ಆ್ಯಪ್ನಗರ

ಖಾಸಗಿ ಶಾಲೆ ವ್ಯಾಮೋಹ ಬಿಡಿ: ತೈಲೂರು ವೆಂಕಟಕೃಷ್ಣ

ಮದ್ದೂರು: ಸರಕಾರಿ ಶಾಲೆಗಳ ಉಳಿವಿಗೆ ಸರಕಾರ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಪೋಷಕರು ಇದರ ಸದುಪಯೋಗಕ್ಕೆ ಮುಂದಾಗುವಂತೆ ಸಾಹಿತಿ ತೈಲೂರು ವೆಂಕಟಕೃಷ್ಣ ತಿಳಿಸಿದರು.

Vijaya Karnataka 5 Sep 2018, 5:00 am
ಮದ್ದೂರು: ಸರಕಾರಿ ಶಾಲೆಗಳ ಉಳಿವಿಗೆ ಸರಕಾರ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಪೋಷಕರು ಇದರ ಸದುಪಯೋಗಕ್ಕೆ ಮುಂದಾಗುವಂತೆ ಸಾಹಿತಿ ತೈಲೂರು ವೆಂಕಟಕೃಷ್ಣ ತಿಳಿಸಿದರು.
Vijaya Karnataka Web leave a private school quote tailur venkatrakrishna
ಖಾಸಗಿ ಶಾಲೆ ವ್ಯಾಮೋಹ ಬಿಡಿ: ತೈಲೂರು ವೆಂಕಟಕೃಷ್ಣ


ತಾಲೂಕಿನ ಆತಗೂರು ಹೋಬಳಿಯ ತೈಲೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಕಾವೇರಿ ಗ್ರಾಮೀಣಬ್ಯಾಂಕ್‌ ಹಾಗೂ ಜೀವಿಕ ಪ್ರತಿಷ್ಠಾನ ಆಯೋಜಿಸಿದ್ದ ಉಚಿತ ಲೇಖನ ಸಾಮಗ್ರಿಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹವನ್ನು ಬದಿಗಿಟ್ಟು ತಮ್ಮ ಗ್ರಾಮದಲ್ಲೇ ಇರುವ ಸರಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡುವ ಮೂಲಕ ಸರಕಾರಿ ಶಾಲೆಗಳನ್ನು ಉಳಿಸುವಂತೆ ಮನವಿ ಮಾಡಿದರಲ್ಲದೇ ಸರಕಾರ ಬಿಸಿಯೂಟ, ಸಮವಸ್ತ್ರ ವಿತರಣೆ, ವಿದ್ಯಾರ್ಥಿವೇತನ, ಉಚಿತ ಬೈಸಿಕಲ್‌ ಸೇರಿದಂತೆ ಇನ್ನಿತರೆ ಹಲವಾರು ಉಪಯುಕ್ತ ಯೋಜನೆಯನ್ನು ಜಾರಿಗೊಳಿಸಿದ್ದು ಇದರ ಸದುಪಯೋಗಕ್ಕೆ ಮುಂದಾಗುವಂತೆ ಮನವಿ ಮಾಡಿದರು.

ಪ್ರಾಚೀನ ಪರಂಪರೆಯುಳ್ಳ ಶಿಲ್ಪ ಕಲೆಗಳನ್ನು ಉಳಿಸಿ ಬೆಳೆಸಬೇಕಾದುದ್ದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದ್ದು ಪ್ರಸಕ್ತ ದಿನಗಳಲ್ಲಿ ಮಾನವನ ದುರಾಸೆಯಿಂದಾಗಿ ಕೆರೆಕಟ್ಟೆಗಳು ಐತಿಹಾಸಿಕ ತಾಣಗಳು, ಹಳ್ಳಕೊಳ್ಳಗಳು ಕಣ್ಮರೆಯಾಗಿ ಬೃಹತ್‌ ಕೈಗಾರಿಕಾ ಪ್ರದೇಶಗಳಾಗಿ ನಿರ್ಮಾಣಗೊಳ್ಳುತ್ತಿರುವುದು ಆತಂಕಕ್ಕಾರಿ ಬೆಳವಣಿಗೆಯಾಗಿದ್ದು ಕೂಡಲೇ ವಿದ್ಯಾರ್ಥಿಗಳು ಜಾಗೃತರಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕೆಲಸಕ್ಕೆ ಮುಂದಾಗಬೇಕೆಂದರು.

ಜೀವಿಕ ಪ್ರತಿಷ್ಠಾನ ಹಾಗೂ ಕಾವೇರಿ ಗ್ರಾಮೀಣ ಬ್ಯಾಂಕ್‌ ವತಿಯಿಂದ ತೈಲೂರು ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ವೇಳೆ ಬ್ಯಾಂಕ್‌ ವ್ಯವಸ್ಥಾಪಕ ಘನಶ್ಯಾಂಆಳ್ವ, ಜೀವಿಕ ಪ್ರತಿಷ್ಠಾನದ ಅಧ್ಯಕ್ಷ ವಾಸು, ವಕೀಲ ಮಧುಸೂದನ್‌, ಎಸ್‌ಡಿಎಂಸಿ ಅಧ್ಯಕ್ಷ ಅಂಕೇಗೌಡ, ಮುಖಂಡರಾದ ಸಿದ್ದಯ್ಯ, ವೆಂಕಟೇಶ್‌, ಸಿದ್ದರಾಜು, ಮುಖ್ಯಶಿಕ್ಷ ಕ ಕೆ.ಪಿ. ನಾಗೇಶ್‌ ಸೇರಿದಂತೆ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ