ಆ್ಯಪ್ನಗರ

ಅಚ್ಚುಕಟ್ಟು ನಾಲೆಗೆ ನೀರು ಹರಿಸಲು ಒತ್ತಾಯ: ಮನವಿ

ಕೆಆರ್‌ಎಸ್ ಜಲಾಶಯದಿಂದ ಅಚ್ಚುಕಟ್ಟು ವ್ಯಾಪ್ತಿಯ ಎಲ್ಲಾ ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ಮಂಡ್ಯ ರಕ್ಷಣಾ ವೇದಿಕೆ ಕಾರ‌್ಯಕರ್ತರು ಶನಿವಾರ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

Vijaya Karnataka 22 Apr 2018, 5:15 am
ಶ್ರೀರಂಗಪಟ್ಟಣ: ಕೆಆರ್‌ಎಸ್ ಜಲಾಶಯದಿಂದ ಅಚ್ಚುಕಟ್ಟು ವ್ಯಾಪ್ತಿಯ ಎಲ್ಲಾ ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ಮಂಡ್ಯ ರಕ್ಷಣಾ ವೇದಿಕೆ ಕಾರ‌್ಯಕರ್ತರು ಶನಿವಾರ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
Vijaya Karnataka Web insist on tap water to water appeal
ಅಚ್ಚುಕಟ್ಟು ನಾಲೆಗೆ ನೀರು ಹರಿಸಲು ಒತ್ತಾಯ: ಮನವಿ


ಪಟ್ಟಣದ ಮಿನಿವಿಧಾನಸೌಧ ಕಚೇರಿಗೆ ತೆರಳಿದ ಕಾರ‌್ಯಕರ್ತರು ಕೆಆರ್‌ಎಸ್ ಜಲಾಶಯ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಲಕ್ಷಾಂತರ ಎಕರೆ ಪ್ರದೇಶದಲ್ಲಿ ರೈತರು ಭತ್ತ, ಕಬ್ಬು ಇತರ ಬೆಳೆಗಳನ್ನು ಬೆಳೆದಿದ್ದಾರೆ. ಈ ಹಿಂದೆ ಕಾವೇರಿ ನೀರಾವರಿ ಸಲಹಾ ಸಮಿತಿ ನಾಲೆಗಳಿಗೆ ನೀರು ಹರಿಸುವುದಾಗಿ ಭರವಸೆ ನೀಡಿದ ಮೇಲೆ ರೈತರ ಬಿತ್ತನೆ ಆರಂಭಿಸಿ ದ್ದೆವು ಎಂದರು.

ಇದೀಗ ಭತ್ತದ ಬೆಳೆ ಗರ್ಭ ಕಟ್ಟುವ ಹಂತಕ್ಕೆ ಬಂದಿದೆ. ಇನ್ನೂ ಒಂದು ಕಟ್ಟು ನೀರನ್ನು 15 ದಿನಗಳ ಕಾಲ ಹರಿಸಿದರೆ ಭತ್ತದ ಬೆಳೆ ರೈತನ ಕೈ ಸೇರುತ್ತದೆ ಇಲ್ಲದಿ ದ್ದರೆ ರೈತರು ಬೆಳೆ ನಷ್ಟ ಅನುಭವಿಸ ಬೇಕಾಗುತ್ತದೆ ಎಂದು ದೂರಿದರು. ಶೀಘ್ರ ನಾಲೆಗಳಿಗೆ ನೀರು ಹರಿಸಬೇಕು ರೈತರು ಬೆಳೆದಿರುವ ಭತ್ತದ ಬೆಳೆಯನ್ನು ಉಳಿಸಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ತಹಸೀಲ್ದಾರ್ ಡಿ.ನಾಗೇಶ್ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಕಳುಹಿಸುತ್ತೇನೆ ಅವರ ನಿರ್ದೇಶನ ದಂತೆ ನೀರು ಹರಿಸುವ ತೀರ್ಮಾನ ಕೈಗೊಳ್ಳ ಲಾಗುವುದು ಎಂದು ಭರವಸೆ ನೀಡಿದರು.
ಮಂಡ್ಯ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಬೀಡಾ ಬಾಬು, ಪದಾಧಿಕಾರಿಗಳಾದ ಬಾಳೆಹಣ್ಣುಮಂಜು, ಬಿ.ಸಿ ರವಿ, ರಾಜೇಶ್, ದೀಪಕ್, ಭಾಗ್ಯಮ್ಮ, ವೀಣಾಬಾಬು ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ