ಆ್ಯಪ್ನಗರ

ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಸೂಕ್ತ ಸ್ಥಳ ಗುರುತಿಸಿ: ಸಿಇಒ

ವಿಕ ಸುದ್ದಿಲೋಕ ಮಂಡ್ಯ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯ ಮಟ್ಟದ ಸಮಿತಿ ಸೂಚಿಸಿದಂತೆ ಘನ ಮತ್ತು ದ್ರವ ತ್ಯಾಜ್ಯದ ಸರ್ಮಪಕ ನಿರ್ವಹಣೆಗಾಗಿ ಸ್ಥಳ ಗುರುತಿಸುವ ...

Vijaya Karnataka 21 May 2019, 5:00 am
ಮಂಡ್ಯ: ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯ ಮಟ್ಟದ ಸಮಿತಿ ಸೂಚಿಸಿದಂತೆ ಘನ ಮತ್ತು ದ್ರವ ತ್ಯಾಜ್ಯದ ಸರ್ಮಪಕ ನಿರ್ವಹಣೆಗಾಗಿ ಸ್ಥಳ ಗುರುತಿಸುವ ಕೆಲಸವನ್ನು ಗ್ರಾಮ ಪಂಚಾಯಿತಿಗಳು ತ್ವರಿತವಾಗಿ ಮಾಡಬೇಕು ಎಂದು ಜಿಲ್ಲಾ ಪಂಚಾಯತಿ ಪ್ರಭಾರ ಸಿಇಒ ಎನ್‌.ಡಿ.ಪ್ರಕಾಶ್‌ ನಿರ್ದೇಶನ ನೀಡಿದ್ದಾರೆ.
Vijaya Karnataka Web identify the location of solid and liquid waste disposal mandya zp ceo
ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಸೂಕ್ತ ಸ್ಥಳ ಗುರುತಿಸಿ: ಸಿಇಒ


ನಗರದ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೋಮವಾರ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್‌ ನಿಷೇಧ, ಮನೆ ಹಂತದಲ್ಲಿಯೇ ಹಸಿ ಮತ್ತು ಒಣ ಕಸ ವಿಂಗಡಣೆ, ನೈರ್ಮಲ್ಯದ ಸುಸ್ಥಿರತೆ ಕಾಯ್ದುಕೊಳ್ಳುವ ಸಂಬಂಧ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಹಸಿ ಕಸವನ್ನು ಮನೆ ಹಂತದಲ್ಲಿಯೇ ನಿರ್ವಹಿಸಲು ಅನುಕೂಲವಾಗುವಂತೆ ಮಹಾತ್ಮ ಗಾಂಧಿಧಿ ನರೇಗಾ ಯೋಜನೆಯಡಿ ಕಾಂಪೋಸ್ಟ್‌ ಪಿಟ್‌ಗಳನ್ನು ನಿರ್ಮಿಸಲು ಒತ್ತು ನೀಡಬೇಕು. ಹಾಗೆಯೇ ಒಣ ಕಸವನ್ನು ಸಂಗ್ರಹಿಸಿ ಸ್ಥಳೀಯವಾಗಿ ಮಾರಾಟ ಮಾಡುವ ಮೂಲಕ ಒಣ ಕಸವನ್ನು ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳು ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಕುರಿತು ಕ್ರಿಯಾ ಯೋಜನೆಯನ್ನು ಸಕಾಲದಲ್ಲಿ ಸಿದ್ಧಪಡಿಸಿ ಜಿಲ್ಲಾ ಪಂಚಾಯತಿಗೆ ಸಲ್ಲಿಸಬೇಕು ಎಂದರು. ರಾಜ್ಯ ಸಮಾಲೋಚಕರಾದ ನಮ್ರತಾ ಮತ್ತು ಮಹಮ್ಮದ್‌ ಇಡ್ರಿಸ್‌ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾಹಿತಿ ನೀಡಿದರು. ಉಪ ಕಾರ್ಯದರ್ಶಿ(ಅಭಿವೃದ್ಧಿ) ಡಾ.ಎಂ.ಕೃಷ್ಣರಾಜು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ