ಆ್ಯಪ್ನಗರ

ಕೆಆರ್‌ಎಸ್‌ ಅಣೆಕಟ್ಟೆ ವ್ಯಾಪ್ತಿ ಗಣಿಗಾರಿಕೆ ನಿಷೇಧ

ವಿಕ ಸುದ್ದಿಲೋಕ ಪಾಂಡವಪುರ ಕೆಆರ್‌ಎಸ್‌ ಅಣೆಕಟ್ಟೆಯ ಸುರಕ್ಷ ತೆ ದೃಷ್ಟಿಯಿಂದ ಅಣೆಕಟ್ಟೆ ಸುತ್ತಮುತ್ತಲಿನ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿದ್ದು, ಆ...

Vijaya Karnataka 22 Aug 2019, 5:00 am
ಪಾಂಡವಪುರ: ಕೆಆರ್‌ಎಸ್‌ ಅಣೆಕಟ್ಟೆಯ ಸುರಕ್ಷ ತೆ ದೃಷ್ಟಿಯಿಂದ ಅಣೆಕಟ್ಟೆ ಸುತ್ತಮುತ್ತಲಿನ 20 ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿದ್ದು, ಆ. 20ರಿಂದ ಸೆ. 4ರವರೆಗೆ 144 ಸೆಕ್ಷ ನ್‌ ಅಡಿ ನಿಷೇಧಾಜ್ಞೆ ಜಾರಿಗೊಳಿಸಿ ತಹಸೀಲ್ದಾರ್‌ ಪ್ರಮೋದ್‌ ಎಲ್‌.ಪಾಟೀಲ್‌ ಆದೇಶಿಸಿದ್ದಾರೆ.
Vijaya Karnataka Web mining prohibition at krs dam limits
ಕೆಆರ್‌ಎಸ್‌ ಅಣೆಕಟ್ಟೆ ವ್ಯಾಪ್ತಿ ಗಣಿಗಾರಿಕೆ ನಿಷೇಧ


ಚಿನಕುರಳಿ ಹೋಬಳಿಯ ಬೇಬಿಬೆಟ್ಟದ ಕಾವಲು, ಚಿನಕುರಳಿ, ಹೊನಗಾನಹಳ್ಳಿ, ದೊಡ್ಡಬೋಗನಹಳ್ಳಿ, ಬನ್ನಂಗಾಡಿ, ಮೊಳೆಸಂದ್ರ, ಅಲ್ಪಳ್ಳಿ, ಬಿಂಡಹಳ್ಳಿ, ಮಲ್ಲಿಗೆರೆ, ಕಣಿವೆಕೊಪ್ಪಲು, ಕಟ್ಟೇರಿ, ಕಸಬಾ ಹೋಬಳಿಯ ಕೆಂಚನಹಳ್ಳಿ, ಬಿಜ್ಜನಹಳ್ಳಿ, ದೇಶಹಳ್ಳಿ, ಚಂದ್ರೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆ ಹಾಗೂ ಸ್ಟೋನ್‌ ಕ್ರಷರ್‌ ನಡೆಸದಂತೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಕೆಆರ್‌ಎಸ್‌ ಅಣೆಕಟ್ಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಶಬ್ಧ ಕೇಳಿ ಬಂದಿದೆ. ಜತೆಗೆ ಇಲ್ಲಿನ ಗಣಿಗಾರಿಕೆಯಿಂದ ಪರಿಸರಕ್ಕೆ ಹಾನಿ, ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಬೇಬಿಬೆಟ್ಟ ಕಾವಲು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ನಡೆಯುತ್ತಿರುವ ಗಣಿಗಾರಿಕೆ, ಸ್ಟೋನ್‌ ಕ್ರಷರ್‌ಗಳ ಮೇಲೆ ನಾನಾ ಇಲಾಖೆ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿ 39 ಸ್ಟೋನ್‌ ಕ್ರಷರ್‌ಗಳಿಗೆ ಬೀಗ ಮುದ್ರೆ ಜಡಿದಿದ್ದರು.

ಸಂಬಂಧಿಸಿದ ವೃತ್ತ ನಿರೀಕ್ಷ ಕರು, ಆರಕ್ಷ ಕ ಠಾಣೆಯ ಅಧಿಕಾರಿಗಳು ನಿಷೇಧಾಜ್ಞೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಉಪ ತಹಸೀಲ್ದಾರ್‌/ ರಾಜಸ್ವ ನಿರೀಕ್ಷ ಕರು ನಿತ್ಯ ಆಯಾ ಗ್ರಾಮಗಳಿಗೆ ತೆರಳಿ ವಿದ್ಯಮಾನಗಳ ಬಗ್ಗೆ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ಸೂಚಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ