ಆ್ಯಪ್ನಗರ

ಮಂಡ್ಯ : ಕೊರೊನಾ ಸೋಂಕು ತಡೆ, ಸಂತ್ರಸ್ತರ ನೆರವಿಗೆ ಎನ್ ಜಿ ಓ ಹಾಗೂ ಸ್ವಯಂ ಸೇವಕರ ನೋಂದಣಿ

ಕೊರೊನಾ ಸೋಂಕು ತಡೆಯಲು ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸ್ವಯಂ ಸೇವಕರು ಸಹಾಯದ ಅಗತ್ಯವಿರುವವರಿಗೆ ಆಹಾರ, ಬಟ್ಟೆ, ಮಾಸ್ಕ್, ಸ್ಯಾನಿಟೈಸರ್ , ತರಕಾರಿ, ಹಣ್ಣು, ಸ್ವಯಂಸೇವೆ ನೀಡಲು ಆಸಕ್ತಿ ಇರುವವರು ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದು.

Vijaya Karnataka Web 26 Mar 2020, 2:40 pm
ಮಂಡ್ಯ: ಕೊರೊನಾ ವೈರಸ್ ನಿರ್ಮೂಲನೆಗೆ ದೇಶದಾದ್ಯಂತ 21 ದಿನಗಳ ಲಾಕ್ ಡೌನ್ ಆಚರಿಸುವ ಮೂಲಕ ಸಾಮಾಜಿಕ ಅಂತರ ಹಾಗೂ ಆರೋಗ್ಯ ಕಾಪಾಡಿಕೊಳ್ಳಲು ಪ್ರಧಾನ ಮಂತ್ರಿಗಳು ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ಅಗತ್ಯ ಸೇವೆಗಳು ಹಾಗೂ ದಿನಬಳಕೆಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಸರ್ಕಾರ ಎಲ್ಲಾ ಕ್ರಮ ಕೈಗೊಳ್ಳುತ್ತಿದೆ.
Vijaya Karnataka Web coronavirus


ಈ ಮಧ್ಯೆ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸ್ವಯಂ ಸೇವಕರು ಈ ಅವಧಿಯಲ್ಲಿ ಸಹಾಯದ ಅಗತ್ಯವಿರುವವರಿಗೆ ಆಹಾರ, ಬಟ್ಟೆ, ಮಾಸ್ಕ್, ಸ್ಯಾನಿಟೈಸರ್ , ತರಕಾರಿ, ಹಣ್ಣು, ಸ್ವಯಂಸೇವೆ ನೀಡಲು ಆಸಕ್ತಿ ಇರುವವರು ಜಿಲ್ಲೆಯಲ್ಲಿ ಇರುವ ತಮ್ಮ ಹೆಸರು, ವಿಳಾಸ , ಸಂಪರ್ಕ ಸಂಖ್ಯೆ ,ನೆರವು ನೀಡಬಹುದಾದ ವಸ್ತುಗಳು ಅಥವಾ ಸ್ವಯಂಸೇವಕರ ವಿವರಗಳನ್ನು ನಿಗದಿತ ನೋಂದಣಿ ನಮೂನೆಯಲ್ಲಿ ಭರ್ತಿ ಮಾಡಿ ಜಿಲ್ಲಾ ನಗರಾಭಿವೃದ್ಧಿ ಕೊಶ, ಜಿಲ್ಲಾಧಿಕಾರಿಗಳ ಕಚೇರಿ, ಮಂಡ್ಯ ಇಲ್ಲಿಗೆ ಸಲ್ಲಿಸಬಹುದು. ಹಾಗೂ ಜಿಲ್ಲಾಡಳಿತದೊಂದಿಗೆ ಸಹಾಯ ಕಾರ್ಯದಲ್ಲಿ ತ್ವರಿತವಾಗಿ ಕೈಜೋಡಿಸಬಹುದು.

ಹೆಚ್ಚಿನ ವಿವರಗಳಿಗೆ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಮಂಡ್ಯ ( ದೂ.ಸಂಖ್ಯೆ 9611515498 ) ಹಾಗೂ ಆಯುಕ್ತರು, ನಗರಸಭೆ, ಮಂಡ್ಯ ( ದೂರ. ಸಂಖ್ಯೆ.9482162772) ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳಾದ ಡಾ. ಎಂ. ವಿ. ವೆಂಕಟೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ