ಆ್ಯಪ್ನಗರ

ಸೇತುವೆಗೆ ಕಾರು ಡಿಕ್ಕಿ: ನಾಲ್ವರ ಸ್ಥಿತಿ ಗಂಭೀರ

ತಾಲೂಕಿನ ಬೊಮ್ಮೇನಹಳ್ಳಿಯ ಬಳಿಯ ಭೇರ್ಯ-ಕೆ.ಆರ್‌.ಪೇಟೆ ಮುಖ್ಯರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Vijaya Karnataka 30 May 2018, 5:00 am
ಕೆ.ಆರ್‌.ಪೇಟೆ: ತಾಲೂಕಿನ ಬೊಮ್ಮೇನಹಳ್ಳಿಯ ಬಳಿಯ ಭೇರ್ಯ-ಕೆ.ಆರ್‌.ಪೇಟೆ ಮುಖ್ಯರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Vijaya Karnataka Web kr pete mandya bommenahally car accident four person injured
ಸೇತುವೆಗೆ ಕಾರು ಡಿಕ್ಕಿ: ನಾಲ್ವರ ಸ್ಥಿತಿ ಗಂಭೀರ


ಮಂಡ್ಯದಿಂದ ಅರಕಲಗೂಡಿಗೆ ತೆರಳುತ್ತಿದ್ದ ಮಂಡ್ಯದ ತಮ್ಮಣ್ಣಗೌಡ(65), ಅವರ ಪತ್ನಿ ಸಾವಿತ್ರಮ್ಮ(58), ತಮ್ಮಣ್ಣಗೌಡರ ಪುತ್ರ ಹಾಗೂ ಕಾರು ಚಾಲಕ ಧರ್ಮ(42), ಧರ್ಮ ಅವರ ಪತ್ನಿ ಲೋಲಾಕ್ಷಿ(38) ಗಾಯಗೊಂಡವರು.

ಕಾರು ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿಹೊಡೆದಿದ್ದು, ಕೂದಲೆಳೆಯ ಅಂತರದಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗ್ರಾಮಾಂತರ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ಕೆ.ಎನ್‌.ಗಿರೀಶ್‌ ಅವರು ಅಪಘಾತ ನಡೆದ ಸುದ್ದಿಯನ್ನು ತಿಳಿದು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಸ್ವಲ್ಪ ದೂರ ತಮ್ಮ ವಾಹನದಲ್ಲಿ ನಂತರ ಆಂಬ್ಯುಲೆನ್ಸ್‌ ವಾಹನದಲ್ಲಿ ಕರೆ ತಂದು ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ಕಳುಹಿಸಲು ನೆರವಾದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ