ಆ್ಯಪ್ನಗರ

ಮಂಡ್ಯದಲ್ಲಿ ಭಾರೀ ಮಳೆಗೆ ಕೊಚ್ಚಿ ಹೋದ ರಸ್ತೆ; ನೂರಾರು ಎಕರೆ ಜಮೀನಿಗೆ ನುಗ್ಗಿದ ನೀರು!

ರಾತ್ರಿ ಸುರಿದ ಭಾರಿ ಮಳೆಗೆ ನೂರಾರು ಎಕರೆ ಜಮೀನು ಜಲಾವೃತಗೊಂಡಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗ್ರಾಮಗಳಾದ ಬಲ್ಲೇನಹಳ್ಳಿ, ಚಿಂದಗಿರಿಕೊಪ್ಪಲು ಸುತ್ತಮುತ್ತ ಗ್ರಾಮಗಳ ಜಮೀನು ಜಲಾವೃತಗೊಂಡಿದೆ.

Vijaya Karnataka Web 14 Nov 2021, 11:18 am
ಮಂಡ್ಯ: ಕೆ.ಆರ್.ಪೇಟೆ ತಾಲೂಕು ಶೀಳನೆರೆ ಹೋಬಳಿ ಹುಣಸನಹಳ್ಳಿ ಎಚ್. ಬಳ್ಳೇಕೆರೆ ಗ್ರಾಮಕ್ಕೆ ಹಾದು ಹೋಗುವ ರಸ್ತೆಯು ರಾತ್ರಿ ಸುರಿದ ಧಾರಾಕಾರ ಮಳೆಗೆ ಕೊಚ್ಚಿಕೊಂಡು ಹೋಗಿದೆ.
Vijaya Karnataka Web ಮಳೆ


ಇದೇ ಸಮಯದಲ್ಲಿ ಕಾರೊಂದು ರಸ್ತೆಯು ಕೊಚ್ಚಿಕೊಂಡು ಹೋಗುವ ಮಾರ್ಗದಲ್ಲಿ ಸಿಕ್ಕಿಹಾಕಿಕೊಂಡು ಬಿದ್ದಿದೆ. ಸದ್ಯಕ್ಕೆ ಕಾರಿನಲ್ಲಿದ್ದವರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗದೇ ಪಾರಾಗಿದ್ದಾರೆ.

ಮಳೆಯ ನೀರಿನ ರಭಸಕ್ಕೆ ರಸ್ತೆಯ ಅಕ್ಕಪಕ್ಕದ ಜಮೀನಿಗೆ ನೀರು ನುಗ್ಗಿ ಭತ್ತದ ಬೆಳೆಯು ಕೊಚ್ಚಿಕೊಂಡು ಹೋಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಸಾಲಗಳನ್ನು ಮಾಡಿ ರೈತರು ಭತ್ತದ ಬೆಳೆ, ಇನ್ನಿತರ ಬೆಳೆಗಳನ್ನು ಬೇಸಾಯ ಮಾಡಿ ನಮಗೆ ಉತ್ತಮವಾಗಿ ಬೆಳೆ ಸಿಗುತ್ತದೆ ಎಂದು ಆಸೆ ಇಟ್ಟುಕೊಂಡಿದ್ದರು. ಆದರೆ ಮಳೆಯು ಕೆಲ ತಿಂಗಳುಗಳಿಂದ ನಿರಂತರವಾಗಿ ಎಡೆಬಿಡದೆ ಸುರಿಯುತ್ತಿದ್ದು, ರೈತ ಬೆಳೆದಿರುವ ಬೆಳೆಗಳು ಕೊಚ್ಚಿಹೋಗಿವೆ.

ರೈತರಿಗೆ ಅಪಾರ ಪ್ರಮಾಣದ ಹಾನಿ ಉಂಟಾಗುತ್ತಿರುವುದರಿಂದ ತಾಲೂಕು ಆಡಳಿತ ಹಾಗೂ ಸಂಬಂಧಿಸಿದ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮಗಳನ್ನು (ಪರಿಹಾರ) ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಮಂಡ್ಯದಲ್ಲಿ ಅಬ್ಬರಿಸಿದ ಮಳೆ: ಹಲವೆಡೆ ಅವಾಂತರ; ಆತಂಕದಲ್ಲಿ ಜನ!
ರಾತ್ರಿ ಸುರಿದ ಭಾರಿ ಮಳೆಗೆ ನೂರಾರು ಎಕರೆ ಜಮೀನು ಜಲಾವೃತಗೊಂಡಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗ್ರಾಮಗಳಾದ ಬಲ್ಲೇನಹಳ್ಳಿ, ಚಿಂದಗಿರಿಕೊಪ್ಪಲು ಸುತ್ತಮುತ್ತ ಗ್ರಾಮಗಳ ಜಮೀನು ಜಲಾವೃತಗೊಂಡಿದೆ. ಹಟ್ಟೆ ಹಳ್ಳ ಹರಿಯುವ ವ್ಯಾಪ್ತಿಯ ಜಮೀನುಗಳು ಜಲಾವೃತಗೊಂಡಿದ್ದು, ರಾತ್ರಿ 10 ಗಂಟೆಗೆ ಶುರುವಾದ ಮಳೆ ಮುಂಜಾನೆವರೆಗೂ ಸುರಿದ ಹಿನ್ನೆಲೆ ಹಳ್ಳ ತುಂಬಿ ಜಮೀನುಗಳಿಗೆ ಮಳೆ ನೀರು ನುಗ್ಗಿದೆ.
ಜಿಟಿಜಿಟಿ ಮಳೆಗೆ ನೆಲಕಚ್ಚಿದ ರಾಗಿ ಬೆಳೆ: ಕೈಗೆ ಬಂದ ತುತ್ತು ಬಾಯಿಗಿಲ್ಲ; ನಷ್ಟದಿಂದ ರೈತ ಕಂಗಾಲು!
ಕಬ್ಬು, ಭತ್ತ, ತೆಂಗು, ಅಡಕೆ ಸೇರಿದಂತೆ ಇತರೆ ಬೆಳೆಗಳು ಜಲಾವೃತಗೊಂಡಿದ್ದು, ರಾತ್ರಿ ಸುರಿದ ಮಳೆಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿ ಸಂಭವಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ