ಆ್ಯಪ್ನಗರ

ಮುತ್ತತ್ತಿ: ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ಮೊಸಳೆಗೆ ಬಲಿ

ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ಮೊಸಳೆಗೆ ಬಲಿಯಾಗಿದ್ದಾರೆ.

Vijaya Karnataka 28 May 2018, 5:00 am
ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ಮೊಸಳೆಗೆ ಬಲಿಯಾಗಿದ್ದಾರೆ.
Vijaya Karnataka Web mandya muthathi kavery river bath crocodile attack
ಮುತ್ತತ್ತಿ: ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ಮೊಸಳೆಗೆ ಬಲಿ


ಬೆಂಗಳೂರಿನ ಹೆಸರುಘಟ್ಟದ ವೆಂಕಟೇಶ್‌(52) ಮೃತರು. ಭಾನುವಾರ ತಮ್ಮ ಕುಟುಂಬ ಹಾಗೂ ಸಂಬಂಧಿಕರ ಜತೆಗೆ ಮುತ್ತತ್ತಿಗೆ ಆಗಮಿಸಿದ್ದ ಅವರು, ಬೆಳಗ್ಗೆ ಹನುಮ ದೇವಸ್ಥಾನಕ್ಕೆ ತೆರಳುವ ಮೊದಲೇ ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿ ಈಜಾಡುತ್ತಿದ್ದಾಗ ಮೊಸಳೆ ದಾಳಿ ನಡೆಸಿ ವೆಂಕಟೇಶ್‌ರನ್ನು ಎಳೆದುಕೊಂಡು ಹೋಗಿದೆ. ಸ್ಥಳೀಯರು ನೀರಿಗೆ ಇಳಿದು ವೆಂಕಟೇಶ್‌ ಅವರ ಸಹಾಯಕ್ಕೆ ತೆರಳುವಷ್ಟರಲ್ಲಿ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಘಟನೆಯಲ್ಲಿ ವೆಂಕಟೇಶ್‌ ಅವರ ಬಲ ಕೈ, ಎಡ ಕಾಲನ್ನು ಮೊಸಳೆಯು ಹಿಡಿದು ಎಳೆದಾಡಿದ್ದರಿಂದ ಮೂಳೆ ಮುರಿದಿತ್ತು. ಸ್ಥಳಕ್ಕೆ ಹಲಗೂರು ಪಿಎಸ್‌ಐ ಶ್ರೀಧರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ