ಆ್ಯಪ್ನಗರ

ಮಂಡ್ಯ ಜಿಲ್ಲಾಧಿಕಾರಿ ವರ್ಗ

ಮಂಡ್ಯ ಜಿಲ್ಲಾಧಿಕಾರಿ ಎನ್‌.ಮಂಜುಶ್ರೀ ಅವರ ವರ್ಗಾವಣೆಯಾಗಿದ್ದು, ನೂತನ ಜಿಲ್ಲಾಧಿಕಾರಿಯಾಗಿ ತೋಟಗಾರಿಕೆ ಇಲಾಖೆ ಹಾಗೂ ರಾಷ್ಟ್ರೀಯ ತೋಟಗಾರಿಕೆ ನಿರ್ದೇಶಕ ಡಾ.ಎಂ.ವಿ.ವೆಂಕಟೇಶ್‌ ನೇಮಕಗೊಂಡಿದ್ದಾರೆ.

Vijaya Karnataka 6 Aug 2019, 5:00 am
ಮಂಡ್ಯ: ಮಂಡ್ಯ ಜಿಲ್ಲಾಧಿಕಾರಿ ಎನ್‌.ಮಂಜುಶ್ರೀ ಅವರ ವರ್ಗಾವಣೆಯಾಗಿದ್ದು, ನೂತನ ಜಿಲ್ಲಾಧಿಕಾರಿಯಾಗಿ ತೋಟಗಾರಿಕೆ ಇಲಾಖೆ ಹಾಗೂ ರಾಷ್ಟ್ರೀಯ ತೋಟಗಾರಿಕೆ ನಿರ್ದೇಶಕ ಡಾ.ಎಂ.ವಿ.ವೆಂಕಟೇಶ್‌ ನೇಮಕಗೊಂಡಿದ್ದಾರೆ.
Vijaya Karnataka Web mandya district collector transfer
ಮಂಡ್ಯ ಜಿಲ್ಲಾಧಿಕಾರಿ ವರ್ಗ


ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂದರ್ಭ ಮಂಡ್ಯದಿಂದ ವರ್ಗಾವಣೆಯಾಗಿದ್ದ ಮಂಜುಶ್ರೀ ಅವರು ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಮತ್ತೆ ಮಂಡ್ಯಕ್ಕೆ ವಾಪಸಾಗಿದ್ದರು. ಎರಡು ತಿಂಗಳ ಅಂತರದಲ್ಲೇ ಪುನಃ ವರ್ಗಾವಣೆಯಾಗಿರುವ ಇವರಿಗೆ ಸ್ಥಳವನ್ನು ತೋರಿಸಿಲ್ಲ.

ಡಾ.ಎಂ.ವಿ.ವೆಂಕಟೇಶ್‌ ಅವರು ಕರ್ನಾಟಕ ಕೇಡರ್‌ನ 2009ನೇ ಬ್ಯಾಚಿನ ಐಎಎಸ್‌ ಅಧಿಕಾರಿಯಾಗಿದ್ದಾರೆ. ಹಾವೇರಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿರುವ ಇವರು, ಹಾವೇರಿ ಜಿಲ್ಲಾಧಿಕಾರಿಯಾಗಿದ್ದಾಗ ಪುಣ್ಯ ಕುಟೀರ ಹೆಸರಿನಲ್ಲಿ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಜನರ ಗಮನ ಸೆಳೆದಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ