ಆ್ಯಪ್ನಗರ

ಬೈಕ್‌ ತೊಳೆಯುವಾಗ ವಿದ್ಯುತ್‌ ಅವಘಡ: ವ್ಯಕ್ತಿ ಸಾವು

ದ್ವಿಚಕ್ರ ವಾಹನ ತೊಳೆಯುವ ವೇಳೆ ವಿದ್ಯುತ್‌ ಪ್ರವಹಿಸಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಕೊಪ್ಪ ಪೊಲೀಸ್‌ ಠಾಣೆ ವ್ಯಾಪ್ತಿಯ ಉಜ್ಜನಿಚೆನ್ನನದೊಡ್ಡಿ ಗ್ರಾಮದಲ್ಲಿ ಗುರುವಾರ ಸಂಜೆ ಸಂಭವಿಸಿದೆ.

Vijaya Karnataka Web 20 Oct 2018, 5:00 am
ಮದ್ದೂರು: ದ್ವಿಚಕ್ರ ವಾಹನ ತೊಳೆಯುವ ವೇಳೆ ವಿದ್ಯುತ್‌ ಪ್ರವಹಿಸಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಕೊಪ್ಪ ಪೊಲೀಸ್‌ ಠಾಣೆ ವ್ಯಾಪ್ತಿಯ ಉಜ್ಜನಿಚೆನ್ನನದೊಡ್ಡಿ ಗ್ರಾಮದಲ್ಲಿ ಗುರುವಾರ ಸಂಜೆ ಸಂಭವಿಸಿದೆ.
Vijaya Karnataka Web man dead while washing his bike
ಬೈಕ್‌ ತೊಳೆಯುವಾಗ ವಿದ್ಯುತ್‌ ಅವಘಡ: ವ್ಯಕ್ತಿ ಸಾವು


ಉಜ್ಜನಿಚೆನ್ನನದೊಡ್ಡಿ ಗ್ರಾಮದ ನಿಂಗೇಗೌಡ ಅವರ ಪುತ್ರ ರಮೇಶ್‌ (42) ಮೃತ.

ರಮೇಶ್‌ ಅವರು ಆಯುಧ ಪೂಜೆ ಹಿನ್ನೆಲೆಯಲ್ಲಿ ಮನೆಮುಂದೆ ಬೈಕ್‌ ತೊಳೆಯುತ್ತಿದ್ದರು. ನೀರು ಸಿಂಪಡಿಸುವ ವಿದ್ಯುತ್‌ ಚಾಲಿತ ಮೋಟಾರ್‌ನಲ್ಲಿ ವ್ಯತ್ಯಾಸವಾಗಿ ನೀರಿಗೆ ವಿದ್ಯುತ್‌ ಪ್ರವಹಿಸಿದ ಪರಿಣಾಮ ರಮೇಶ್‌ ಅಸ್ವಸ್ಥಗೊಂಡು ನೆಲಕ್ಕುರುಳಿದರು. ಮಂಡ್ಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ. ಮೃತರಿಗೆ ಪತ್ನಿ ಹಾಗೂ ಒಬ್ಬ ಇದ್ದಾರೆ.

ಘಟನೆ ಸಂಬಂಧ ಪತ್ನಿ ವೀಣಾ ನೀಡಿದ ದೂರಿನ ಮೇರೆಗೆ ಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ