ಶ್ರೀರಂಗಪಟ್ಟಣ: ವಾಹನ ಡಿಕ್ಕಿಯಾಗಿ ಬೆಂಗಳೂರು-ಮೈಸೂರು ಹೆದ್ದಾರಿ ತಾಲೂಕಿನ ಗಣಂಗೂರು ಸಮೀಪ ದೇವರ ಕಾಡು ಅರಣ್ಯ ಪ್ರದೇಶದಿಂದ ಕೆ.ಶೆಟ್ಟಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಚಿರತೆ ಮೃತಪಟ್ಟಿದೆ.
ಸುಮಾರು ಮೂರು ವರ್ಷದ ಗಂಡು ಚಿರತೆಯಾಗಿದ್ದು ಶನಿವಾರ ಬೆಳಗ್ಗೆ ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ವಾಹನ ಡಿಕ್ಕಿಯಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿದ ನಂತರ ದೇಹವನ್ನು ಸುಡಲಾಯಿತು. ಸುಮಾರು ಆರೇಳು ತಿಂಗಳಿನಿಂದ ದೇವರಕಾಡು ಅರಣ್ಯ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿತ್ತು. ರಸ್ತೆ ದಾಟುವಾಗ ವಾಹನ ಡಿಕ್ಕಿಯಾಗಿ ಮೃತಪಟ್ಟಿದೆ ಎಂದು ಉಪ ವಲಯ ಅರಣ್ಯಾಧಿಕಾರಿ ಆನಂದ್ 'ವಿಜಯ ಕರ್ನಾಟಕ'ಕ್ಕೆ ತಿಳಿಸಿದರು.