ಆ್ಯಪ್ನಗರ

ಹಸಿವಿನಿಂದ ಗಂಡು ಚಿರತೆ ಸಾವು

ತಾಲೂಕಿನ ಕನಗನಮರಡಿ ಗ್ರಾಮದ ಅರಣ್ಯ ಪ್ರದೇಶದ ಪಕ್ಕದ ಖಾಸಗಿ ಜಮೀನಿನೊಂದಲ್ಲಿ ಮೂರು ವರ್ಷದ ಗಂಡು ಚಿರತೆ ಹಸಿವಿನಿಂದ ಮೃತಪಟ್ಟಿದೆ.

Vijaya Karnataka 23 Jan 2019, 5:00 am
ಪಾಂಡವಪುರ: ತಾಲೂಕಿನ ಕನಗನಮರಡಿ ಗ್ರಾಮದ ಅರಣ್ಯ ಪ್ರದೇಶದ ಪಕ್ಕದ ಖಾಸಗಿ ಜಮೀನಿನೊಂದಲ್ಲಿ ಮೂರು ವರ್ಷದ ಗಂಡು ಚಿರತೆ ಹಸಿವಿನಿಂದ ಮೃತಪಟ್ಟಿದೆ.
Vijaya Karnataka Web hunger male leopard death
ಹಸಿವಿನಿಂದ ಗಂಡು ಚಿರತೆ ಸಾವು


ಹಸಿವಿನಿಂದ ಆಹಾರ ಹರಸಿಕೊಂಡು ಬಂದು ಕನಗನಮರಡಿಯ ಅರಣ್ಯ ಪ್ರದೇಶದ ಪಕ್ಕದಲ್ಲಿನ ರೈತ ಜಮೀನಿನೊಂದರಲ್ಲಿ ಮೃತಪಟ್ಟಿದೆ. ರೈತರು ಜಮೀನಿನ ಬಳಿ ಹೋದಂತಹ ಸಂದರ್ಭದಲ್ಲಿ ಚಿರತೆ ಮೃತಪಟ್ಟ ವಿಷಯ ಬೆಳಕಿಗೆ ಬಂದಿದೆ. ವಿಷಯ ತಿಳಿದ ಅರಣ್ಯ ಇಲಾಖೆಯ ಅಧಿಕಾರಿ ಶಿವಸಿದ್ದು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಚಿರತೆಯ ಮೈಮೇಲೆ ಯಾವುದೇ ಗಾಯದ ಗುರುತುಗಳು ಕಂಡುಬಾರದ ಹಿನ್ನೆಲೆಯಲ್ಲಿ ಚಿರತೆಯೂ ಹಸಿವಿನಿಂದ ಕಳೆದ ಎರಡು ಮೂರು ದಿನಗಳ ಹಿಂದೆಯೇ ಮೃತಪಟ್ಟಿರುಬಹುದು ಎಂದು ಅರಣ್ಯಾಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. ಅರಣ್ಯಾಧಿಕಾರಿಗಳು ಚಿರತೆ ಮೃತಪಟ್ಟಿರುವ ಸ್ಥಳಕ್ಕೆ ಪಶು ವೈದ್ಯರನ್ನು ಕರೆಸಿ ಸ್ಥಳದಲ್ಲಿಯೇ ಚಿರತೆ ಶವ ಪರೀಕ್ಷೆ ನಡೆಸಿ ಸ್ಥಳದಲ್ಲಿಯೇ ಸುಟ್ಟ ಹಾಕಿದ್ದಾರೆ. ಘಟನೆಯ ಸಂಬಂಧ ಪಟ್ಟಣದ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿರತೆಯ ಹಾವಳಿ: ತಾಲೂಕಿನ ಕನಗನಮರಡಿ, ಚಿಕ್ಕಮರಳಿ, ನುಗ್ಗಹಳ್ಳಿ, ಹಿರೇಮರಳಿ, ಚಿಕ್ಕಾಡೆ, ಪಟ್ಟಸೋಮನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದೆ. ಈ ಭಾಗದಲ್ಲಿ ಸಾಕಷ್ಟು ಆಡು, ಕುರಿ, ಹಸುಗಳನ್ನು ಬಲಿಪಡೆದಿದೆ. ಚಿಕ್ಕಮರಳಿ ಹಾಗೂ ಚಿಕ್ಕಾಡೆ ಸಮೀಪದ ಕುಂತಿಬೆಟ್ಟದಲ್ಲಿ ಬಯಲು ಪ್ರದೇಶದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿತ್ತು. ಇದಾದ ಬಳಿಕ ಇದೇ ಮೊದಲ ಬಾರಿಗೆ ಈ ಪ್ರದೇಶದಲ್ಲಿ ಚಿರತೆ ಹಸಿವಿನಿಂದ ಮೃತಪಟ್ಟಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ