ಆ್ಯಪ್ನಗರ

ಕೆ.ಆರ್‌.ಪೇಟೆ: ಮಿನಿವಿಧಾನ ಸೌಧಕ್ಕೆ ಮುತ್ತಿಗೆ

ವಿಕ ಸುದ್ದಿಲೋಕ ಕೆಆರ್‌...

Vijaya Karnataka 25 May 2018, 5:00 am
ಕೆ.ಆರ್‌.ಪೇಟೆ: ತಮಿಳುನಾಡಿನ ತೂತುಕುಡಿಯಲ್ಲಿ ಪರಿಸರಕ್ಕೆ ಹಾನಿಯುಂಟು ಮಾಡುತ್ತಿದ್ದ ತಾಮ್ರ ಕಂಪನಿಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗೋಲಿಬಾರ್‌ ನಡೆಸಿ 12 ಮಂದಿ ರೈತರ ಕಗ್ಗೋಲೆ ಮಾಡಿರುವ ತಮಿಳುನಾಡು ಸರಕಾರ ವಿರುದ್ಧ ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಪಟ್ಟಣದ ಮಿನಿವಿಧಾನ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
Vijaya Karnataka Web kr pete protester block mini vidhana soudha
ಕೆ.ಆರ್‌.ಪೇಟೆ: ಮಿನಿವಿಧಾನ ಸೌಧಕ್ಕೆ ಮುತ್ತಿಗೆ


ತಾಲೂಕು ರೈತ ಸಂಘದ ಅಧ್ಯಕ್ಷ ಮುರುವನಹಳ್ಳಿ ಶಂಕರ್‌ ನೇತೃತ್ವದಲ್ಲಿ ಮಿನಿವಿಧಾನಸೌಧದ ಮುಂದೆ ಜಮಾಯಿಸಿದ ನೂರಾರು ರೈತ ಸಂಘದ ಕಾರ್ಯಕರ್ತರು, ತಮಿಳುನಾಡು ಸರಕಾರದ ವಿರುದ್ಧ ಘೋಷಣೆ ಕೂಗಿದರು. ಗೋಲಿಬಾರ್‌ ನಡೆಸಿದ ಪೊಲೀಸ್‌ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮೃತಪಟ್ಟ ರೈತ ಕುಟುಂಬಕ್ಕೆ ಕನಿಷ್ಠ 25 ಲಕ್ಷ ರೂ.ಪರಿಹಾರ ನೀಡಬೇಕು, ಮೃತ ರೈತರ ಕುಟುಂಬಕ್ಕೆ ಸರಕಾರಿ ಉದ್ಯೋಗ ನೀಡಬೇಕೆಂದು ಒತ್ತಾಯಿಸಿದರು.

ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 24ಗಂಟೆಯಲ್ಲಿ ರೈತರ ಎಲ್ಲಾ ಸಾಲಗಳನ್ನು ಮನ್ನಾ ಮಾಡುವುದಾಗಿ ಚುನಾವಣಾ ಪ್ರಚಾರದ ವೇಳೆ ಪ್ರಣಾಳಿಕೆ ನೀಡಿ ಭರವಸೆ ನೀಡಿದ್ದರು. ಹಾಗೆಯೇ ವೃದ್ಧರಿಗೆ 5 ಸಾವಿರ ರೂ.ಮಾಸಾಶನ, ಬಾಣಂತಿಯರಿಗೆ ಮಾಸಿಕ 5 ಸಾವಿರ ರೂ.ನಂತೆ 6ತಿಂಗಳು ಪ್ರೋತ್ಸಾಹ ಧನ, ಮಹಿಳಾ ಸ್ವಸಹಾಯ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಈಗ ಅವರು ಮುಖ್ಯಮಂತ್ರಿ ಸ್ಥಾನ ಪಡೆದಿರುವುದರಿಂದ ಕೂಡಲೇ ತಾವು ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುವ ಮೂಲಕ ಕೊಟ್ಟ ಮಾತು ಉಳಿಸಿಕೊಳ್ಳಬೇಕು, ಅಲ್ಲದೆ ರೈತರ ಪ್ರತಿ ಟನ್‌ ಕಬ್ಬಿಗೆ ಕನಿಷ್ಠ 4 ಸಾವಿರ ರೂ ನಿಗದಿ ಮಾಡಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಮರುವನಹಳ್ಳಿ ಶಂಕರ್‌ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಒತ್ತಾಯಿಸಿದರು.

ತಾಲೂಕು ರೈತ ಸಂಘದ ನಾರಾಯಣಸ್ವಾಮಿ, ರೈತ ಮುಖಂಡರಾದ ಬೂಕನಕೆರೆ ನಾಗರಾಜು, ಮುದ್ದುಕುಮಾರ್‌, ಕಾರಿಗನಹಳ್ಳಿ ಪುಟ್ಟೇಗೌಡ, ಮಿಲ್‌ ರಾಜಣ್ಣ, ಕರೋಠಿ ತಮ್ಮಯ್ಯ, ಚೌಡೇನಹಳ್ಳಿ ಕೃಷ್ಣೇಗೌಡ, ಮಡುವಿನಕೋಡಿ ಪ್ರಕಾಶ್‌, ಹೊಸಕೋಟೆ ನಾಗರಾಜು, ಹಕ್ಕಿಮಂಚನಹಳ್ಳಿ ಹೊನ್ನೇಗೌಡ, ಮಾಕವಳ್ಳಿ ರವಿ, ಗೋವಿಂದನಹಳ್ಳಿ ಶಿವಪ್ಪ, ಮೃತ್ಯಂಜಯಪ್ಪ, ಲಕ್ಷ್ಮೀಪುರ ಜಯರಾಂ, ನಾಗರಾಜು, ಕುಮಾರ್‌, ಸಿಂಧಘಟ್ಟ ನಂದೀಶ್‌ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನೆಯ ನಂತರ ತಹಸೀಲ್ದಾರ್‌ ಗುರುಸಿದ್ದಯ್ಯ ಹಿರೇಮಠ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಸಿಪಿಐ ವೆಂಕಟೇಶಯ್ಯ, ಸಬ್‌ಇನ್ಸ್‌ ಪೆಕ್ಟರ್‌ ರವರಾದ ಎಚ್‌.ಎಸ್‌.ವೆಂಕಟೇಶ್‌, ಗಿರೀಶ್‌, ಸತೀಶ್‌ ನೇತೃತ್ವದಲ್ಲಿ ಬಿಗಿಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ