ಆ್ಯಪ್ನಗರ

ಮಂಡ್ಯ: 58 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ತಿಂಗಳೊಳಗೆ ಚಾಲನೆ

ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಸಕ್ಕರೆ ಕಾರ್ಖಾನೆಯನ್ನು ಸರಕಾರಿ ಸ್ವಾಮ್ಯದಲ್ಲಿ ನಡೆಸುತ್ತೇವೆ ಎಂದು ಭರವಸೆ ನೀಡಿ ಜಿಲ್ಲೆಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಇನ್ನು 2-3 ತಿಂಗಳಲ್ಲಿ ಸಕ್ಕರೆ ಕಾರ್ಖಾನೆ ಪುನಶ್ಚೇತನ ಕಾರ್ಯ ನಡೆಯಲಿದೆ

Vijaya Karnataka Web 21 Oct 2021, 9:51 pm
ಮಂಡ್ಯ: ದುದ್ದ ಹೋಬಳಿಯ ಸಮಗ್ರ ಅಭಿವೃದ್ಧಿ ಚಿತ್ರಣ ಇಟ್ಟುಕೊಂಡು ಹೋಬಳಿಯ ಮನೆ ಮಗನ ರೀತಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಕೆಲಸ ಮಾಡುತ್ತ ಬಂದಿದ್ದೇನೆ ಎಂದು ಶಾಸಕ ಸಿ.ಎಸ್‌. ಪುಟ್ಟರಾಜು ತಿಳಿಸಿದರು.
Vijaya Karnataka Web ಸಿಎಸ್‌ ಪುಟ್ಟರಾಜು
ಸಿಎಸ್‌ ಪುಟ್ಟರಾಜು


ಮಂಡ್ಯ ತಾಲೂಕಿನ ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದುದ್ದದ ದೊಡ್ಡ ಕೆರೆಗೆ ಗುರುವಾರ ಬಾಗಿನ ಅರ್ಪಿಸಿ, ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಆಲಿಸಿ ಬಳಿಕ ಮಾತನಾಡಿದರು.

ಮೈಷುಗರ್‌ ಕಾರ್ಖಾನೆ ಹೋರಾಟದಲ್ಲಿ ಜಯ: ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಸಂತಸ

ಕಾವೇರಿ ನದಿಯಿಂದ 185 ಕೋಟಿ ರೂ. ವೆಚ್ಚದಲ್ಲಿದುದ್ದ ಹೋಬಳಿಯ 58 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇನ್ನೊಂದು ತಿಂಗಳಲ್ಲಿಅನುಷ್ಠಾನಗೊಳ್ಳಲಿದೆ. 2018 ರಲ್ಲಿ 14 ತಿಂಗಳು ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯಾಗಿದೆ ಎಂದು ಹೇಳಿದರು.

ಹಲವಾರು ವಷUರ್‍ಗಳಿಂದ ಮಂಡ್ಯ ಮೈಷುಗರ್‌ ಕಾರ್ಖಾನೆ ಸರಕಾರಿ ಸ್ವಾಮ್ಯದಲ್ಲಿ ನಡೆಯಬೇಕೆಂದು ಜಿಲ್ಲೆಯ ರೈತರು, ಜನಪ್ರತಿನಿಧಿಗಳು, ಪ್ರಗತಿಪರ ಸಂಘಟನೆಗಳು ಹೋರಾಟ ಮಾಡುತ್ತಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಸಕ್ಕರೆ ಕಾರ್ಖಾನೆಯನ್ನು ಸರಕಾರಿ ಸ್ವಾಮ್ಯದಲ್ಲಿ ನಡೆಸುತ್ತೇವೆ ಎಂದು ಭರವಸೆ ನೀಡಿ ಜಿಲ್ಲೆಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಇನ್ನು ಎರಡು-ಮೂರು ತಿಂಗಳಲ್ಲಿ ಸಕ್ಕರೆ ಕಾರ್ಖಾನೆ ಪುನಶ್ಚೇತನ ಕಾರ್ಯ ನಡೆಯಲಿದೆ ಎಂದರು.

ಕೆಎಆರ್‌ಎಸ್‌ನಲ್ಲಿ ಬಣ್ಣದ ಬೆಳಕಿನ ಆಟ: ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ ಕೆಆರ್‌ಎಸ್‌ ಬೃಂದಾವನ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತಂದೆ ಎಸ್‌.ಆರ್‌. ಬೊಮ್ಮಾಯಿ ಅವರು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಸಮಕಾಲೀನ ರಾಜಕಾರಣ ಮಾಡಿದವರು. ಅವರೂ ಮಂಡ್ಯ ಜಿಲ್ಲೆಯ ಬಗ್ಗೆ ಕಾಳಜಿ ಹೊಂದಿದ್ದರು ಎಂದು ತಿಳಿಸಿದರು.

ದುದ್ದ ಹೋಬಳಿಯ ಮಲ್ಲನಾಯಕನಕಟ್ಟೆ ಹಾಗೂ ಜಿ. ಮಲ್ಲಿಗೆರೆ ಗ್ರಾಮದಲ್ಲಿರುವಂತೆ ದುದ್ಧ ಹೋಬಳಿಯ ಕೇಂದ್ರ ಸ್ಥಾನದಲ್ಲಿ6.80 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್‌ ಉಪ ಕೇಂದ್ರ ಸ್ಥಾಪನೆಗೆ ಟೆಂಡರ್‌ ಆಗಿದ್ದು, ಬರುವ ಬೇಸಿಗೆಯೊಳಗೆ ಕೆಲಸ ಪೂರ್ಣಗೊಳಿಸಲಾಗುವುದು. ಇದರಿಂದ ರೈತರಿಗೆ ನೀರಾವರಿ ಜೊತೆಗೆ ವಿದ್ಯುತ್‌ ದೊರಕಿದರೆ ಕೃಷಿ ಚಟುವಟಿಕೆಗೆ ಹೆಚ್ಚಿನ ಅನುಕೂಲ ಆಗುತ್ತದೆ ಎಂದು ತಿಳಿಸಿದರು.

ಮನ್‌ಮುಲ್‌ ಅಧ್ಯಕ್ಷ ಬಿ.ಆರ್‌. ರಾಮಚಂದ್ರ, ಗ್ರಾಪಂ ಅಧ್ಯಕ್ಷೆ ಬಸಮ್ಮಣಿ, ಉಪಾಧ್ಯಕ್ಷ ಶ್ರೇಯಸ್‌ಗೌಡ, ತಾಪಂ ಮಾಜಿ ಸದಸ್ಯ ಎಚ್‌.ಬಿ. ಬೆಟ್ಟಸ್ವಾಮಿ, ಜೆಡಿಎಸ್‌ ಮುಖಂಡರಾದ ಮಲ್ಲ ನಾಯಕನಕಟ್ಟೆ ಸಿದ್ದೇಗೌಡ, ಬಾಲರಾಜು, ಪುರದ ಕೊಪ್ಪಲು ಶಂಕರೇಗೌಡ, ಕೆ.ಬಿ. ಸಿದ್ದೇಗೌಡ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ