ಜಲಸಂಗ್ರಹಾಗಾರ ನಿರ್ಮಾಣಕ್ಕೆ ಅಡ್ಡಿ, ನಿಷೇಧಾಜ್ಞೆ ನಡುವೆ ಇಂದು ಚಾಲನೆ
ಕೇಂದ್ರ ಪುರಸ್ಕೃತ ಅಮೃತ್ ಯೋಜನೆಯಡಿ ಮಂಡ್ಯ ನಗರದ ವಾರ್ಡ್ ನಂ.29ರ ಗುತ್ತಲು ಬಡಾವಣೆಯಲ್ಲಿ 5 ಲಕ್ಷ ಲೀ. ಸಾಮರ್ಥ್ಯದ ಮೇಲ್ಮಟ್ಟದ ಜಲ ಸಂಗ್ರಹಾಗಾರ ನಿರ್ಮಾಣ ಕಾಮಗಾರಿಗೆ ನಿಷೇಧಾಜ್ಞೆ ಜಾರಿಯೊಂದಿಗೆ ನ.13ರಂದು ಚಾಲನೆ ನೀಡಲಾಗುತ್ತದೆ.
Vijaya Karnataka 13 Nov 2019, 5:00 am
ಮಂಡ್ಯ: ಕೇಂದ್ರ ಪುರಸ್ಕೃತ ಅಮೃತ್ ಯೋಜನೆಯಡಿ ಮಂಡ್ಯ ನಗರದ ವಾರ್ಡ್ ನಂ.29ರ ಗುತ್ತಲು ಬಡಾವಣೆಯಲ್ಲಿ 5 ಲಕ್ಷ ಲೀ. ಸಾಮರ್ಥ್ಯದ ಮೇಲ್ಮಟ್ಟದ ಜಲ ಸಂಗ್ರಹಾಗಾರ ನಿರ್ಮಾಣ ಕಾಮಗಾರಿಗೆ ನಿಷೇಧಾಜ್ಞೆ ಜಾರಿಯೊಂದಿಗೆ ನ.13ರಂದು ಚಾಲನೆ ನೀಡಲಾಗುತ್ತದೆ.
ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕಾಗಿ ಗುತ್ತಲು ಬಡಾವಣೆಯ ಜೈ ಭೀಮ್ ಬಡಾವಣೆಯ ಉದ್ಯಾನವನದ ಪಶ್ಚಿಮ ಭಾಗದಲ್ಲಿ 20*20 ಅಳತೆಯ ನಿವೇಶನವನ್ನು ನಗರಸಭೆಯು ನೀಡಿದೆ. ಆದರೆ ಈ ಜಾಗದಲ್ಲಿ ಕಾಮಗಾರಿ ಆರಂಭಿಸಲು ಕೆಲವರು ಅಡ್ಡಿಪಡಿಸುತ್ತಿರುವ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿನಿಷೇಧಾಜ್ಞೆ ಜಾರಿಗೊಳಿಸಿ ಕಾಮಗಾರಿ ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಸೂಚಿಸಿದ್ದರು.
ಕಾಮಗಾರಿಗೆ ಅಡ್ಡಿಪಡಿಸುವವರ ವಿರುದ್ಧ ಪ್ರಕರಣ ದಾಖಲಿಸುವಂತೆಯೂ ನಿರ್ದೇಶನ ನೀಡಿದ್ದರು. ಅದರಂತೆ ನ.13ರಂದು ಬೆಳಗ್ಗೆ 9.30ಕ್ಕೆ ಕಾಮಗಾರಿಗೆ ಚಾಲನೆ ನೀಡಲು ಕ್ರಮ ವಹಿಸಲಾಗಿದೆ. ಹೀಗಾಗಿ ಕಾಮಗಾರಿ ಕೈಗೊಳ್ಳುವ ಪ್ರದೇಶದಿಂದ 500 ಮೀಟರ್ ವ್ಯಾಪ್ತಿಯಲ್ಲಿ ಮುಂದಿನ ಆದೇಶದವರೆಗೆ ಸಿಆರ್ಪಿಐ ಕಲಂ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ತಹಸೀಲ್ದಾರ್ ಎಲ್.ನಾಗೇಶ್ ಆದೇಶ ಹೊರಡಿಸಿದ್ದಾರೆ.
ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕಾಗಿ ಗುತ್ತಲು ಬಡಾವಣೆಯ ಜೈ ಭೀಮ್ ಬಡಾವಣೆಯ ಉದ್ಯಾನವನದ ಪಶ್ಚಿಮ ಭಾಗದಲ್ಲಿ 20*20 ಅಳತೆಯ ನಿವೇಶನವನ್ನು ನಗರಸಭೆಯು ನೀಡಿದೆ. ಆದರೆ ಈ ಜಾಗದಲ್ಲಿ ಕಾಮಗಾರಿ ಆರಂಭಿಸಲು ಕೆಲವರು ಅಡ್ಡಿಪಡಿಸುತ್ತಿರುವ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿನಿಷೇಧಾಜ್ಞೆ ಜಾರಿಗೊಳಿಸಿ ಕಾಮಗಾರಿ ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಸೂಚಿಸಿದ್ದರು.
ಕಾಮಗಾರಿಗೆ ಅಡ್ಡಿಪಡಿಸುವವರ ವಿರುದ್ಧ ಪ್ರಕರಣ ದಾಖಲಿಸುವಂತೆಯೂ ನಿರ್ದೇಶನ ನೀಡಿದ್ದರು. ಅದರಂತೆ ನ.13ರಂದು ಬೆಳಗ್ಗೆ 9.30ಕ್ಕೆ ಕಾಮಗಾರಿಗೆ ಚಾಲನೆ ನೀಡಲು ಕ್ರಮ ವಹಿಸಲಾಗಿದೆ. ಹೀಗಾಗಿ ಕಾಮಗಾರಿ ಕೈಗೊಳ್ಳುವ ಪ್ರದೇಶದಿಂದ 500 ಮೀಟರ್ ವ್ಯಾಪ್ತಿಯಲ್ಲಿ ಮುಂದಿನ ಆದೇಶದವರೆಗೆ ಸಿಆರ್ಪಿಐ ಕಲಂ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ತಹಸೀಲ್ದಾರ್ ಎಲ್.ನಾಗೇಶ್ ಆದೇಶ ಹೊರಡಿಸಿದ್ದಾರೆ.