ಆ್ಯಪ್ನಗರ

ಕೆಆರ್‌ಎಸ್‌ ಹೊರ ಹರಿವು ಹೆಚ್ಚಳ: ಮುಂಜಾಗ್ರತೆಗೆ ಸೂಚನೆ

ಮುಂಜಾಗ್ರತೆಗೆ ಸೂಚನೆ ವಿಕ ಸುದ್ದಿಲೋಕ ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ) ಕೊಡಗಿನಲ್ಲಿಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿತಾಲೂಕಿನ ಕೆಆರ್‌ಎಸ್‌ ಅಣೆಕಟ್ಟೆಗೆ 31 ಸಾವಿರ ...

Vijaya Karnataka 6 Sep 2019, 5:00 am
ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ಕೊಡಗಿನಲ್ಲಿಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿತಾಲೂಕಿನ ಕೆಆರ್‌ಎಸ್‌ ಅಣೆಕಟ್ಟೆಗೆ 31 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ಕಾವೇರಿ ನದಿಗೆ 43 ಸಾವಿರ ಕ್ಯೂಸೆಕ್‌ ನೀರು ಹರಿಸಲಾಗುತ್ತಿದೆ. ಹೀಗಾಗಿ ನದಿ ಪಾತ್ರದ ಜನರು ಸುರಕ್ಷಿತ ಪ್ರದೇಶಕ್ಕೆ ತೆರಳಲು ಕಾವೇರಿ ನೀರಾವರಿ ನಿಗಮ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
Vijaya Karnataka Web increased krs outflow a note on precaution
ಕೆಆರ್‌ಎಸ್‌ ಹೊರ ಹರಿವು ಹೆಚ್ಚಳ: ಮುಂಜಾಗ್ರತೆಗೆ ಸೂಚನೆ


ಬುಧವಾರ 10ರಿಂದ 25 ಸಾವಿರ ನೀರು ನದಿಗೆ ಹರಿದು ಬಂದಿತ್ತು. ಗುರುವಾರ ಒಳ ಹರಿವಿನ ಪ್ರಮಾಣ 25ರಿಂದ 50 ಸಾವಿರ ಕ್ಯೂಸೆಕ್‌ಗೆ ಹೆಚ್ಚಾಗಿದೆ. ಹಾಗಾಗಿ ನದಿ ಪಾತ್ರದ ಜನರನ್ನು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ ಎಂದು ಕಾವೇರಿ ನೀರಾವರಿ ನಿಗಮ ಕಾರ‍್ಯಪಾಲಕ ಎಂಜಿನಿಯರ್‌ ರಾಜು ಮಾಹಿತಿ ನೀಡಿದ್ದಾರೆ.

ಜಲಾಶಯ ಈಗಾಗಲೇ ಭರ್ತಿಯಾಗಿದ್ದು, ಕಾವೇರಿ ಕಣಿವೆಯಲ್ಲಿಮತ್ತೆ ಮಳೆ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿನದಿಗೆ ಹೆಚ್ಚಿನ ಒಳ ಹರಿವು ಬರುತ್ತಿದೆ. ಈಗಾಗಲೇ ಜಲಾಶಯದಲ್ಲಿಅಗತ್ಯಕ್ಕೆ ತಕ್ಕಷ್ಟು ನೀರು ಭರ್ತಿ ಮಾಡಿಕೊಂಡಿದ್ದು, ಜಲಾಶಯದ ಹಿತದೃಷ್ಟಿಯಿಂದ ಒಳ ಹರಿವಿಗಿಂತ ಹೆಚ್ಚಿನ ಪ್ರಮಾಣದ ನೀರನ್ನು ಕಾವೇರಿ ನದಿಗೆ ಹರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಂಗನತಿಟ್ಟಿನಲ್ಲಿದೋಣಿ ವಿಹಾರ ಸ್ಥಗಿತ

ಜಲಾಶಯ ತಗ್ಗು ಪ್ರದೇಶದಲ್ಲಿರುವ ರಂಗನತಿಟ್ಟು ಪಕ್ಷಿಧಾಮದಲ್ಲಿಕಾವೇರಿ ನದಿಯಿಂದ ಹೆಚ್ಚು ಪ್ರಮಾಣದಲ್ಲಿನೀರು ಹರಿಯುತ್ತಿರುವುದರಿಂದ ಪ್ರವಾಸಿಗರ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ. ಉದ್ಯಾನವನ ವೀಕ್ಷಣೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಪಕ್ಷಿಧಾಮ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ