ಆ್ಯಪ್ನಗರ

ಮದ್ದೂರು: ಹಾಡಹಗಲೇ ಜೆಡಿಎಸ್‌ ಮುಖಂಡನ ಹತ್ಯೆ

ರಾಜಕಾರಣದಲ್ಲಿ ಸಕ್ರಿಯವಾಗಿದ್ದ ಪ್ರಕಾಶ್ ಅವರನ್ನು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ.

Vijaya Karnataka Web 24 Dec 2018, 5:29 pm
ಮಂಡ್ಯ: ಮದ್ದೂರಿನ ಪ್ರವಾಸಿ ಮಂದಿರ ಆವರಣದಲ್ಲಿ ಸೋಮವಾರ ಹಾಡಹಗಲೇ ಕತ್ತು ಕೊಯ್ದು ವ್ಯಕ್ತಿಯ ಕೊಲೆ ಮಾಡಲಾಗಿದೆ.
Vijaya Karnataka Web ಜೆಡಿಎಸ್‌ ಮುಖಂಡ ಪ್ರಕಾಶ್‌
ಜೆಡಿಎಸ್‌ ಮುಖಂಡ ಪ್ರಕಾಶ್‌


ಜಿ.ಪಂ. ಮಾಜಿ ಅಧ್ಯಕ್ಷೆ ಲಲಿತ ಅವರ ಪತಿ, ಜೆಡಿಎಸ್ ಮುಖಂಡ ಪ್ರಕಾಶ್(48) ಕೊಲೆಯಾದ ವ್ಯಕ್ತಿ. ಕಾರಿನಲ್ಲಿ ಇವರನ್ನು ಕತ್ತು ಕೊಯ್ದು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ.

ಪ್ರವಾಸಿ ಮಂದಿರ ಆವರಣದಲ್ಲಿ ನಿಂತಿದ್ದ ಕಾರಿನಲ್ಲಿ ಪ್ರಕಾಶ್ ಅವರ ಶವ ಪತ್ತೆಯಾಗಿದೆ.

ರಾಜಕಾರಣದಲ್ಲಿ ಸಕ್ರಿಯವಾಗಿದ್ದ ಪ್ರಕಾಶ್ ಅವರನ್ನು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ.

2016ರ ಡಿಸೆಂಬರ್‌ನಲ್ಲಿ ತೊಪ್ಪನಹಳ್ಳಿ ಗ್ರಾಮದಲ್ಲಿ ಸಂಭವಿಸಿದ್ದ ಜೆಡಿಎಸ್ ಕಾರ್ಯಕರ್ತರ ಜೋಡಿ ಕೊಲೆ ಪ್ರಕರಣದಿಂದಾಗಿ ಗ್ರಾಮದಲ್ಲಿ ಪರಿಸ್ಥಿತಿಯಲ್ಲಿ ಈವರೆಗೆ ಬೂದಿ ಮುಚ್ಚಿದ ಕೆಂಡದಂತಿತ್ತು.

ಈ ಘಟನೆ ಹಿನ್ನೆಲೆಯಲ್ಲಿ ಪ್ರಕಾಶ್ ಅವರ ಕೊಲೆ ನಡೆದಿರಬಹುದು ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ