ಆ್ಯಪ್ನಗರ

ಸ್ಪರ್ಧಾ ಮನೋಭಾವ ರೂಢಿಸಿಕೊಳ್ಳಿ

ಸ್ಪರ್ಧೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಬದಲಿಗೆ ಭಾಗವಹಿಸುವಿಕೆ ಅತೀ ಮುಖ್ಯ ಎಂದು ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಎಚ್.ಆರ್.ಶ್ಯಾಮಲಾ ತಿಳಿಸಿದರು.

Vijaya Karnataka 22 Nov 2017, 5:15 am
ಮಂಡ್ಯ: ಸ್ಪರ್ಧೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಬದಲಿಗೆ ಭಾಗವಹಿಸುವಿಕೆ ಅತೀ ಮುಖ್ಯ ಎಂದು ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಎಚ್.ಆರ್.ಶ್ಯಾಮಲಾ ತಿಳಿಸಿದರು.
Vijaya Karnataka Web make a positive attitude
ಸ್ಪರ್ಧಾ ಮನೋಭಾವ ರೂಢಿಸಿಕೊಳ್ಳಿ


ತಾಲೂಕಿನ ಬಿ.ಹೊಸೂರು ಕಾಲನಿಯಲ್ಲಿನ ಕೇಂದ್ರೀಯ ವಿದ್ಯಾಲಯದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ‌್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ವಿದ್ಯಾರ್ಥಿ ದಿಶೆಯಲ್ಲಿಯೇ ಸ್ಪರ್ಧಾತ್ಮಕತೆ ಮೈಗೂಡಿಸಿಕೊಳ್ಳಬೇಕು. ಸ್ಪರ್ಧಾ ಮನೋಭಾವವು ಮುಂದೆ ಯಾವುದೇ ಸ್ಪರ್ಧೆ ಎದುರಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಮಕ್ಕಳ ಮನಸ್ಸಿನ ಭಾವನೆ ವಿಶಿಷ್ಟವಾದುದು. ಅವರಲ್ಲಿ ಯಾವುದೇ ದ್ವೇಷ ಅಸೂಯೆ ಇರುವುದಿಲ್ಲ. ಹಾಗಾಗಿ ಸದಾ ಮಕ್ಕಳು ಉಲ್ಲಾಸ, ಉತ್ಸಾಹದಿಂದ ಇರುತ್ತಾರೆ. ಪ್ರತಿಯೊಂದು ಮಗುನಲ್ಲೂ ಒಂದೊಂದು ಶಿಷ್ಟ ಗುಣಗಳಿರುತ್ತವೆ. ಶಿಕ್ಷಕರು ಹಾಗೂ ಪೋಷಕರು ಅ ಗುಣಗಳನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಅಂತಹ ಮಕ್ಕಳು ಉತ್ತಮ ಸಾಧನೆ ಮಾಡುವ ಮೂಲಕ ಇತರರಿಗೆ ಮಾರ್ಗದರ್ಶಕರಾಗುತ್ತಾರೆ ಎಂದು ಅಭಿಪ್ರಾಯಪಟ್ಟರು.

ಮಕ್ಕಳ ಮನಸ್ಸು ತಿಳಿ ನೀರಿನಿಂತೆ. ಅವರಿಗೆ ಯಾವುದೇ ಕೆಟ್ಟ ಆಲೋಚನೆಗಳಿರುವುದಿಲ್ಲ. ಮನುಷ್ಯರನ್ನು ದ್ವೇಷಿಸುವುದಿಲ್ಲ. ನಾವೆಲ್ಲ ಒಂದೇ ಎಂಬ ಭಾವನೆ ಅವರಲ್ಲಿರುತ್ತದೆ. ಬೇರೆಯವರಿಗೆ ವಂಚನೆ ಮಾಡಬೇಕು. ಮೋಸ ಮಾಡಬೇಕು ಎನ್ನುವ ಮನೋಭಾವನೆಯೂ ಇರುವುದಿಲ್ಲ. ಪೋಷಕರು ಮಕ್ಕಳಿಗೆ ಯಾವುದೇ ಒತ್ತಡವನ್ನು ಹೇರಬಾರದು. ಅವರಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು. ಆಗ ಸಮಾಜದಲ್ಲಿ ಉನ್ನತ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಹಕಾರಿಯಾಗುತ್ತದೆ ಎಂದರು.

ಇದಕ್ಕೂ ಮೊದಲು ಆಯೋಜಿಸಿದ್ದ ನಾನಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು, ಸಂಭ್ರಮಿಸಿದರು. ವಿದ್ಯಾರ್ಥಿಗಳು ಇಡೀ ದಿನ ಆಟೋಟಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಗ್ರೂಪ್‌ಸಾಂಗ್, ರಂಗೋಲಿ, ವೇಷ ಭೂಷಣ, ಓಟದ ಸ್ಪರ್ಧೆ ಸೇರಿದಂತೆ ನಾನಾ ಆಟೋಟಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಗಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ