ಪಾಂಡವಪುರ: ತಾಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿ ಆಂಜನೇಯಸ್ವಾಮಿ ಯುವಕರ ಸಂಘ, ಎತ್ತಿನಗಾಡಿ ಮಾಲೀಕರ ಮತ್ತು ಚಾಲಕರ ಸಂಘದಿಂದ ಮಾ.11ರಂದು 'ರಾಜ್ಯಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆ' ಆಯೋಜಿಸಲಾಗಿದೆ ಎಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಟಿ.ಮಂಜುನಾಥ್ ತಿಳಿಸಿದರು.
ಇದೇ ಮೊದಲ ಬಾರಿಗೆ ಸ್ಪರ್ಧೆ ಆಯೋಜಿಸಲಾಗುತ್ತಿದೆ. ಎತ್ತಿನಗಾಡಿ ಓಟದ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಪ್ರಯತ್ನ ಮಾಡಲಾಗಿದೆ.ಮಂಡ್ಯ, ಮೈಸೂರು, ಬೆಂಗಳೂರು, ಹಾಸನ, ಚಾಮರಾಜನಗರ, ಕೋಲಾರ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಸ್ಪರ್ಧಿಗಳು ಭಾಗವಹಿಸುವರು. ಈಗಾಗಲೇ ಕ್ರೀಡಾಕೂಟಕ್ಕೆ ಅಗತ್ಯವಿರುವ ಸ್ಥಳವನ್ನು ಗ್ರಾಮದ ಹೊರವಲಯದಲ್ಲಿ ಸಿದ್ಧತೆ ಮಾಡಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
1,500 ರೂ. ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ. ಪ್ರಥಮಸ್ಥಾನ 40 ಸಾವಿರ ರೂ., ದ್ವಿತೀಯ 30, ತೃತೀಯ 20, ನಾಲ್ಕನೇ ಸ್ಥಾನ 10 ಸಾವಿರ ರೂ. ನೀಡಲಾಗುವುದು. ಮಾಹಿತಿಗೆ: ಮೊ: 7795197797/ 9482759155.
ಗೋಷ್ಠಿಯಲ್ಲಿ ಅಭಿಷೇಕ್, ಪ್ರಸನ್ನ, ಮಂಜು,ರಾಮಚಂದ್ರು, ಶ್ರೇಯಸ್, ಮೋಹನ್, ನಯನ ಹಾಜರಿದ್ದರು.