ಆ್ಯಪ್ನಗರ

ಸಾರಿಗೆ ಬಸ್‌ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಸಾವು

ಬೈಕ್‌ ಸವಾರ ಸ್ಥಳದಲ್ಲೇ ಸಾವು

Vijaya Karnataka 7 May 2019, 8:07 pm
ನಾಗಮಂಗಲ (ಮಂಡ್ಯ ಜಿಲ್ಲೆ): ಹೆದ್ದಾರಿಯಲ್ಲಿ ತಿರುವು ತೆಗೆದುಕೊಳ್ಳುತ್ತಿದ್ದ ಬೈಕ್‌ಗೆ ಸಾರಿಗೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಕುಳಿತಿದ್ದ ಬಾಲಕ ಗಾಯಗೊಂಡಿದ್ದಾನೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ರಸ್ತೆಯಲ್ಲೇ ಶವವಿಟ್ಟು ಪ್ರತಿಭಟನೆ ನಡೆಸಿದರು.
Vijaya Karnataka Web ksrtc bus accident persan death in nagamanagala taluk
ಸಾರಿಗೆ ಬಸ್‌ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಸಾವು


ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಹಡೇನಹಳ್ಳಿ ಗ್ರಾಮದ ಲೇಟ್‌ ರಾಮೇಗೌಡರ ಪುತ್ರ ಲಕ್ಷ ್ಮಣಗೌಡ (40) ಮೃತರು. ಹಿಂಬದಿ ಕುಳಿತಿದ್ದ ಪುತ್ರ ಶಂಕರ್‌ ಗಾಯಗೊಂಡಿರುವ ಬಾಲಕ.

ಕದಬಹಳ್ಳಿ ಸರ್ಕಲ್‌ನಿಂದ ಗ್ರಾಮಕ್ಕೆ ತೆರಳುವ ಸಲುವಾಗಿ ಬೈಕ್‌ ಅನ್ನು ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಿರುವು ಪಡೆದುಕೊಳ್ಳುತ್ತಿದ್ದ ವೇಳೆ ಹಾಸನದಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಗಾಯಗೊಂಡ ಬಾಲಕ ಶಂಕರ್‌ನನ್ನು ಸಮೀಪದ ಆದಿಚುಂಚನಗರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಗೆ ಸ್ಪೀಡ್‌ ಬ್ರೇಕರ್‌ ಅಳವಡಿಸಿದ್ದರೂ ಚಾಲಕನ ನಿರ್ಲಕ್ಷ ್ಯತೆಯಿಂದ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರಸ್ತೆತಡೆ: ಘಟನೆಯನ್ನು ಖಂಡಿಸಿ ಸ್ಥಳೀಯರು ಹೆದ್ದಾರಿಯ ಕದಬಹಳ್ಳಿ ಸರ್ಕಲ್‌ನಲ್ಲಿ ಶವವಿಟ್ಟು ಅರ್ಧಗಂಟೆಗೂ ಹೆಚ್ಚು ಕಾಲ ದಿಢೀರ್‌ ಪ್ರತಿಭಟನೆ ನಡೆಸಿದರು. ಇದರಿಂದಾಗಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಜಿಲ್ಲಾ ಅಡಿಷನಲ್‌ ಎಸ್ಪಿ ಬಲರಾಮೇಗೌಡ, ವೃತ್ತ ನಿರೀಕ್ಷ ಕ ನಂಜಪ್ಪ ಹಾಗೂ ಬಿಂಡಿಗನವಿಲೆ ಪೊಲೀಸ್‌ ಠಾಣೆಯ ಪಿಎಸ್‌ಐ ಬಸವರಾಜು ಬಸ್‌ ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸುವ, ಜತೆಗೆ ಸರಕಾರದಿಂದ ಸಿಗಬಹುದಾದ ಪರಿಹಾರ ಹಣ ಕೊಡಿಸುವ ಭರವಸೆ ಬಳಿಕ ಪ್ರತಿಭಟನೆ ಕೈಬಿಡಲಾಯಿತು.

ನಂತರ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು. ಘಟನೆಯಲ್ಲಿ ಬೈಕ್‌ ಸಂಪೂರ್ಣ ಜಖಂಗೊಂಡಿದ್ದು, ಬೈಕ್‌ ಮತ್ತು ಸಾರಿಗೆ ಬಸ್‌ ಅನ್ನು ವಶಕ್ಕೆ ಪಡೆದುಕೊಂಡಿರುವ ಬಿಂಡಿಗನವಿಲೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ