ಆ್ಯಪ್ನಗರ

ಮಕ್ಕಳಲ್ಲಿ ಸಾಹಿತ್ಯಾಭಿಮಾನ ಬೆಳೆಸಿ

ಶಿಕ್ಷಕರು ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ಸಾಹಿತ್ಯ, ಸಂಸ್ಕೃತಿ ಬಗ್ಗೆ ಅರಿವು ಮೂಡಿಸಿ ಪ್ರತಿಯೊಬ್ಬರಲ್ಲಿಯೂ ಸಾಹಿತ್ಯಾಭಿಮಾನ ಮೈಗೂಡಿವಂತೆ ಮಾಡಬೇಕು ಎಂದು ಶಾಸಕ ಡಿ.ಸಿ. ತಮ್ಮಣ್ಣ ತಿಳಿಸಿದರು.

Vijaya Karnataka 29 Nov 2017, 5:15 am
ಮದ್ದೂರು: ಶಿಕ್ಷಕರು ಪ್ರಾಥಮಿಕ ಹಂತದಲ್ಲಿಯೇ ಮಕ್ಕಳಿಗೆ ಸಾಹಿತ್ಯ, ಸಂಸ್ಕೃತಿ ಬಗ್ಗೆ ಅರಿವು ಮೂಡಿಸಿ ಪ್ರತಿಯೊಬ್ಬರಲ್ಲಿಯೂ ಸಾಹಿತ್ಯಾಭಿಮಾನ ಮೈಗೂಡಿವಂತೆ ಮಾಡಬೇಕು ಎಂದು ಶಾಸಕ ಡಿ.ಸಿ. ತಮ್ಮಣ್ಣ ತಿಳಿಸಿದರು.
Vijaya Karnataka Web grow literature in children
ಮಕ್ಕಳಲ್ಲಿ ಸಾಹಿತ್ಯಾಭಿಮಾನ ಬೆಳೆಸಿ


ಪಟ್ಟಣದ ಗುರುಭವನದಲ್ಲಿ ಮಕ್ಕಳ ಸಾಹಿತ್ಯ ಪರಿಷತ್ ತಾಲೂಕು ಘಟಕ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ‌್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮಕ್ಕಳಲ್ಲಿ ಅಡಗಿರುವ ಬಹುಮುಖ ಪ್ರತಿಭೆಯನ್ನು ಗುರುತಿಸಲು ವೇದಿಕೆಗಳು ಸೂಕ್ತವಾಗಿದ್ದು, ಮಕ್ಕಳ ಸಾಹಿತ್ಯ ಪರಿಷತ್ ಘಟಕ ಈ ನಿಟ್ಟಿನಲ್ಲಿ ಸಾಹಿತ್ಯ, ಚಟುವಟಿಕೆಗಳನ್ನು ಬೆಳೆಸುವ ಜತೆಗೆ ಕಥೆ, ಕವನ, ನಾಟಕ, ಹನಿಗವನ, ಚುಟುಕ, ಲೇಖನಗಳನ್ನು ಬೆರೆಯುವ ಮೂಲಕ ವಿದ್ಯಾರ್ಥಿಗಳಿಗೆ ಸಾಹಿತ್ಯದ ರುಚಿ ಉಣಬಡಿಸುವಂತೆ ಶಿಕ್ಷಕರಿಗೆ ಹೇಳಿದರು.

ಪ್ರತಿಯೊಂದು ಶಾಲೆಗಳಲ್ಲಿ ಮಕ್ಕಳ ಸಾಹಿತ್ಯ ಪರಿಷತ್ ಆರಂಭಿಸಿ ಶಾಲಾ ಮಟ್ಟದಲ್ಲೇ ಮಕ್ಕಳ ಪ್ರತಿಭೆಯನ್ನು ಅರಳಿಸಲು ಪೂರಕ ಕಾರ‌್ಯಕ್ರಮಗಳನ್ನು ಹಾಕಿಕೊಡಬೇಕು. ಕಲೆ, ಸಾಹಿತ್ಯ, ಸಂಸ್ಕೃತಿಗಳ ಬಗ್ಗೆ ಹೆಚ್ಚಿನ ಒತ್ತು ನೀಡಿ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮಕ್ಕಳಲ್ಲಿ ಸಾಹಿತ್ಯ ಮತ್ತು ಸಜನಶೀಲತೆ ಕುರಿತು ಸೋಮನಹಳ್ಳಿ ವಿ.ಎಂ. ಲಿಂಗಯ್ಯ ಉಪನ್ಯಾಸ ನೀಡಿದರು. ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲೆ ಹಾಗೂ ಸಾಹಿತಿ ಡಾ.ಪಿ. ಸುಮರಾಣಿಶಂಭು ಶಿಸ್ತು ಮತ್ತು ಪ್ರಾಸಬದ್ಧ ಸಾಹಿತ್ಯದ ರಚನೆ ಮತ್ತು ಅಭ್ಯಾಸ ಇಂದಿನ ವಿದ್ಯಾರ್ಥಿಗಳಿಗೆ ಅವಶ್ಯವಿದ್ದು, ಇದನ್ನರಿತು ಸಾಹಿತ್ಯ ಪರಿಷತ್ ಮಕ್ಕಳ ಘಟಕ ಆರಂಭ ಉತ್ತಮ ಬೆಳವಣಿಗೆ ಎಂದು ಬಣ್ಣಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಂ. ಅಶೋಕ್ ಮಾತನಾಡಿ, ಭೈರವೈಕ್ಯ ಬಾಲಗಂಗಾಧರನಾಥ ಶ್ರೀ ಕನಸಿನ ಕೂಸಾದ ಮಕ್ಕಳ ಸಾಹಿತ್ಯ ಘಟಕ ಪ್ರಸ್ತುತ ಎಲ್ಲೆಡೆ ಚಾಲ್ತಿಯಲ್ಲಿದ್ದು, ಪ್ರತಿ ತಾಲೂಕು ಮತ್ತು ಹೋಬಳಿ ಘಟಕಗಳಲ್ಲಿಯೂ ಶಾಖೆ ತೆರೆಯುವ ಮೂಲಕ ಶ್ರೀಗಳ ಆಸ್ತೆಗೆ ನೀರೆರೆದು ಪೋಷಿಸುವ ಕೆಲಸ ಕೈಗೊಂಡಿರುವುದಾಗಿ ತಿಳಿಸಿದರು.

ಕಾರ‌್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಮ್ಮ, ಕನ್ನಡ ವಿಷಯ ಪರಿವೀಕ್ಷಕ ಚಿಕ್ಕಸ್ವಾಮಿ, ಮಂಗಳ ಯೋಗೇಶ್, ಎಸ್. ಲೋಕೇಶ್, ಶಿವಪ್ಪ, ಶಿವ ಕುಮಾರ್, ನಾಗರಾಜು, ಚಂದ್ರಶೇಖರ್ ಹಾಗೂ ತಾಲೂಕು ಘಟಕದ ಅಧ್ಯಕ್ಷ ಎಂ.ಪಿ. ವೆಂಕಟೇಶ್, ಕಾರ್ಯದರ್ಶಿ ಎಚ್.ಕೆ. ಆನಂದ್, ಸಿ.ಎಂ.ಪ್ರಸನ್ನ, ಹರೀಶ್ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ