ಆ್ಯಪ್ನಗರ

ಜೆಡಿಎಸ್ ಮುಖಂಡನ ಕೊಲೆ: ಮದ್ದೂರು, ತೊಪ್ಪನಹಳ್ಳಿ ಪೊಲೀಸ್ ಸರ್ಪಗಾವಲು

ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿದ್ದು, ಮೃತರ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು. ಶವ ಪರೀಕ್ಷೆ ಬಳಿಕ ಶವವನ್ನು ತೊಪ್ಪನಹಳ್ಳಿ ಗ್ರಾಮಕ್ಕೆ ಕೊಂಡೊಯ್ಯಲು ಸಹಕರಿಸುವಂತೆ ಮನವಿ ಮಾಡಿದರು.

Vijaya Karnataka Web 25 Dec 2018, 3:39 pm
ಮಂಡ್ಯ: ಜೆಡಿಎಸ್ ಮುಖಂಡ ಪ್ರಕಾಶ್ ಶಿವರಾಜು ಕೊಲೆ ಪ್ರಕರಣ ಸಂಬಂಧ ಮಂಡ್ಯದ ಮದ್ದೂರು ಹಾಗೂ ತೊಪ್ಪನಹಳ್ಳಿ ಗ್ರಾಮದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
Vijaya Karnataka Web j


ಬಿಗಿ ಪೊಲೀಸ್ ಬಂದೋಬಸ್ತ್‌ಗಾಗಿ 3 ಎಸ್‌ಪಿ, 1 ಎಎಸ್‌ಪಿ, 8 ಡಿವೈಎಸ್‌ಪಿ, 12 ಸರ್ಕಲ್ ಇನ್ಸ್‌ಪೆಕ್ಟರ್, 32 ಎಸ್‌ಐ, 96 ಎಎಸ್‌ಐ, 17 ಡಿಎಆರ್‌, 12 ಕೆಎಸ್‌ಆರ್‌ಪಿ ತುಕಡಿ ಸೇರಿದಂತೆ ಒಂದು ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಮಂಡ್ಯ, ಮೈಸೂರು ಹಾಸನ, ರಾಮನಗರ ಜಿಲ್ಲೆಯಿಂದ ಪೊಲೀಸರ ಆಗಮಿಸಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿದ್ದು, ಮೃತರ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು. ಶವ ಪರೀಕ್ಷೆ ಬಳಿಕ ಶವವನ್ನು ತೊಪ್ಪನಹಳ್ಳಿ ಗ್ರಾಮಕ್ಕೆ ಕೊಂಡೊಯ್ಯಲು ಸಹಕರಿಸುವಂತೆ ಮನವಿ ಮಾಡಿದರು. ಆದರೆ, ಇದಕ್ಕೊಪ್ಪದ ಸಂಬಂಧಿಕರು ಹಾಗೂ ಜೆಡಿಎಸ್ ಕಾರ್ಯಕರ್ತರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸ್ಥಳಕ್ಕೆ ಬರುವವರೆಗು ಹಾಗೂ ಆರೋಪಿಗಳನ್ನು ಬಂಧಿಸುವವರೆಗೂ ಗ್ರಾಮಕ್ಕೆ ಶವ ಕೊಂಡೊಯ್ಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

7 ಜನರ ವಿರುದ್ಧ ಪ್ರಕರಣ

ಪ್ರಕಾಶ್ ಹತ್ಯೆ ಪ್ರಕರಣ ಸಂಬಂಧ ತೊಪ್ಪನಹಳ್ಳಿ ಗ್ರಾಮದ ಪ್ರಸನ್ನ, ಸ್ವಾಮಿ, ಮುತ್ತೇಶ್, ಶಿವರಾಜು, ಯೋಗೇಶ್ ಹೇಮಂತ್ ಸೇರಿದಂತೆ 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೃತ ಪ್ರಕಾಶ್ ಜೊತೆ ಕಾರಿನಲ್ಲಿದ್ದ ತೊಪ್ಪನಹಳ್ಳಿಯ ಅಭಿಲಾಷ್ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.

ಪ್ರಕಾಶ್ ಕೊಲೆ ಪ್ರಕರಣ ಸಂಬಂಧ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿರುವ ಐಜಿ‌ ಶರತ್ ಚಂದ್ರ, ಜೆಡಿಎಸ್ ಕಾರ್ಯಕರ್ತರು ಹಾಗೂ ಮದ್ದೂರಿನ ಜನ ಉದ್ವೇಗಕ್ಕೆ ಒಳಗಾಗಬೇಡಿ ಎಂದು ತಿಳಿ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ