ಆ್ಯಪ್ನಗರ

ಬಿಸಿಲ ತಾಪ: ನಾಲ್ವರು ವಿದ್ಯಾರ್ಥಿನಿಯರು ಅಸ್ವಸ್ಥ

ವಿಕ ಸುದ್ದಿಲೋಕ ಮದ್ದೂರು ಹೆಚ್ಚುತ್ತಿರುವ ಬಿಸಿಲ ತಾಪಕ್ಕೆ ಪಟ್ಟಣದ ಕಿತ್ತೂರು ರಾಣಿಚೆನ್ನಮ್ಮ ವಸತಿ ನಿಲಯದ ನಾಲ್ವರು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಅವರನ್ನು ...

Vijaya Karnataka 12 Mar 2019, 5:00 am
ಮದ್ದೂರು: ಹೆಚ್ಚುತ್ತಿರುವ ಬಿಸಿಲ ತಾಪಕ್ಕೆ ಪಟ್ಟಣದ ಕಿತ್ತೂರು ರಾಣಿಚೆನ್ನಮ್ಮ ವಸತಿ ನಿಲಯದ ನಾಲ್ವರು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಅವರನ್ನು ಮದ್ದೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
Vijaya Karnataka Web hot temperatures four girls are sick in maddur
ಬಿಸಿಲ ತಾಪ: ನಾಲ್ವರು ವಿದ್ಯಾರ್ಥಿನಿಯರು ಅಸ್ವಸ್ಥ


ವಾರ್ಷಿಕ ಪರೀಕ್ಷೆ ಹಿನ್ನೆಲೆಯಲ್ಲಿ ಭಾನುವಾರ ವಸತಿ ನಿಲಯದಲ್ಲೇ ಇದ್ದು ಓದಿನಲ್ಲಿ ನಿರತರಾಗಿದ್ದ ವಿದ್ಯಾರ್ಥಿನಿಯರ ಪೈಕಿ ನಾಲ್ವರು ಜ್ವರ ಮತ್ತು ತೀವ್ರ ಬಳಲಿಕೆಯಿಂದ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ನಿಲಯಪಾಲಕಿ ಯಶೋಧಮ್ಮ ತಕ್ಷ ಣ ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆತಂದಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾದ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಲಾಗಿದ್ದು, ಸೋಮವಾರ ಸದರಿ ವಿದ್ಯಾರ್ಥಿನಿಯರು ಎಂದಿನಂತೆ ಪರೀಕ್ಷೆಗೆ ಹಾಜರಾಗಿದ್ದು, ಯಾವುದೇ ಆತಂಕವಿಲ್ಲ ವಾರ್ಡನ್‌ ಯಶೋದಮ್ಮ ತಿಳಿಸಿದ್ದಾರೆ.

ವಸತಿ ನಿಲಯದ ನಾಲ್ವರು ವಿದ್ಯಾರ್ಥಿನಿಯರು ಅಸ್ವಸ್ಥರಾದ ಹಿನ್ನೆಲೆಯಲ್ಲಿ ಪಾಲಕರು ಆತಂಕಕ್ಕೀಡಾಗಿದ್ದರು. ಈ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಆಶಾಲತಾ, ಡಿವೈಎಸ್‌ಪಿ ಶೈಲೇಂದ್ರ, ವೃತ್ತ ನಿರೀಕ್ಷ ಕ ಮಹೇಶ್‌ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.

ತಾಲೂಕು ಆರೋಗ್ಯಾಧಿಕಾರಿ, ಡಾ.ಆಶಾಲತಾ ಅವರು, ವಸತಿ ನಿಲಯಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದು, ಬಿಸಿಲ ಬೇಗೆ ಜತೆಗೆ ವಾರ್ಷಿಕ ಪರೀಕ್ಷೆ ಹಿನ್ನೆಲೆ ಒತ್ತಡದ ಕಾರಣ ಜ್ವರ, ತಲೆನೋವು ಕಾಣಿಸಿಕೊಂಡಿದೆ. ಚಿಕಿತ್ಸೆ ಬಳಿಕ ನಾಲ್ವರು ವಿದ್ಯಾರ್ಥಿನಿಯರು ಎಂದಿನಂತೆ ಪರೀಕ್ಷೆಗೆ ಹಾಜರಾಗಿದ್ದಾರೆ'' ಎಂದು 'ವಿಜಯ ಕರ್ನಾಟಕ'ಕ್ಕೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ