ಮದ್ದೂರು: ಪಟ್ಟಣದ ಶ್ರೀ ಶನಿಮಹಾತ್ಮಸ್ವಾಮಿ ದೇಗುಲದ ಬಾಗಿಲು ಮುರಿದು ಹುಂಡಿಯಲ್ಲಿದ್ದ 60 ಸಾವಿರ ರೂ. ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಪಟ್ಟಣದ ಎಚ್.ಕೆ.ವಿ.ನಗರ ಚನ್ನೇಗೌಡನದೊಡ್ಡಿ-ಮೊಬ್ಬಳಗೆರೆ ಎಲ್ಲೆಯಲ್ಲಿರುವ ಶನಿಮಹಾತ್ಮ ದೇವಾಲಯದ ಬಾಗಿಲನ್ನು ಮುರಿದು ಒಳ ಪ್ರವೇಶಿಸಿರುವ ದುಷ್ಕರ್ಮಿಗಳು, ಹುಂಡಿ ಒತ್ತೊಯ್ದು ಅದರಲ್ಲಿದ್ದ 60 ಸಾವಿರಕ್ಕೂ ಹೆಚ್ಚು ಹಣವನ್ನು ಕದ್ದೊಯಿದ್ದಾರೆ. ಅರ್ಚಕ ಪುಟ್ಟಪ್ಪ ಅವರು ಎಂದಿನಂತೆ ದೇಗುಲಕ್ಕೆ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಮದ್ದೂರು ಠಾಣೆಯಲ್ಲಿ ದೂರು ದಾಖಲಾಗಿದೆ.
ಶಿವಪುರ, ಮದ್ದೂರು ಹಾಗೂ ಇನ್ನಿತರೆ ಗ್ರಾಮಗಳಲ್ಲಿ ಸರಣಿ ಕಳವು ಪ್ರಕರಣಗಳು ನಡೆಯುತ್ತಿದ್ದು, ಪೊಲೀಸರು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.