ಆ್ಯಪ್ನಗರ

ಕೆಆರ್‌ಎಸ್‌ ಹೊರಹರಿವು ಹೆಚ್ಚಳ: ನದಿಪಾತ್ರದ ಜನರಿಗೆ ಎಚ್ಚರಿಕೆ

ಕೆಆರ್‌ಎಸ್‌ ಅಣೆಕಟ್ಟೆಯ ಮೇಲ್ಭಾಗದ ಪ್ರದೇಶಗಳಲ್ಲಿ ಮುಂದುವರಿದ ಮಳೆಯಿಂದಾಗಿ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸೂಚಿಸಿದ್ದಾರೆ.

Vijaya Karnataka 10 Aug 2018, 5:00 am
ಶ್ರೀರಂಗಪಟ್ಟಣ: ಕೆಆರ್‌ಎಸ್‌ ಅಣೆಕಟ್ಟೆಯ ಮೇಲ್ಭಾಗದ ಪ್ರದೇಶಗಳಲ್ಲಿ ಮುಂದುವರಿದ ಮಳೆಯಿಂದಾಗಿ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಾಗಿದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸೂಚಿಸಿದ್ದಾರೆ.
Vijaya Karnataka Web krs outflow increase warning for river worthy people
ಕೆಆರ್‌ಎಸ್‌ ಹೊರಹರಿವು ಹೆಚ್ಚಳ: ನದಿಪಾತ್ರದ ಜನರಿಗೆ ಎಚ್ಚರಿಕೆ


ಅಣೆಕಟ್ಟೆಯ ಗರಿಷ್ಠ ಮಟ್ಟ 124.80 ಅಡಿಗಳಾಗಿದ್ದು, ಪ್ರಸ್ತುತ 124.25 ಅಡಿ ಶೇಖರಣೆಯಾಗಿದೆ. ಅಣೆಕಟ್ಟೆಗೆ 12710 ಕ್ಯೂಸೆಕ್‌ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಭದ್ರತಾ ದೃಷ್ಟಿಯಿಂದ ಗುರುವಾರ ಬೆಳಗ್ಗೆಯಿಂದಲೇ 40 ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಿಡುತ್ತಿರುವುದರಿಂದ ಕೆಆರ್‌ಎಸ್‌ ಜಲಾಶಯದ ಕೆಳಭಾಗದ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಅಣೆಕಟ್ಟೆಗೆ ಬುಧವಾರ ಸಂಜೆ 6,284 ಕ್ಯೂಸೆಕ್‌ನಷ್ಟು ಒಳ ಹರಿವಿತ್ತು. ಗುರುವಾರ ಬೆಳಗ್ಗೆ 12,710 ಕ್ಯೂಸೆಕ್‌ ಒಳ ಹರಿವು ಹೆಚ್ಚಾದ ಪರಿಣಾಮ ಬೆಳಗ್ಗೆ 4,713 ಕ್ಯೂಸೆಕ್‌ನಷ್ಟಿದ್ದ ಹೊರ ಹರಿನ ಪ್ರಮಾಣವನ್ನು 20 ಸಾವಿರ ಕ್ಯೂಸೆಕ್‌ಗೆ ಹೆಚ್ಚಳ ಮಾಡಲಾಗಿತ್ತು. ಇದೀಗ ಹೊರ ಹರಿವಿನ ಪ್ರಮಾಣ 40 ಸಾವಿರ ಕ್ಯೂಸೆಕ್‌ ಆಗಿದೆ.

ರಂಗನತಿಟ್ಟು ಬೋಟಿಂಗ್‌ ಮತ್ತೆ ಸ್ಥಗಿತ

ಕೆಆರ್‌ಎಸ್‌ನಿಂದ ಹೆಚ್ಚಿನ ನೀರು ಬಿಡುಗಡೆಯಾಗುತ್ತಿರುವುದರಿಂದ ಶ್ರೀರಂಗಪಟ್ಟಣದ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್‌ ಅನ್ನು ಪುನಃ ಸ್ಥಗಿತಗೊಳಿಸಲಾಗಿದೆ. ಕಾವೇರಿ ನದಿ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದ ಪರಿಣಾಮ ಜು. 14ರಿಂದ ಸುಮಾರು 11 ದಿನಗಳ ಕಾಲ ಬೋಟಿಂಗ್‌ ಸ್ಥಗಿತಗೊಳಿಸಲಾಗಿತ್ತು. ಜು. 26ರಿಂದ ಮತ್ತೆ ನದಿಯಲ್ಲಿ ನೀರಿನ ಹರಿನ ಪ್ರಮಾಣ ಕಡಿಮೆಯಾಗಿದ್ದರಿಂದ ಬೋಟಿಂಗ್‌ ಆರಂಭಿಸಲಾಗಿತ್ತು. ಆದರೆ, ಆ. 9ರಂದು ಬೆಳಗ್ಗೆ ಮತ್ತೆ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನದಿ ಮೂಲಕ ಹರಿಸಲಾಗುತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕೆಆರ್‌ಎಸ್‌ ನೀರಾವರಿ ನಿಗಮದ ಅಧಿಕಾರಿಗಳ ಸೂಚನೆ ಮೇರೆಗೆ ರಂಗನತಿಟ್ಟು ಸಹಾಯಕ ವಲಯ ಅರಣ್ಯಾಧಿಕಾರಿಗಳು ಬೋಟಿಂಗ್‌ ಸ್ಥಗಿತ ಗೊಳಿಸಿ ಕ್ರಮಕೈಗೊಂಡಿದ್ದಾರೆ. ದೋಣಿ ವಿಹಾರಕ್ಕಾಗಿ ಆಗಮಿಸಿದ ಅರ್ಧದಷ್ಟು ಪ್ರವಾಸಿಗರು ಬೇಸರದಿಂದ ಹಿಂದಿರುಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ