ಆ್ಯಪ್ನಗರ

ಕೆಎಸ್ಸಾರಿಟಿಸಿ ಬಸ್‌ ಬ್ರೇಕ್‌ ವೈಫಲ್ಯ: ತಪ್ಪಿದ ಅನಾಹುತ

ಮಂಡ್ಯದಿಂದ ಮೈಸೂರು ಕಡೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಬ್ರೇಕ್‌ ಫೇಲ್‌ ಆಗಿ ರಸ್ತೆ ಬದಿಯ ತೆಂಗಿನ ಮರಕ್ಕೆ ಡಿಕ್ಕಿಯಾಗಿದ್ದು, ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.

Vijaya Karnataka 21 Oct 2019, 5:00 am
ಶ್ರೀರಂಗಪಟ್ಟಣ: ಮಂಡ್ಯದಿಂದ ಮೈಸೂರು ಕಡೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಬ್ರೇಕ್‌ ಫೇಲ್‌ ಆಗಿ ರಸ್ತೆ ಬದಿಯ ತೆಂಗಿನ ಮರಕ್ಕೆ ಡಿಕ್ಕಿಯಾಗಿದ್ದು, ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.
Vijaya Karnataka Web MDY20SRP3_17


ಭಾನುವಾರ ಮಂಡ್ಯ ಕಡೆಯಿಂದ ಮೈಸೂರಿಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ತಾಲೂಕಿನ ಅರಕೆರೆ ಬಳಿಯ ಮಂಡ್ಯಕೊಪ್ಪಲು ಗ್ರಾಮದ ಬಳಿ ಬರುತ್ತಿದ್ದಂತೆ ಬ್ರೇಕ್‌ ಫೇಲ್‌ ಆಗಿದೆ. ಇದರಿಂದ ಎಚ್ಚೆತ್ತ ಬಸ್‌ ಚಾಲಕ ಚರಂಡಿಗೆ ಬಸ್‌ ಇಳಿಸಿದ್ದಾನೆ. ಆ ವೇಳೆ ರಸ್ತೆ ಬದಿಯಲ್ಲಿದ್ದ ತೆಂಗಿನ ಮರಕ್ಕೂ ಬಸ್‌ ಡಿಕ್ಕಿಯಾಗಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದರು. ಬಸ್‌ನಲ್ಲಿ 15 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲಎಂದು ಅರಕೆರೆ ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ