ಆ್ಯಪ್ನಗರ

ಸಾಲಮನ್ನಾಕ್ಕೆ ಒತ್ತಾಯ: ಪ್ರತಿಭಟನೆ

ಕೇಂದ್ರ ಸರಕಾರ ರಾಷ್ಟ್ರೀಕತ ಬ್ಯಾಂಕ್‌ಗಳಲ್ಲಿನ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿ ರೈತ ಹಾಗೂ ಕಾರ್ಮಿಕ ಕಾಂಗ್ರೆಸ್ ಘಟಕದ ಕಾರ‌್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ವಿಕ ಸುದ್ದಿಲೋಕ 7 Jun 2017, 5:15 am
ಪಾಂಡವಪುರ: ಕೇಂದ್ರ ಸರಕಾರ ರಾಷ್ಟ್ರೀಕತ ಬ್ಯಾಂಕ್‌ಗಳಲ್ಲಿನ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿ ರೈತ ಹಾಗೂ ಕಾರ್ಮಿಕ ಕಾಂಗ್ರೆಸ್ ಘಟಕದ ಕಾರ‌್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.
Vijaya Karnataka Web insist on debt relief protest
ಸಾಲಮನ್ನಾಕ್ಕೆ ಒತ್ತಾಯ: ಪ್ರತಿಭಟನೆ


ಪಟ್ಟಣದ ಮಿನಿ ವಿಧಾನಸೌಧದ ಎದುರು ಕಾಂಗ್ರೆಸ್ ರೈತ ಮತ್ತು ಕಾರ್ಮಿಕ ಸಂಘಟನೆಯ ಅಧ್ಯಕ್ಷ ಸಿ.ಆರ್.ರಮೇಶ್ ನೇತತ್ವದಲ್ಲಿ ಜಮಾಹಿಸಿದ ಕಾರ‌್ಯಕರ್ತರು ಕೇಂದ್ರ ಸರಕಾರ ವಿರುದ್ಧ ಘೋಷಣೆಕೂಗಿ ಆಕ್ರೋಶವ್ಯಕ್ತಪಡಿಸಿದರು. ತಹಸೀಲ್ದಾರ್ ಡಿ.ಹನುಮಂತರಾಯಪ್ಪ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಕಳೆದ ಮೂರು ವರ್ಷದಿಂದ ಭೀಕರವಾದ ಬರಗಾಲ ಎದುರಾಗಿದೆ. ರಾಜ್ಯದ ರೈತರು ಸಾಕಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಆದರೆ, ಕೇಂದ್ರ ಸರಕಾರ ಮಾತ್ರ ರೈತರ ಬಗ್ಗೆ ಆಲೋಚನೆಯನ್ನೇ ಮಾಡುತ್ತಿಲ್ಲ. ರಾಜ್ಯ ಸರಕಾರ ರೈತರ ಸಹಕಾರಿ ಬ್ಯಾಂಕ್‌ನಲ್ಲಿರುವ ಸಾಲಮನ್ನಾ ಮಾಡಲು ಆಲೋಚನೆ ನಡೆಸುತ್ತಿದ್ದೆ ಆದರೆ, ಇದಕ್ಕೆ ಕೇಂದ್ರ ಸರಕಾರ ಕೈಜೋಡಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಳೆದ ಹಲವು ವರ್ಷಗಳಿಂದ ರಾಜ್ಯದಲ್ಲಿ ಸಾಲಬಾಧೆ ತಾಳಲಾರದೆ ನೂರಾರು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ರಾಜ್ಯ ಸರಕಾರ 5 ಲಕ್ಷ ರೂ.ಪರಿಹಾರ ನೀಡುತ್ತಿದೆ. ಆದರೆ, ಕೇಂದ್ರ ಸರಕಾರ ಮಾತ್ರ ಯಾವ ಯೋಜನೆ ನೀಡಲು ಮುಂದಾಗಿಲ್ಲ. ಸಾವಿರಾರು ಕೋಟಿ ಸಾಲ ಮಾಡಿ ದೇಶಬಿಟ್ಟು ಹೋಗಿರುವ ವ್ಯಕ್ತಿಗೆ ಸಾವಿರ ಕೋಟಿ ಸಾಲಮನ್ನಾ ಮಾಡುವ ಕೇಂದ್ರಕ್ಕೆ ರೈತರ ಸಾಲಮನ್ನಾ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.

ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಿ.ಆರ್.ರಮೇಶ್, ಎಚ್.ಕಷ್ಣೇಗೌಡ(ಕಿಟ್ಟಿ), ಡಿ.ಹುಚ್ಚೇಗೌಡ, ವಡ್ಡರಹಳ್ಳಿಮಹೇಶ್, ಕುಬೇರ, ಸಿ.ಚನ್ನಪ್ಪ, ನಜೀರ್‌ಅಹಮದ್, ಗೋಪಾಲ್, ವಿಶ್ವನಾಥ್, ಲೋಕೇಶ್ ಸೇರಿದಂತೆ ಹಲವರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ