ಆ್ಯಪ್ನಗರ

ಮಂಡ್ಯ: ಕೆಆರ್‌ಎಸ್‌ ಬಳಿ ಕೊನೆಗೂ ಬೋನಿಗೆ ಬಿದ್ದ ಚಿರತೆ, ಸ್ಥಳೀಯರಲ್ಲಿ ದೂರವಾದ ಆತಂಕ!

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಅಣೆಕಟ್ಟೆಯ ಮುಖ್ಯದ್ವಾರದಲ್ಲಿ ಹಾಗೂ ಬೃಂದಾವನ ಗಾರ್ಡನ್‍ನಲ್ಲಿ ಕಳೆದ ಹಲವು ದಿನಗಳಿಂದ ಚಿರತೆಯೊಂದು ಪದೇ ಪದೇ ಕಾಣಿಸಿಕೊಂಡಿತ್ತು. ಇದರಿಂದಾಗಿ ಸ್ಥಳೀಯರಲ್ಲಿ ಭಯ ಮೂಡಿತ್ತು. ಕಳೆದ ಶುಕ್ರವಾರ ಕೂಡ ಚಿರತೆ ಓಡಾಡುವ ದೃಶ್ಯ ಇಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಹೀಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯ ಸೆರೆಗೆ ಕೆಆರ್‌ಎಸ್‌ ಅಣೆಕಟ್ಟೆನ ಮುಖ್ಯದ್ವಾರದ ಬಳಿ ಬೋನ್ ಇರಿಸಿದ್ದರು.

Vijaya Karnataka 11 Feb 2021, 1:31 pm
ಮಂಡ್ಯ: ಕೆಆರ್‌ಎಸ್‌ನ ಸ್ಥಳೀಯರು, ಪ್ರವಾಸಿಗರು ಹಾಗೂ ಅಧಿಕಾರಿಗಳ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಈ ಮೂಲಕ ಕಣ್ಣಿಗೆ ಎಣ್ಣೆ ಬಿಟ್ಟು ಚಿರತೆ ಭಯದಲ್ಲಿ ಕಳೆಯುತ್ತಿದ್ದ ಸ್ಥಳೀಯರ ಆತಂಕ ದೂರವಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಅಣೆಕಟ್ಟೆಯ ಮುಖ್ಯದ್ವಾರದಲ್ಲಿ ಹಾಗೂ ಬೃಂದಾವನ ಗಾರ್ಡನ್‍ನಲ್ಲಿ ಕಳೆದ ಹಲವು ದಿನಗಳಿಂದ ಚಿರತೆಯೊಂದು ಪದೇ ಪದೇ ಕಾಣಿಸಿಕೊಂಡಿತ್ತು.
Vijaya Karnataka Web leopard


ಇದರಿಂದಾಗಿ ಸ್ಥಳೀಯರಲ್ಲಿ ಭಯ ಮೂಡಿತ್ತು. ಕಳೆದ ಶುಕ್ರವಾರ ಕೂಡ ಚಿರತೆ ಓಡಾಡುವ ದೃಶ್ಯ ಇಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಹೀಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯ ಸೆರೆಗೆ ಕೆಆರ್‌ಎಸ್‌ ಅಣೆಕಟ್ಟೆನ ಮುಖ್ಯದ್ವಾರದ ಬಳಿ ಬೋನ್ ಇರಿಸಿದ್ದರು. ಬೋನ್ ಇರಿಸಿದ ಐದು ದಿನಗಳ ಬಳಿಕ ಅಂದರೆ ಇಂದು(ಗುರುವಾರ) ಚಿರತೆ ಬೋನ್‍ಗೆ ಬಿದ್ದಿದೆ.

ಚಿರತೆ ಬೋನ್‍ಗೆ ಬಿದ್ದಿರುವುದರಿಂದ ಜನರಲ್ಲಿ ಇದ್ದ ಆತಂಕ ದೂರವಾಗಿದೆ. ಸದ್ಯ ಬೋನಿಗೆ ಬಿದ್ದ ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ಬಿಡಲು ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಧರಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಚಿರತೆ ಬೋನಿಯನಲ್ಲಿರುವ ಬಗ್ಗೆ ಪರಿಶೀಲನೆ ನಡೆಸಿದರು.
5 ರೂಪಾಯಿ ಡಾಕ್ಟ್ರು ಡಾ.ಶಂಕರೇಗೌಡರು ಮಂಡ್ಯದ ಹೆಮ್ಮೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ