ಆ್ಯಪ್ನಗರ

ನಾನಾ ಬೇಡಿಕೆ: ಬಿಸಿಯೂಟ ನೌಕರರ ಧರಣಿ

ವಿಕ ಸುದ್ದಿಲೋಕ ಮಂಡ್ಯ ಬಿಸಿಯೂಟ ನೌಕರರಿಗೆ ಪಿಂಚಣಿ ಸೌಲಭ್ಯ ಕಲ್ಪಿಸುವುದು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ...

Vijaya Karnataka 18 Oct 2019, 5:00 am
ಮಂಡ್ಯ : ಬಿಸಿಯೂಟ ನೌಕರರಿಗೆ ಪಿಂಚಣಿ ಸೌಲಭ್ಯ ಕಲ್ಪಿಸುವುದು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಸದಸ್ಯರು ನಗರದಲ್ಲಿಗುರುವಾರ ಪ್ರತಿಭಟನೆ ನಡೆಸಿದರು.
Vijaya Karnataka Web many demand bisi uta employees protest in mandya
ನಾನಾ ಬೇಡಿಕೆ: ಬಿಸಿಯೂಟ ನೌಕರರ ಧರಣಿ

ಜಿಪಂ ಎದುರು ಜಮಾಯಿಸಿ ಪ್ರತಿಭಟನಾಕಾರರು, ಅಕ್ಷರ ದಾಸೋಹ ನೌಕರರಿಗೆ ಅಗತ್ಯ ಸೌಲಭ್ಯ ಒದಗಿಸ ಬೇಕೆಂದು ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿ ಸಿದರು. ಮಾನವ ಸಂಪನ್ಮೂಲ ಇಲಾಖೆ ಯಲ್ಲಿಅಕ್ಷರದಾಸೋಹ ಯೋಜನೆ 2001-2002ರಿಂದ ಪ್ರಾರಂಭ ವಾಗಿದೆ. ಇಂದಿನ ಸರಕಾರಗಳು ಉದ್ಯೋಗಿಗಳು ಲೆಕ್ಕಕ್ಕಿಲ್ಲಎನ್ನುವ ರೀತಿಯಲ್ಲಿಪರಿಗಣಿಸುತ್ತಿದೆ. ಕಳೆದ 17 ವರ್ಷ ಗಳಿಂದ ಈ ನೌಕರರಿಗೆ ಸೂಕ್ತ ವೇತನ. ಪಿಂಚಣಿ ಸೇರಿದಂತೆ ಯಾವುದೇ ಸೌಲಭ್ಯ ನೀಡದೇ ವಂಚಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಕ್ಷರ ದಾಸೋಹ ನೌಕರರ ನ್ಯಾಯ ಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ ಕಾರದ ವಿರುದ್ಧ ಹಲವು ಬಾರಿ ಪ್ರತಿಭಟನೆ ನಡೆಸಿದರೂ ಕ್ರಮ ಕೈಗೊಳ್ಳದಿರುವ ಸರಕಾರಗಳ ನಡೆ ಖಂಡನೀಯ. ಮಕ್ಕಳ ಅಪೌಷ್ಟಿಕತೆ ಹೋಗಲಾಡಿಸಲು ದುಡಿಯುವ ಮಹಿಳೆಯರಿಗೆ ಕೇವಲ 2600 ರಿಂದ 2700 ರೂ. ತಿಂಗಳ ವೇತನ ಬಿಟ್ಟರೆ ಬೇರೆ ಯಾವ ಸವಲತ್ತುಗಳನ್ನು ನೀಡುತ್ತಿಲ್ಲ. ಕೆಲ ಮಹಿಳೆಯರು ನಿವೃತ್ತಿ ಅಂಚಿನಲ್ಲಿದ್ದಾರೆ. ಒಟ್ಟಾರೆ ರಾಜ್ಯದಲ್ಲಿಇರುವ 1.18 ಸಾವಿರ ಮಹಿಳೆಯರು ಈ ಯೋಜನೆಯಡಿ ದುಡಿಯುತ್ತಿದ್ದಾರೆ. ಇವರಿಗೆ ಪಿಂಚಣಿ ಸಮಸ್ಯೆ ಬಗೆಹರಿಸಿಲ್ಲಎಂದು ದೂರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ