ಆ್ಯಪ್ನಗರ

ಮಂಡ್ಯ: ಲಾರಿ-ಬೈಕ್ ನಡುವೆ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಗೂಡ್ಸ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಘಟನೆ ಸಂಬಂಧ ಮಳವಳ್ಳಿ ಟೌನ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

Vijaya Karnataka Web 4 Aug 2020, 11:52 am
ಮಂಡ್ಯ : ಗೂಡ್ಸ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಳವಳ್ಳಿ ಪಟ್ಟಣದ ಮದ್ದೂರು ರಸ್ತೆ ಸಂತೆ ಮೈದಾನದ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ.
Vijaya Karnataka Web ಸಾಂದರ್ಭಿಕ ಚಿತ್ರ


ತಾಲ್ಲೂಕಿನ ನೆಲ್ಲೂರು ಗ್ರಾಮದ ನಾಗರಾಜು (40) ಮೃತ ದುರ್ದೈವಿ. ನಾಗರಾಜು ಸಂತೆಯಲ್ಲಿ ಸಾಮಾನು ಖರೀದಿಸಿ ಬೈಕ್ ನಲ್ಲಿ ಸ್ವಗ್ರಾಮಕ್ಕೆ ಹೊರಟಿದ್ದಾಗ ಮದ್ದೂರು ಕಡೆಯಿಂದ ವೇಗವಾಗಿ ಬಂದ ಗೂಡ್ಸ್ ಲಾರಿ ಡಿಕ್ಕಿ ಹೊಡೆದಿದೆ. ನಾಗರಾಜು ತಲೆಯ ಮೇಲೆ ಲಾರಿ ಮುಂದಿನ ಚಕ್ರ ಹರಿದ ರಭಸಕ್ಕೆ ತಲೆ ಛಿದ್ರವಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಚಾಲಕ ಲಾರಿ ಸಹಿತ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಸ್ಥಳೀಯರು ಲಾರಿಯನ್ನು ಬೆನ್ನಟ್ಟಿ ಸಾರಿಗೆ ಬಸ್ ನಿಲ್ದಾಣದ ಬಳಿ ಹಿಡಿದು ಪೋಲಿಸಿಗೆ ಒಪ್ಪಿಸಿದ್ದಾರೆ.

ಘಟನೆ ಸಂಬಂಧ ಮಳವಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಡಿವೈಎಸ್ಪಿ ಎಂ.ಜೆ.ಪೃಥ್ವಿ ಹಾಗೂ ಸರ್ಕಲ್ ಇನ್ಸ್ ಪೆಕ್ಟರ್ ಎ.ಕೆ.ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ