ಆ್ಯಪ್ನಗರ

ಮಂಡ್ಯ ಬಿಜೆಪಿಯಲ್ಲಿ ಬಿರುಕು, ಜಿಲ್ಲಾಧ್ಯಕ್ಷರ ಬದಲಾವಣೆಗೆ ಪಟ್ಟು

ಜಿಲ್ಲಾಧ್ಯಕ್ಷರ ಆಯ್ಕೆ ವಿಚಾರವಾಗಿ ಮಂಡ್ಯ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಜಿಲ್ಲಾಧ್ಯಕ್ಷರ ಬದಲಾವಣೆ ಆಗ್ರಹಿಸಿ ಸಚಿವ ಡಾ. ನಾರಾಯಣ ಗೌಡ ಅವರನ್ನು ಕಾರ್ಯಕರ್ತರು ಭೇಟಿಯಾಗಿ ಮಾತುಕತೆ ನಡೆಸಿದರು.

Vijaya Karnataka Web 25 Feb 2020, 3:42 pm
ಮಂಡ್ಯ : ಮಂಡ್ಯ ಜಿಲ್ಲೆಯ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಪಕ್ಷದ ಜಿಲ್ಲಾಧ್ಯಕ್ಷರನ್ನು ಬದಲಾವಣೆ ಮಾಡಬೇಕು ಎಂದು ಕಾರ್ಯಕರ್ತರು ಪಟ್ಟು ಹಿಡಿದಿದ್ದಾರೆ.
Vijaya Karnataka Web mandya bjp activists demand for district president change
ಮಂಡ್ಯ ಬಿಜೆಪಿಯಲ್ಲಿ ಬಿರುಕು, ಜಿಲ್ಲಾಧ್ಯಕ್ಷರ ಬದಲಾವಣೆಗೆ ಪಟ್ಟು


ಅಧ್ಯಕ್ಷರ ಬದಲಾವಣೆಗೆ ಒತ್ತಾಯಿಸಿ ಮಂಡ್ಯ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಮಂಗಳವಾರ ಸಚಿವ ಡಾ. ನಾರಾಯಣ ಗೌಡ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ತಮ್ಮ ಬೇಡಿಕೆಯನ್ನು ಮುಂದಿಟ್ಟರು.

ನೂತನವಾಗಿ ನೇಮಕವಾಗಿರುವ ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ವಿಜಯ ಕುಮಾರ್ ಅವರನ್ನ ಬದಲಾಯಿಸಬೇಕು. ಅವರ ಮೇಲೆ ಸಾಕಷ್ಟು ಆರೋಪಗಳಿವೆ. ಅವರು ನಿಮ್ಮ ಪಕ್ಕದಲ್ಲಿ ಕುಳಿತುಕೊಂಡರೆ ನಿಮ್ಮ ಘನತೆಗೆ ಧಕ್ಕೆ ಬರುತ್ತದೆ. ಹೀಗಾಗಿ ಅವರನ್ನ ಬದಲಾಯಿಸಿ ಎಂದು ಕಾರ್ಯಕರ್ತರು ಹಾಗೂ ಮುಖಂಡರು ಒತ್ತಾಯಿಸಿದರು.

ಬಿಜೆಪಿಯಲ್ಲಿ ಬಿಎಸ್‌ವೈ v/s ನಳಿನ್ ತಿಕ್ಕಾಟ-'ಅಸಂತೋಷಕ್ಕೆ' ಕಾರಣವೇನು?

ವಿಜಯ್‌ ಕುಮಾರ್‌ ಬದಲಿಗೆ ಪಕ್ಷ ಸಂಘಟನೆ ಮಾಡುವಂತಹ ಯಾರನ್ನಾದರು ಅಧ್ಯಕ್ಷರನ್ನಾಗಿ ಮಾಡಿ. ಮುಂದೆ ಜಿಲ್ಲೆಯಲ್ಲಿ ಹೆಚ್ಚಿನ ಶಾಸಕರನ್ನ ಆಯ್ಕೆ ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ. ಆದ್ದರಿಂದ ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಲೇಬೇಕು ಎಂದು ಕಾರ್ಯಕರ್ತರು, ಸಚಿವ ಡಾ. ನಾರಾಯಣ ಗೌಡ ಮುಂದೆ ಬೇಡಿಕೆ ಇಟ್ಟಿದ್ದಾರೆ.

ಕ್ಯಾಸಿನೋ ವಿವಾದ; ಸಿ.ಟಿ ರವಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಕಾರ್ಯಕರ್ತರ ಬೇಡಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷರ ಜೊತೆ ಚರ್ಚೆ ಮಾಡುತ್ತೇನೆ. ಕ್ಷೇತ್ರದ ಕಾರ್ಯಕರ್ತರ ಮನವಿಯನ್ನೂ ಅವರಿಗೆ ತಿಳಿಸುತ್ತೇನೆ. ಮಂಡ್ಯ ಜಿಲ್ಲೆಯಲ್ಲಿ ಪಕ್ಷದ ಏಳಿಗಾಗಿ ರಾಜ್ಯಾಧ್ಯಕ್ಷರು ಸೂಕ್ತ ತೀರ್ಮಾನ ತೆಗೆದುಕೊಳ್ಳುವ ವಿಶ್ವಾಸ ಇದೆ‌. ಒಂದೆರಡು ದಿನಗಳಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ