ಶ್ರೀರಂಗಪಟ್ಟಣ: ಪತ್ನಿ ಮೈ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಆಕೆ ಸಾವಿಗೆ ಕಾರಣನಾಗಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಪಾಂಡವಪುರ ತಾಲೂಕಿನ ದೊಡ್ಡಬ್ಯಾಡರಹಳ್ಳಿ ಪ್ರಾಥಮಿಕ ಶಾಲಾ ಶಿಕ್ಷ ಕ ದೇವರಾಜು ಶಿಕ್ಷೆಗೆ ಗುರಿಯಾದವ. ಈತ ಪಾಂಡವಪುರದಲ್ಲಿ ಬಾಡಿಗೆ ಮನೆಯೊಂದರಲ್ಲಿ ಪತ್ನಿಯೊಂದಿಗೆ ವಾಸಿಸುತ್ತಿದ್ದು, 2016ರ ಜ.31ರಂದು ಪತ್ನಿ ರಾಜಮ್ಮ ಜತೆ ಜಗಳವಾಡಿ ನಂತರ ಆಕೆ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ರಾಜಮ್ಮ ಅವರನ್ನು ಚಿಕಿತ್ಸೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ರಾಜಮ್ಮ ಮೃತಪಟ್ಟಿದ್ದರು. ಈ ಸಂಬಂಧ ಮೃತ ರಾಜಮ್ಮ ಪೋಷಕರು ನೀಡಿದ್ದ ದೂರು ಆಧರಿಸಿ ತನಿಖೆ ನಡೆಸಿದ್ದ ಪೋಲಿಸರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪಟ್ಟಣದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಕಸನಪ್ಪ ನಾಯಕ್ ಆರೋಪಿ ದೇವರಾಜುಗೆ ಆರೋಪಿಗೆ ಕಲಂ 498(ಎ) ಅಡಿ 1 ವರ್ಷ ಶಿಕ್ಷೆ ಮತ್ತು 5 ಸಾವಿರ ರೂ ದಂಡ, ಕಲಂ 302 ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು 40 ಸಾವಿರ ರೂ ದಂಡ ತಪ್ಪಿದ್ದಲ್ಲಿ 6 ತಿಂಗಳ ಸಾದಾ ಸಜೆ ನೀಡಿ ತೀರ್ಪು ನೀಡಿ ಆದೇಶಿಸಿದ್ದಾರೆ. ಆರೋಪಿ ವಿರುದ್ಧ ಸರಕಾರಿ ಅಭಿಯೋಜಕರಾದ ಫಿರೋಜ್ ಖಾನ್ ವಾದ ಮಂಡಿಸಿದ್ದರು.
ಯುವಕನ ಮೇಲೆ ಚಿರತೆ ದಾಳಿ
ಶ್ರೀರಂಗಪಟ್ಟಣ: ತಾಲೂಕಿನ ಕೆ.ಶೆಟ್ಟಹಳ್ಳಿ ಮೀಸಲು ಅರಣ್ಯ ಪ್ರದೇಶ ಟಿ.ಎಂ.ಹೊಸೂರು ರಸ್ತೆ ಬಳಿ ಯುವಕನ ಮೇಲೆ ಬುಧವಾರ ತಡರಾತ್ರಿ ಎರಡು ಚಿರತೆಗಳು ದಾಳಿ ನಡೆಸಿ ಗಾಯಗೊಳಿಸಿವೆ.
ತಾಲೂಕಿನ ಕಾಳೇನಹಳ್ಳಿಯ ಮಹೇಶ್ ಚಿರತೆ ಗಾಯಗೊಂಡ ವ್ಯಕ್ತಿ. ಈತ ಮೈಸೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ಗ್ರಾಮಕ್ಕೆ ತೆರಳುತ್ತಿದ್ದಾಗ ಅರಣ್ಯ ಪ್ರದೇಶದ ಬಳಿಯ ರಸ್ತೆಯಲ್ಲಿ ಎರಡು ಚಿರತೆಗಳು ಏಕಾಏಕಿ ದಾಳಿ ನಡೆಸಿವೆ. ಆತ ಬೈಕ್ನಿಂದ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಯುವಕನ ಮೇಲೆ ಚಿರತೆಗಳು ಎರಗಲು ಮುಂದಾಗುತ್ತಿದ್ದಂತೆ ಹಿಂದಿನಿಂದ ರಸ್ತೆಯಲ್ಲಿ ಕಾರು ಬಂದಿದೆ. ಈ ವೇಳೆ ಕಾರಿನಲ್ಲಿದ್ದವರು ಕೆಳಗಿಳಿದಾಗ ಚಿರತೆಗಳು ಅರಣ್ಯದತ್ತ ಓಡಿ ಹೋಗಿವೆ. ನಂತರ ಅವರು ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ನಂತರ ಕೆ.ಶೆಟ್ಟಹಳ್ಳಿ ಮೀಸಲು ಅರಣ್ಯ ಇಲಾಖೆ ಕಚೇರಿ ಎದುರು ಜಮಾವಣೆಗೊಂಡ ಗ್ರಾಮಸ್ಥರು ಈ ಭಾಗದಲ್ಲಿ ಚಿರತೆಗಳು, ಸಾಕು ಪ್ರಾಣಿಗಳ ಮೇಲೆ ಮೇಲಿಂದ ಮೇಲೆ ದಾಳಿ ನಡೆಸುತ್ತಿವೆ. ಅವುಗಳನ್ನು ಸೆರೆ ಹಿಡಿಯುವಂತೆ ಮನವಿ ಮಾಡಿದ್ದರೂ, ಅರಣ್ಯ ಇಲಾಖೆ ಸಿಬ್ಬಂದಿ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.
ಪಾಂಡವಪುರ ತಾಲೂಕಿನ ದೊಡ್ಡಬ್ಯಾಡರಹಳ್ಳಿ ಪ್ರಾಥಮಿಕ ಶಾಲಾ ಶಿಕ್ಷ ಕ ದೇವರಾಜು ಶಿಕ್ಷೆಗೆ ಗುರಿಯಾದವ. ಈತ ಪಾಂಡವಪುರದಲ್ಲಿ ಬಾಡಿಗೆ ಮನೆಯೊಂದರಲ್ಲಿ ಪತ್ನಿಯೊಂದಿಗೆ ವಾಸಿಸುತ್ತಿದ್ದು, 2016ರ ಜ.31ರಂದು ಪತ್ನಿ ರಾಜಮ್ಮ ಜತೆ ಜಗಳವಾಡಿ ನಂತರ ಆಕೆ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ರಾಜಮ್ಮ ಅವರನ್ನು ಚಿಕಿತ್ಸೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ರಾಜಮ್ಮ ಮೃತಪಟ್ಟಿದ್ದರು. ಈ ಸಂಬಂಧ ಮೃತ ರಾಜಮ್ಮ ಪೋಷಕರು ನೀಡಿದ್ದ ದೂರು ಆಧರಿಸಿ ತನಿಖೆ ನಡೆಸಿದ್ದ ಪೋಲಿಸರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪಟ್ಟಣದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಕಸನಪ್ಪ ನಾಯಕ್ ಆರೋಪಿ ದೇವರಾಜುಗೆ ಆರೋಪಿಗೆ ಕಲಂ 498(ಎ) ಅಡಿ 1 ವರ್ಷ ಶಿಕ್ಷೆ ಮತ್ತು 5 ಸಾವಿರ ರೂ ದಂಡ, ಕಲಂ 302 ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು 40 ಸಾವಿರ ರೂ ದಂಡ ತಪ್ಪಿದ್ದಲ್ಲಿ 6 ತಿಂಗಳ ಸಾದಾ ಸಜೆ ನೀಡಿ ತೀರ್ಪು ನೀಡಿ ಆದೇಶಿಸಿದ್ದಾರೆ. ಆರೋಪಿ ವಿರುದ್ಧ ಸರಕಾರಿ ಅಭಿಯೋಜಕರಾದ ಫಿರೋಜ್ ಖಾನ್ ವಾದ ಮಂಡಿಸಿದ್ದರು.
ಯುವಕನ ಮೇಲೆ ಚಿರತೆ ದಾಳಿ
ಶ್ರೀರಂಗಪಟ್ಟಣ: ತಾಲೂಕಿನ ಕೆ.ಶೆಟ್ಟಹಳ್ಳಿ ಮೀಸಲು ಅರಣ್ಯ ಪ್ರದೇಶ ಟಿ.ಎಂ.ಹೊಸೂರು ರಸ್ತೆ ಬಳಿ ಯುವಕನ ಮೇಲೆ ಬುಧವಾರ ತಡರಾತ್ರಿ ಎರಡು ಚಿರತೆಗಳು ದಾಳಿ ನಡೆಸಿ ಗಾಯಗೊಳಿಸಿವೆ.
ತಾಲೂಕಿನ ಕಾಳೇನಹಳ್ಳಿಯ ಮಹೇಶ್ ಚಿರತೆ ಗಾಯಗೊಂಡ ವ್ಯಕ್ತಿ. ಈತ ಮೈಸೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ಗ್ರಾಮಕ್ಕೆ ತೆರಳುತ್ತಿದ್ದಾಗ ಅರಣ್ಯ ಪ್ರದೇಶದ ಬಳಿಯ ರಸ್ತೆಯಲ್ಲಿ ಎರಡು ಚಿರತೆಗಳು ಏಕಾಏಕಿ ದಾಳಿ ನಡೆಸಿವೆ. ಆತ ಬೈಕ್ನಿಂದ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಯುವಕನ ಮೇಲೆ ಚಿರತೆಗಳು ಎರಗಲು ಮುಂದಾಗುತ್ತಿದ್ದಂತೆ ಹಿಂದಿನಿಂದ ರಸ್ತೆಯಲ್ಲಿ ಕಾರು ಬಂದಿದೆ. ಈ ವೇಳೆ ಕಾರಿನಲ್ಲಿದ್ದವರು ಕೆಳಗಿಳಿದಾಗ ಚಿರತೆಗಳು ಅರಣ್ಯದತ್ತ ಓಡಿ ಹೋಗಿವೆ. ನಂತರ ಅವರು ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ನಂತರ ಕೆ.ಶೆಟ್ಟಹಳ್ಳಿ ಮೀಸಲು ಅರಣ್ಯ ಇಲಾಖೆ ಕಚೇರಿ ಎದುರು ಜಮಾವಣೆಗೊಂಡ ಗ್ರಾಮಸ್ಥರು ಈ ಭಾಗದಲ್ಲಿ ಚಿರತೆಗಳು, ಸಾಕು ಪ್ರಾಣಿಗಳ ಮೇಲೆ ಮೇಲಿಂದ ಮೇಲೆ ದಾಳಿ ನಡೆಸುತ್ತಿವೆ. ಅವುಗಳನ್ನು ಸೆರೆ ಹಿಡಿಯುವಂತೆ ಮನವಿ ಮಾಡಿದ್ದರೂ, ಅರಣ್ಯ ಇಲಾಖೆ ಸಿಬ್ಬಂದಿ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.