ಆ್ಯಪ್ನಗರ

ಮಂಡ್ಯ: ಗಾಂಧಿ ಜಯಂತಿ ಅಂಗವಾಗಿ ಕಿರುಚಿತ್ರ ಪ್ರದರ್ಶನ

ವಿಕ ಸುದ್ದಿಲೋಕ ಮಂಡ್ಯ ಗಂಧಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ನಗರದಲ್ಲಿ ಅ...

Vijaya Karnataka 2 Oct 2018, 5:00 am
ಮಂಡ್ಯ: ಗಂಧಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ನಗರದಲ್ಲಿ ಅ.2ರಂದು ಗಾಂಧೀಜಿಯವರ ಅಪರೂಪದ ಛಾಯಾಚಿತ್ರ, ತತ್ವ ಸಂದೇಶವನ್ನು ಪಸರಿಸುವ ಕಿರುಚಿತ್ರ ಪ್ರದರ್ಶನ ಆಯೋಜಿಸಿದೆ.
Vijaya Karnataka Web mandya short film show as part of gandhi jayanthi
ಮಂಡ್ಯ: ಗಾಂಧಿ ಜಯಂತಿ ಅಂಗವಾಗಿ ಕಿರುಚಿತ್ರ ಪ್ರದರ್ಶನ


ಜಿಲ್ಲಾಡಳಿತ, ನೆಹರು ಯುವ ಕೇಂದ್ರದ ಸಹಯೋಗದಲ್ಲಿ ನಗರದ ಕಾವೇರಿ ವನದಲ್ಲಿ ಅ.2ರಂದು ನಡೆಯುವ ಗಾಂಧಿಜಯಂತಿ ಮತ್ತು ಮಾಜಿ ಪ್ರಧಾನಿ ಲಾಲ್‌ಬಹಾದ್ದೂರ್‌ ಶಾಸ್ತ್ರೀಜಿ ಅವರ ಜನ್ಮದಿನಾಚರಣೆ ವೇಳೆ ಕಿರುಚಿತ್ರ ಪ್ರದರ್ಶನಗೊಳ್ಳಲಿದೆ. ಇದೇ ವೇಳೆ ಆಯುಷ್‌ ಇಲಾಖೆಯಿಂದ ಉಚಿತವಾಗಿ ಆರೋಗ್ಯ ಶಿಬಿರವನ್ನೂ ಆಯೋಜಿಸಲಾಗಿದೆ.

ಬೆಳಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ಅವರು ಕಾರ‍್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಎಂ.ಶ್ರೀನಿವಾಸ್‌ ಅಧ್ಯಕ್ಷತೆ ವಹಿಸುವರು. ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು, ನಾನಾ ಇಲಾಖೆಗಳ ಅಧಿಕಾರಿಗಳು ಭಾಗವಹಿಸುವರು. ಈ ವೇಳೆ ಸರ್ವಧರ್ಮ ಪ್ರಾರ್ಥನೆ ಹಾಗೂ ಭಜನೆಯೂ ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ