ಆ್ಯಪ್ನಗರ

ಮನೆಗೊಂದು ಸಸಿ ವಿತರಣೆ

ವಿಕ ಸುದ್ದಿಲೋಕ ಕೆಆರ್‌...

Vijaya Karnataka 14 Aug 2018, 5:00 am
ಕೆ.ಆರ್‌.ಪೇಟೆ: ಹಸಿರು ಕರ್ನಾಟಕ ಅಭಿಯಾನ ಕಾರ್ಯಕ್ರಮವನ್ನು ತಾಲೂಕಿನಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತಾಲೂಕಿನ ಅಗ್ರಹಾರಬಾಚಹಳ್ಳಿ ಮತ್ತು ಹಿರಿಕಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ವಾಸವಾಗಿರುವ ಪ್ರತಿ ಕುಟುಂಬಕ್ಕೂ ಒಂದೊಂದು ಸಸಿ ನೀಡಲಾಗುತ್ತದೆ ಎಂದು ತಹಸೀಲ್ದಾರ್‌ ಶಿವಮೂರ್ತಿ ತಿಳಿಸಿದರು.
Vijaya Karnataka Web green karnataka campaign program in kr pete
ಮನೆಗೊಂದು ಸಸಿ ವಿತರಣೆ


ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಹಸಿರು ಕರ್ನಾಟಕ ವಿಶೇಷ ಪರಿಸರ ಉಳಿಸುವ ಕಾರ್ಯಕ್ರಮದ ಯಶಸ್ವಿ ಅನುಷ್ಠಾನದ ಅಂಗವಾಗಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾಮಾಜಿಕ ಅರಣ್ಯ ಇಲಾಖೆ ಸಿಬ್ಬಂದಿ ಪೂರ್ವಭಾವಿ ಸಭೆ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ಕಾಡು ಉಳಿಸುವ ನಿಟ್ಟಿನಲ್ಲಿ ಆಯೋಜಿಸಿರುವ ಈ ಸರಕಾರದ ಕಾರ್ಯಕ್ರಮಕ್ಕೆ ಅರಣ್ಯ ಇಲಾಖೆ ಜತೆ ಎಲ್ಲರೂ ಕೈಜೋಡಿಸಬೇಕು. ತಾಲೂಕಿನಾದ್ಯಂತ ಎಲ್ಲ ಶಾಲಾ ಕಾಲೇಜುಗಳು, ವಿದ್ಯಾರ್ಥಿ ನಿಲಯಗಳು, ಗುಂಡುತೋಪುಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಸಸಿಗಳನ್ನು ನೆಟ್ಟು ನೀರುಣಿಸುವ ಮೂಲಕ ಪಾಲನೆ-ಪೋಷಣೆ ಮಾಡಲು ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳಬೇಕು. ನಮ್ಮ ಹಿರಿಯರು ಈ ಹಿಂದೆಯೇ ತಿಳಿಸಿರುವಂತೆ ಮನೆಗೊಂದು ಮರ ಊರಿಗೊಂದು ತೋಪು, ತಾಲೂಕಿಗೊಂದು ಕಿರು ಅರಣ್ಯ, ಜಿಲ್ಲೆಗೊಂದು ಕಾಡು ಎನ್ನುವುದನ್ನು ಸಮರ್ಥವಾಗಿ ಅನುಷ್ಠಾನಗೊಳಿಸಿ ಧ್ಯೇಯವಾಕ್ಯವನ್ನಾಗಿಸಲು ಪಣತೊಡಬೇಕು ಎಂದು ತಿಳಿಸಿದರು.

ಹಸಿರು ಕರ್ನಾಟಕ ಅಭಿಯಾನ ಕಾರ್ಯಕ್ರಮಕ್ಕೆ ಆ.15ರಂದು ಶಾಸಕ ಡಾ.ನಾರಾಯಣಗೌಡ ಚಾಲನೆ ನೀಡಲಿದ್ದು, ಅಂದು ಪ್ರಗತಿಪರ ರೈತರು ಹಾಗೂ ಆಯ್ದ ವಿದ್ಯಾರ್ಥಿಗಳಿಗೆ ಮಾತ್ರ ಸಸಿ ವಿತರಿಸುವ ಮೂಲಕ ಚಾಲನೆ ನೀಡಲಾಗುತ್ತದೆ. ತಾಲೂಕು ಮಟ್ಟದ ಎಲ್ಲ ಸರಕಾರಿ ಕಚೇರಿಗಳಲ್ಲಿ ಒಂದೊಂದು ಸಸಿಗಳನ್ನು ಕಡ್ಡಾಯವಾಗಿ ನೆಟ್ಟು ನೀರೆರೆಯಲಾಗುವುದು. ತಾಲೂಕಿನ ಹೆಮ್ಮನಹಳ್ಳಿ, ಮುರುಕನಹಳ್ಳಿ, ಅಗ್ರಹಾರಬಾಚಹಳ್ಳಿ, ವಳಗೆರೆಮೆಣಸ ಮತ್ತು ಹಿರಿಕಳಲೆ ಗ್ರಾಮಗಳಲ್ಲಿ ವಾಸವಾಗಿರುವ ಎಲ್ಲ ಕುಟುಂಬಗಳಿಗೂ ಒಂದೊಂದು ಸಸಿ ವಿತರಿಸಲಾಗುವುದು. ಪೋಲಿಸ್‌ ಠಾಣೆ, ನ್ಯಾಯಾಲಯ, ಸಂಘಸಂಸ್ಥೆಗಳು, ಗ್ರಾಮ ಪಂಚಾಯಿತಿ, ಪುರಸಭೆ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಹಯೋಗದೊಂದಿಗೆ ಆಗಸ್ಟ್‌ 15ರಿಂದ 18ರ ವರೆಗೆ ನಾಲ್ಕು ದಿನ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಬೇಕು. ಪರಿಸರ ಸಂರಕ್ಷ ಣೆ ಮಾಡಿ ಹಸಿರು ಕರ್ನಾಟಕವನ್ನು ನಿರ್ಮಿಸಿ ಜನಸಾಮಾನ್ಯರ ಆರೋಗ್ಯವನ್ನು ಕಾಪಾಡಿ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡುವ ಈ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಿ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಮೌಳಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪೂರ್ಣಚಂದ್ರತೇಜಸ್ವಿ, ತಾಲೂಕು ಜಾನಪದ ಪರಿಷತ್‌ ಅಧ್ಯಕ್ಷ ಕೆ.ಎಸ್‌.ಸೋಮಶೇಖರ್‌, ಪುರಸಭೆಯ ಮುಖ್ಯಾಧಿಕಾರಿ ಮೂರ್ತಿ, ಕ್ಷೇತ್ರಶಿಕ್ಷ ಣಾಧಿಕಾರಿ ಕೆ.ಬೆಟ್ಟನಾಯಕ, ಸಿಡಿಪಿಒ ದೇವಕುಮಾರ್‌, ಅರಣ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳು ಹಸಿರು ಕರ್ನಾಟಕ ಅಭಿಯಾನದ ಯಶಸ್ವಿಗೆಸಲಹೆ ಸೂಚನೆಗಳನ್ನು ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ