ಆ್ಯಪ್ನಗರ

ಐಟಿ ದಾಳಿ: ಪಾಂಡವಪುರ, ಚಿನಕುರಳಿ ಪ್ರತಿಭಟನೆ

ವಿಕ ಸುದ್ದಿಲೋಕ ಪಾಂಡವಪುರ ಚಿನಕುರಳಿಯ ಸಚಿವ ಸಿಎಸ್‌...

Vijaya Karnataka 29 Mar 2019, 5:00 am
ಪಾಂಡವಪುರ: ಚಿನಕುರಳಿಯ ಸಚಿವ ಸಿ.ಎಸ್‌.ಪುಟ್ಟರಾಜು ಸೋದರ ಪುತ್ರದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಖಂಡಿಸಿ ಜೆಡಿಎಸ್‌ ಪಕ್ಷ ದ ಕಾರ‍್ಯಕರ್ತರು, ಮುಖಂಡರು ಚಿನಕುರಳಿಯಲ್ಲಿ ರಸ್ತೆ ತಡೆದು ಐಟಿ ಅಧಿಕಾರಿಗಳು, ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Vijaya Karnataka Web it raid on jds leaders house protest in mandya pandavapura
ಐಟಿ ದಾಳಿ: ಪಾಂಡವಪುರ, ಚಿನಕುರಳಿ ಪ್ರತಿಭಟನೆ


ಚಿನಕುರಳಿಯಲ್ಲಿ ಮೈಸೂರು-ಕೆ.ಆರ್‌.ಪೇಟೆ ಮುಖ್ಯರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿದ ಕಾರ‍್ಯಕರ್ತರು ಐಟಿ ಅಧಿಕಾರಿಗಳ ದಾಳಿಗೆ ಆಕ್ರೋಶ ವ್ಯಕ್ತಪಡಿಸಿದರು. ಪಕ್ಷೇತರ ಅಭ್ಯರ್ಥಿ ಸುಮಲತ ವಿರುದ್ಧವೂ ಘೋಷಣೆಕೂಗಿದ ಕಾರ‍್ಯಕರ್ತರು ಚುನಾವಣೆಯಲ್ಲಿ ನಿಖಿಲ್‌ಕುಮಾರಸ್ವಾಮಿ ಜಯಗಳಿಸಲಿದ್ದಾರೆ ಎಂದು ಘೋಷಣೆ ಕೂಗಿದರು.

ಕೇಂದ್ರದ ಬಿಜೆಪಿ ಸರಕಾರ ಚುನಾವಣೆಯ ಸಂದರ್ಭದಲ್ಲಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಜೆಡಿಎಸ್‌-ಕಾಂಗ್ರೆಸ್‌ ಪಕ್ಷ ದ ಸಚಿವರ ಮೇಲೆ ಐಟಿ ಅಧಿಕಾರಿಗಳಿಂದ ದಾಳಿ ನಡೆಸಲಾಗಿದೆ. ಐಟಿ ಅಧಿಕಾರಿಗಳು ಕೇಂದ್ರ ಸರಕಾರದ ಏಜೆಂಟ್‌ಗಳಂತೆ ವರ್ತಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಧೈರ್ಯವಿಲ್ಲದೆ ಪಕ್ಷೇತರ ಅಭ್ಯರ್ಥಿ ಸುಮಲತ ಅವರಿಗೆ ಬೆಂಬಲ ಸೂಚಿಸಿರುವ ಬಿಜೆಪಿ ಪಕ್ಷ ಪಕ್ಷೇತರ ಅಭ್ಯರ್ಥಿಯ ಗೆಲುವಿಗೆ ಅಡ್ಡಿಯಾಗಿರುವ ಸಚಿವ ಸಿ.ಎಸ್‌.ಪುಟ್ಟರಾಜು ಮನೆಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಕಿಡಿಕಾರಿದರು.

ಐಟಿ ದಾಳಿಯಿಂದ ಜಿಲ್ಲೆಯ ಜೆಡಿಎಸ್‌ ಕಾರ‍್ಯಕರ್ತರಿಗೆ ಚುನಾವಣೆಯಲ್ಲಿ ಮತ್ತಷ್ಟು ಸ್ಫೂರ್ತಿಬಂದಂತಾಗಿದೆ. ಐಟಿ ದಾಳಿ ನಡೆಸಿರುವ ಬಿಜೆಪಿಯವರಿಗೆ ಚುನಾವಣೆಯ ಮೂಲಕ ಉತ್ತರ ಕೊಡುತ್ತೇವೆ ಎಂದು ಹರಿಹಾಯ್ದರು.

ಪಟ್ಟಣದಲ್ಲೂ ಪ್ರತಿಭಟನೆ: ಪಾಂಡವಪುರ ಪಟ್ಟಣದಲ್ಲೂ ಐಟಿ ದಾಳಿ ಖಂಡಿಸಿ ಜೆಡಿಎಸ್‌ ಕಾರ‍್ಯಕರ್ತರು ಪ್ರತಿಭಟನೆ ನಡೆಸಿದರು.

ಪಟ್ಟಣದ ಐದು ದೀಪವೃತ್ತದಲ್ಲಿ ಜಮಾಹಿಸಿದ ಪ್ರತಿಭಟನೆಕಾರರು ಶ್ರೀರಂಗಪಟ್ಟಣ-ಜೇವರ್ಗಿ ಮುಖ್ಯರಸ್ತೆ ಪಡೆದು ಸುಮಾರು 20 ನಿಮಿಷಕ್ಕೂ ಅಧಿಕ ಕಾಲ ಪ್ರತಿಭಟನೆ ನಡೆಸಿದರು. ಚುನಾವಣೆಯ ಸಂದರ್ಭದಲ್ಲಿ ಸಚಿವ ಸಿ.ಎಸ್‌.ಪುಟ್ಟರಾಜು ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವುದು ರಾಜಕೀಯ ಪ್ರೇರಿತ ಎಂದು ಆಕ್ರೋಶವ್ಯಕ್ತಪಡಿಸಿದರು. ಜೆಡಿಎಸ್‌ ತಾಲೂಕು ಅಧ್ಯಕ್ಷ ಎಚ್‌.ಇ.ಧರ್ಮರಾಜು, ಮುಖಂಡರಾದ ರಾಮಕೃಷ್ಣೇಗೌಡ, ತಾಪಂ ಸದಸ್ಯರಾದ ಸಿ.ಎಸ್‌.ಗೋಪಾಲೇಗೌಡ, ವಿ.ಎಸ್‌.ನಿಂಗೇಗೌಡ, ಗ್ರಾಪಂ ಅಧ್ಯಕ್ಷ ಅರಳಕುಪ್ಪೆ ಮಹದೇವು, ಮನ್‌ಮುಲ್‌ ಮಾಜಿ ಅಧ್ಯಕ್ಷ ವೈರಮುಡಿಗೌಡ ಸೇರಿದಂತೆ ಹಲವಾರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ