ಆ್ಯಪ್ನಗರ

ಮೈಸೂರು-ಬೆಂಗಳೂರು ಹೆದ್ದಾರಿಗೆ ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡದೆ ವಂಚನೆ, ರೈತರ ಆರೋಪ

ಕಾಮಗಾರಿ ಕಳಪೆಯಿಂದ ಕೂಡಿದ್ದು, ಹಲವು ಭಾಗಗಳಲ್ಲಿನಿರ್ಮಿಸಬೇಕಾದ ಕೆಳ ಸೇತುವೆಯನ್ನು ನಿರ್ಮಿಸದೆ ಹಾಗೂ ಎಕ್ಸಿಂಟ್‌ ಪಾಯಿಂಟ್‌ ನೀಡದೆ ಅವೈಜ್ಞಾನಿಕವಾಗಿ ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದಾರೆ ಎಂದು ಆಕ್ಷೇಪಿಸಿದರು.

Vijaya Karnataka Web 21 Sep 2021, 6:44 pm
ಮದ್ದೂರು: ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿ ನಡೆಸುವ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ವಶಪಡಿಸಿಕೊಂಡಿದ್ದ ರೈತರ ಜಾಗಕ್ಕೆ ಸೂಕ್ತ ಪರಿಹಾರ ವಿತರಿಸದೆ ವಂಚಿಸುತ್ತಿದ್ದಾರೆಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Vijaya Karnataka Web ಮೈಸೂರು
ಮೈಸೂರು


ತಾಲೂಕಿನ ಗೆಜ್ಜಲಗೆರೆ ಗ್ರಾಮದ ಮೈಸೂರು, ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ರೈತರಿಂದ ಪಡೆದ ಸ್ಥಳಕ್ಕೆ ಸೂಕ್ತ ಬೆಲೆ ನೀಡುವಂತೆ ಒತ್ತಾಯಿಸಿದರು.

ಹೆದ್ದಾರಿ ನಿರ್ಮಾಣ ಮಾಡುವ ಸಲುವಾಗಿ ರೈತರಿಂದ ವಶಪಡಿಸಿಕೊಂಡಿದ್ದ ಸ್ಥಳಕ್ಕೆ ಕಡಿಮೆ ಹಣ ನೀಡಿ ರೈತರನ್ನು ಮತ್ತು ಸಾರ್ವಜನಿಕರನ್ನು ವಂಚಿಸುತ್ತಿದ್ದು ಅಧಿಕಾರಿಗಳು ಜಾಗವನ್ನು ಪಡೆಯುವ ಮುನ್ನ ಉತ್ತಮ ಬೆಲೆ ನೀಡುವುದಾಗಿ ತಿಳಿಸಿ ಬಳಿಕ ತಾರತಮ್ಯ ಎಸಗುತ್ತಿದ್ದಾರೆಂದು ಆರೋಪಿಸಿದರು.

ಅಲ್ಲದೇ ಕಾಮಗಾರಿ ಕಳಪೆಯಿಂದ ಕೂಡಿದ್ದು, ಹಲವು ಭಾಗಗಳಲ್ಲಿನಿರ್ಮಿಸಬೇಕಾದ ಕೆಳ ಸೇತುವೆಯನ್ನು ನಿರ್ಮಿಸದೆ ಹಾಗೂ ಎಕ್ಸಿಂಟ್‌ ಪಾಯಿಂಟ್‌ ನೀಡದೆ ಅವೈಜ್ಞಾನಿಕವಾಗಿ ಹೆದ್ದಾರಿ ಕಾಮಗಾರಿ ನಡೆಸುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ರೈತರು ಮತ್ತು ಸಾರ್ವಜನಿಕರಿಗೆ ಹಲವು ರೀತಿಯಲ್ಲಿ ತೊಂದರೆಯಾಗಿದ್ದು, ಈ ಸಂಬಂಧ ಸಂಸದೆ ಸುಮಲತಾ ಅಂಬರೀಷ್‌ ಮಧ್ಯಪ್ರವೇಶಿಸಿ ರೈತರಿಗೆ ವೈಜ್ಞಾನಿಕ ಪರಿಹಾರ ಕೊಡಿಸಬೇಕು ಹಾಗೂ ಉತ್ತಮ ಗುಣಮಟ್ಟದ ಕಾಮಗಾರಿ ನಡೆಯುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕೆಂದು ಮನವಿ ಮಾಡಿದರು.

ಹೆದ್ದಾರಿ ಅಗಲೀಕರಣ ಕಾಮಗಾರಿಗೆ ರೈತರು ನೀಡಿರುವ ಜಾಗಕ್ಕೆ ಸೂಕ್ತ ಪರಿಹಾರ ವಿತರಿಸದಿದ್ದಲ್ಲಿ ಸೆ.27ರ ಬಳಿಕ ಮಂಡ್ಯದ ಹೆದ್ದಾರಿ ಪ್ರಾಧಿಕಾರದ ಕಚೇರಿ ಎದುರು ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿ ಪ್ರತಿಭಟನೆ ಹಿಂಪಡೆದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ