ಆ್ಯಪ್ನಗರ

ಸ್ಥಳೀಯ ಸಂಸ್ಥೆ ಚುನಾವಣೆ: ನೋಡೆಲ್ ಅಧಿಕಾರಿಗಳ ನೇಮಕ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ. ಕೆ.ಆರ್ ಪೇಟೆ ಹಾಗೂ ಮಳವಳ್ಳಿ ಪುರಸಭೆಗೆ ಮೇ 29ರಂದು ನಡೆಯುವ ಚುನಾವಣೆಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಪಿ.ಸಿ ಜಾರ್ ಹೇಳಿದರು.

Vijaya Karnataka 5 May 2019, 9:05 pm
ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ. ಕೆ.ಆರ್ ಪೇಟೆ ಹಾಗೂ ಮಳವಳ್ಳಿ ಪುರಸಭೆಗೆ ಮೇ 29ರಂದು ನಡೆಯುವ ಚುನಾವಣೆಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಪಿ.ಸಿ ಜಾರ್ ಹೇಳಿದರು.
Vijaya Karnataka Web local organization election appointment of nodal officers
ಸ್ಥಳೀಯ ಸಂಸ್ಥೆ ಚುನಾವಣೆ: ನೋಡೆಲ್ ಅಧಿಕಾರಿಗಳ ನೇಮಕ


ತಾಲೂಕಿನ ರಂಗನತಿಟ್ಟು ಪಕ್ಷಿಧಾಮಕ್ಕೆ ಭಾನುವಾರ ಭೇಟಿ ನೀಡಿ ಸುದ್ದಿಗಾರರ ಜತೆ ಮಾತನಾಡಿದರು.

‘‘ಮೂರು ಕಡೆ ನಡೆಯುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತಾದಾರರ ಪಟ್ಟಿ ಸಿದ್ದಪಡಿಸಲಾಗಿದೆ. ಕೆಲವು ಕಡೆ ಎರಡು ಮೂರು ಕಡೆ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರಿದೆ ಎಂಬ ದೂರುಗಳು ಬಂದಿವೆ. ಶೀಘ್ರ ಪರಿಶೀಲನೆ ನಡೆಸಲಾಗುವುದು ಅಂತಹವರ ಹೆಸರನ್ನು ಕೈಬಿಟ್ಟು ನಿಖರ ವಿಳಾಸ ಇರುವ ಕಡೆಗಳಲ್ಲಿ ಮಾತ್ರ ಉಳಿಸಲಾಗುವುದು ಎಂದು ಹೇಳಿದರು.

‘‘ವ್ಯವಸ್ಥಿತವಾಗಿ ಚುನಾವಣೆ ನಡೆಸಲಾಗು ವುದು. ವಾರ್ಡ್‌ವಾರು ಅಭ್ಯರ್ಥಿಗಳ ಮೀಸಲಾತಿ ಯಲ್ಲಿ ಲೋಪವಾಗಿಲ್ಲ. ಮೀಸಲಾತಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬಂದಿಲ್ಲ,’’ ಎಂದು ಸ್ಪಷ್ಟಪಡಿಸಿದರು.

‘‘ಶಿಕ್ಷಣ ಪದ್ಧತಿಯಲ್ಲಿ ಸುಧಾರಣೆ ತರುವ ಅಗತ್ಯವಿದೆ. ಖಾಸಗಿ ಶಾಲೆಗಳಲ್ಲಿ ಅಧಿಕ ಶುಲ್ಕ ತೆಗೆದುಕೊಳ್ಳುತ್ತಿರುವ ಸಂಬಂಧ ವ್ಯಾಪಕ ದೂರುಗಳು ಬಂದಿವೆ. ಅದಕ್ಕೆ ಕಡಿವಾಣ ಹಾಕಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಕರ ಸಂಬಳ ಅಗತ್ಯಕ್ಕೆ ಪೂರಕವಾಗಿ ಖಾಸಗಿ ಶಾಲೆಗಳಲ್ಲಿ ಶುಲ್ಕ ಪಡೆಯುವಂತೆ ಶೀಘ್ರ ನಿಯಮ ಜಾರಿಗೆ ತರಲಾಗುವುದು,’’ ಎಂದು ಹೇಳಿದರು.ತಹಸೀಲ್ದಾರ್ ನಾಗಪ್ರಶಾಂತ್, ಆರ್‌ಎ್ಒ ಅನನ್ಯಕುಮಾರ್, ಡಿಆರ್‌ಎ್ಒ ಪುಟ್ಟ ಮಾದೇಗೌಡ, ಉಪತಹಸೀಲ್ದಾರ್ ಜಯರಾಮು ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ