ಆ್ಯಪ್ನಗರ

ಸಿಎಂ ಉದ್ದೇಶಿಸಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಮಂಡ್ಯದ ರೈತ

ವಿಡಿಯೋದಲ್ಲಿ ಸಂತೇಬಾಚಹಳ್ಳಿ ಹೋಬಳಿಯ ಎಲ್ಲ ಕೆರೆಗಳಿಗೆ ನೀರುತುಂಬಿಸಿ, ರೈತರನ್ನು ​ಕಾಪಾಡಿ ಎಂದು ಸುರೇಶ್ ಸಿಎಂ ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾನೆ. ಬಳಿಕ ತನ್ನ ಅಂತ್ಯಕ್ರಿಯೆಗೆ ಕುಮಾರಸ್ವಾಮಿಯನ್ನು ಆಹ್ವಾನಿಸಿದ್ದಾನೆ.

Vijaya Karnataka Web 17 Jun 2019, 6:56 pm
ಮಂಡ್ಯ: ಸಾಲದ ಹೊರೆ ತಾಳಲಾರದೆ ಮಂಡ್ಯದ ರೈತನೊಬ್ಬ ಸಿಎಂ ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ‌ ಅಂತ್ಯ ಸಂಸ್ಕಾರಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಬರುವಂತೆ ಕೋರಿಕೊಂಡಿರುವ ರೈತ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
Vijaya Karnataka Web farmer


ಮೃತ ರೈತನನ್ನು ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ, ಸಂತೇಬಾಚಳ್ಳಿ ಹೋಬಳಿಯ, ಅಘಲಯ ಗ್ರಾಮದ ಸುರೇಶ್ (45) ಎಂದು ಗುರುತಿಸಲಾಗಿದೆ. ಈತ ಸಿಎಂ ಕುಮಾರಸ್ವಾಮಿಯ ಅಭಿಮಾನಿಯೂ ಆಗಿದ್ದ ಎನ್ನಲಾಗಿದೆ.

ವಿಡಿಯೋದಲ್ಲಿ ಸಂತೇಬಾಚಹಳ್ಳಿ ಹೋಬಳಿಯ ಎಲ್ಲ ಕೆರೆಗಳಿಗೆ ನೀರುತುಂಬಿಸಿ, ರೈತರನ್ನು ಕಾಪಾಡಿ ಎಂದು ಸುರೇಶ್ ಸಿಎಂ ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಸರಕಾರಕ್ಕೆ ಮನವಿ ಮಾಡಿಕೊಂಡಿದ್ದಾನೆ. ಬಳಿಕ ತನ್ನ ಅಂತ್ಯಕ್ರಿಯೆಗೆ ಕುಮಾರಸ್ವಾಮಿಯನ್ನು ಆಹ್ವಾನಿಸಿದ್ದಾನೆ.

ಸಾವಿಗೂ ಮುನ್ನ ಸುರೇಶ್ ಹೇಳಿಕೆ ಇರುವ ವಿಡಿಯೋ ವೈರಲ್ ಆಗಿದ್ದು, ಅಂತ್ಯಸಂಸ್ಕಾರದ ನಂತರ ವೀಡಿಯೋ ವಿಚಾರ ಬೆಳಕಿಗೆ ಬಂದಿದೆ.

ಭಾನುವಾರ ಬೆಳಗ್ಗೆ ಜಮೀನಿನ ಬಳಿ ನೇಣು ಸುರೇಶ್ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಕೆಆರ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ