ಆ್ಯಪ್ನಗರ

ಮಹನೀಯರ ಹೋರಾಟ ವ್ಯರ್ಥವಾಗ ಬಾರದು:

ವಿಕ ಸುದ್ದಿಲೋಕ ಮಂಡ್ಯ ಮಹನೀಯರ ತ್ಯಾಗ, ಬಲಿದಾನದಿಂದ ಭಾರತ ದೇಶ ಸ್ವತಂತ್ರವಾಯಿತು...

Vijaya Karnataka 16 Aug 2019, 5:00 am
ಮಂಡ್ಯ: ಮಹನೀಯರ ತ್ಯಾಗ, ಬಲಿದಾನದಿಂದ ಭಾರತ ದೇಶ ಸ್ವತಂತ್ರವಾಯಿತು. ಹಲವು ಹೋರಾಟ ನಡೆಸಿ ಮಹನೀಯರು ತಂದು ಕೊಟ್ಟ ಸ್ವಾತಂತ್ರ್ಯ ವ್ಯರ್ಥವಾಗದಂತೆ ಕಾಪಾಡಿಕೊಳ್ಳಬೇಕಿದೆ ಎಂದು ಸಂಸದೆ ಸುಮಲತಾ ಅಂಬರೀಷ್‌ ಹೇಳಿದರು.
Vijaya Karnataka Web greatest personalities fight should not go in vain mp
ಮಹನೀಯರ ಹೋರಾಟ ವ್ಯರ್ಥವಾಗ ಬಾರದು:


ನಗರದ ಮಹಿಳಾ ಸರಕಾರಿ ಮಹಾವಿದ್ಯಾಲಯದಲ್ಲಿ ಗುರುವಾರ ನಡೆದ 73ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಧ್ವಜವಂದನೆ ಸ್ವೀಕರಿಸಿ ಮಾತನಾಡಿದರು.

ದೇಶದ ಪ್ರಗತಿಯಲ್ಲಿ ಪ್ರತಿಯೊಬ್ಬರೂ ಭಾಗಿಗಳಾಗಬೇಕು. ನಡೆ, ನುಡಿ, ವ್ಯಕ್ತಿತ್ವದಲ್ಲಿ ಅದನ್ನು ರೂಢಿಸಿಕೊಂಡು ಮುಂದಿನ ಪೀಳಿಗೆಗೆ ಪ್ರತಿಯೊಬ್ಬರೂ ಕೊಡುಗೆ ನೀಡುವಂತ ಮನೋಭಾವ ಬೆಳೆಸಿಕೊಳ್ಳಬೇಕು. ಆ ಮೂಲಕ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು. ಹಲವು ಮಹನೀಯರು ತಮ್ಮ ತ್ಯಾಗ, ಬಲಿದಾನದ ಮೂಲಕ ಸ್ವಾತಂತ್ರ್ಯವನ್ನು ನಮಗಾಗಿ ತಂದುಕೊಟ್ಟಿದ್ದಾರೆ. ನಾವು ಮುಂದಿನ ಪೀಳಿಗೆಗೆ ಏನನ್ನೂ ಕೊಡುಗೆಯಾಗಿ ನೀಡುತ್ತಿದ್ದೇವೆ ಎಂಬುದರ ಬಗ್ಗೆ ಪ್ರತಿಯೊಬ್ಬರೂ ಚಿಂತಿಸಬೇಕು ಎಂದು ಸಲಹೆ ನೀಡಿದರು.

ಬ್ರಿಟಿಷರಿಂದ ನಮಗೆ ಸ್ವಾತಂತ್ರ್ಯಸಿಕ್ಕಿದೆ. ಆದರೆ ಇಂದು ನಾವು ನಿಜಕ್ಕೂ ಸ್ವತಂತ್ರರಾಗಿದ್ದೇವೇಯೇ? ಎಂಬ ಬಗ್ಗೆ ಚಿಂತನೆ ಮಾಡಬೇಕಾಗಿದೆ. ಮಾತು, ತಿಳುವಳಿಕೆ, ನಡೆದುಕೊಳ್ಳುವ ರೀತಿ, ಎಲ್ಲದರಲ್ಲೂ ಸಾಕಷ್ಟು ಲೋಪಗಳನ್ನು ನಾವು ಕಾಣುತ್ತಿದ್ದೇವೆ. ಅದನ್ನು ತಿದ್ದಿಕೊಳ್ಳದಿದ್ದರೆ ನಾವು ಸ್ವತಂತ್ರರಾಗಿದ್ದೇವೆ ಎಂದು ಹೇಳಿಕೊಳ್ಳಲು ಆಗುವುದಿಲ್ಲ. ಎಲ್ಲರನ್ನೂ ಹಾಗೂ ಎಲ್ಲ ವರ್ಗದವರನ್ನು ಸಮಾನ ಮನಸ್ಸಿನಿಂದ ನೋಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಯುವ ಪೀಳಿಗೆಗೆ ಮುಂದೆ ದೊಡ್ಡ ಸವಾಲುಗಳೇ ಎದುರಾಗುತ್ತವೆ. ಇಂತಹ ಸಾಮಾಜಿಕ ಸಮಸ್ಯೆಗಳ ಕುರಿತಂತೆ ಬೆಳಕು ಚೆಲ್ಲುವ ಪ್ರಯತ್ನವನ್ನು ಮಾಡಬೇಕಿದೆ. ವಿದ್ಯಾರ್ಥಿ ಜೀವನದಲ್ಲಿ ಏನೆಲ್ಲವನ್ನೂ ಕಲಿಯುತ್ತೀರೋ ಮತ್ತು ಬದುಕಿನಲ್ಲಿ ಅಳವಡಿಸಿಕೊಳ್ಳುತೀರೋ ಅದು ಮುಂದೆ ನಿಮ್ಮ ಜೀವನದಲ್ಲಿ ಸಹಾಯವಾಗುತ್ತದೆ. ಈಗ ಶ್ರದ್ಧೆ, ಆಸಕ್ತಿಯಿಂದ ಕಲಿಯುವುದರ ಜತೆಗೆ ಮಾನವೀಯ ಮೌಲ್ಯವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಸತ್ಯನಾರಾಯಣ್‌, ಪ್ರಾಧ್ಯಾಪಕರಾದ ಪ್ರೊ.ಶ್ರೀದೇವಿ, ದಶರಥ್‌, ನಾರಾಯಣ್‌ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ