉಪಾಧ್ಯಕ್ಷ ಕೆ. ನಾಗಾನಂದ, ಎಂ.ಕೆ. ಜಗದೀಶ್, ಪ್ರಧಾನ ಕಾರ‌್ಯದರ್ಶಿ ಎಂ.ಎಸ್. ಪ್ರಶಾಂತ್, ಮಾಜಿ ಸಚಿವ ಎಂ.ಎಸ್. ಆತ್ಮಾನಂದ, ನಗರಸಭಾ ಸದಸ್ಯ ಬಿ. ಶಶಿಧರ, ಪಿ.ಜಿ.ಶೆಟ್ಟಿ ಕನ್‌ಸ್ಟ್ರಕ್ಷನ್ ವ್ಯವಸ್ಥಾಪಕ ನಿರ್ದೇಶಕ ಎಂ.ಜಿ. ಸೋಮಶೇಖರ್, ಮೈಸೂರು ಬಣಜಿಗ ಸಂಘದ ಅಧ್ಯಕ್ಷ ಎಂ. ನಾರಾಯಣ್ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ