ಆ್ಯಪ್ನಗರ

ಮಂಡ್ಯ ಜಿಲ್ಲೆಯ ಮೂರು ಪುರಸಭೆಗಳಲ್ಲಿ ಜೆಡಿಎಸ್ ಪಾರಮ್ಯ

ಶ್ರೀರಂಗಪಟ್ಟಣ ಪುರಸಭೆ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದು, ಮಳವಳ್ಳಿ ಮತ್ತು ಕೆ.ಆರ್‌.ಪೇಟೆ ಪುರಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಚುಕ್ಕಾಣಿ ಹಿಡಿಯುವ ಕಸರತ್ತು ನಡೆಸಿದೆ.

Vijaya Karnataka Web 31 May 2019, 11:27 am
ಮಂಡ್ಯ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‌ ಪಾರಮ್ಯ ಮೆರೆದಿದೆ. ಶ್ರೀರಂಗಪಟ್ಟಣ ಪುರಸಭೆ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದು, ಮಳವಳ್ಳಿ ಮತ್ತು ಕೆ.ಆರ್‌.ಪೇಟೆ ಪುರಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಚುಕ್ಕಾಣಿ ಹಿಡಿಯುವ ಕಸರತ್ತು ನಡೆಸಿದೆ.
Vijaya Karnataka Web JDS


ಜಿಲ್ಲೆಯ ಶ್ರೀರಂಗಪಟ್ಟಣ ಪುರಸಭೆಯ 23 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬರೋಬ್ಬರಿ 12 ಸ್ಥಾನಗಳನ್ನು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುವ ಹಾದಿಯನ್ನು ಸುಲಭ ಮಾಡಿಕೊಂಡಿದೆ. ಬಿಜೆಪಿ 1, ಕಾಂಗ್ರೆಸ್ 8ರಲ್ಲಿ ಗೆದ್ದಿದ್ದು, ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಚುನಾಯಿತರಾಗಿದ್ದಾರೆ.

ಮಳವಳ್ಳಿ ಪುರಸಭೆಯ 23 ವಾರ್ಡ್‌ಗಳ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿದೆ. 9 ಜೆಡಿಎಸ್, 5 ಕಾಂಗ್ರೆಸ್, 2ರಲ್ಲಿ ಬಿಜೆಪಿ ಗೆದ್ದಿದ್ದು, 7 ಮಂದಿ ಪಕ್ಷೇತರರು ಗೆದ್ದಿದ್ದಾರೆ. ಪಕ್ಷೇತರರ ಬೆಂಬಲದೊಂದಿಗೆ ಅಧಿಕಾರಕ್ಕೇರಿಸುವ ಲೆಕ್ಕಾಚಾರವನ್ನು ಈಗಾಗಲೇ ಜೆಡಿಎಸ್ ಮಾಡುತ್ತಿದೆ.

ಕೆ.ಆರ್.ಪೇಟೆ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 10, ಜೆಡಿಎಸ್ 11, ಬಿಜೆಪಿ 1 ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಇಲ್ಲೂ ಕೂಡ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಬಾರಿ 4 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ 3 ಸ್ಥಾನಗಳನ್ನು ಕಳೆದುಕೊಂಡಿದೆ. 6ರಲ್ಲಿ ಗೆಲುವು ಸಾಧಿಸಿದ್ದ ಜೆಡಿಎಸ್ ಈಗ 11 ಸ್ಥಾನಗಳಿಗೇರಿದೆ. 15 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ 5 ಸ್ಥಾನಗಳನ್ನು ಕಳೆದುಕೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ