ಆ್ಯಪ್ನಗರ

ಕೆ.ಆರ್‌ ಪೇಟೆ ತಹಶೀಲ್ದಾರ್‌ ನಾಪತ್ತೆ: ಅಪಹರಣ ಶಂಕೆ

ಕೆ.ಆರ್‌.ಪೇಟೆ ತಹಶೀಲ್ದಾರ್ ಮಹೇಶ್‌ ಚಂದ್ರ ಅವರನ್ನು ಅಪಹರಣ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

Vijaya Karnataka Web 3 Aug 2018, 5:17 pm
ಮಂಡ್ಯ : ಕೆ.ಆರ್‌.ಪೇಟೆ ತಹಶೀಲ್ದಾರ್ ಮಹೇಶ್‌ ಚಂದ್ರ ಅವರನ್ನು ಅಪಹರಣ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
Vijaya Karnataka Web krpete.


ಶುಕ್ರವಾರ ಕರ್ತವ್ಯಕ್ಕೆ ರಜೆ ಹಾಕಿದ್ದ ಮಹೇಶ್‌ ಚಂದ್ರ, ಬೆಂಗಳೂರಿಗೆ ತೆರಳುವುದಾಗಿ ಹೇಳಿದ್ದಾರೆ. ಆದರೆ ಚಿಕ್ಕವಡ್ಡೆಗುಡಿ ಬಳಿಕ ಮಹೇಶ್‌ ಅವರ ಕಾರು ಪತ್ತೆಯಾಗಿದ್ದು, ಕಾರಿನೊಳಗೆ ಅವರು ಧರಿಸಿದ್ದ ಬಟ್ಟೆಗಳು ಹರಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಈ ಸಂಬಂಧ ಭೇರ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ಈ ಹಿಂದೆ ಮೈಸೂರಿನ ಕೆ.ಆರ್‌. ನಗರದಲ್ಲಿ ತಹಶೀಲ್ದಾರ್‌ ಆಗಿದ್ದ ಅವರು, ಒಂದು ವಾರ ಹಿಂದಷ್ಟೇ ಕೆ.ಆರ್‌ ಪೇಟೆಗೆ ವರ್ಗವಾಗಿ ಅಧಿಕಾರ ವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ