ಮಂಡ್ಯ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ ಅಭಿವೃದ್ಧಿಗೆ ಸಹಕರಿಸಿ ಎಂದು ಮಾಜಿ ಸಚಿವೆ, ಎಐಸಿಸಿ ಕಾರ್ಯದರ್ಶಿ ಮೋಟಮ್ಮ ಮನವಿ ಮಾಡಿದರು.
ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದ ವೇಳೆ ಜನಸಾಮಾನ್ಯರ ಸರ್ವಾಂಗೀಣ ಅಭಿವೃದ್ಧಿಯತ್ತ ಗಮನಹರಿಸಿದೆ. ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರಕಾರ ಅನೇಕ ಭಾಗ್ಯಗಳನ್ನು ನೀಡಿ ಜನಪರ ಆಡಳಿತ ನಡೆಸಿದೆ. ಸದ್ಯದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಮೈತ್ರಿ, ಮಾತೃಪೂರ್ಣ, ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಯೋಜನೆಗಳು ಕಾಂಗ್ರೆಸ್ ಸರಕಾರದ ಕೊಡುಗೆಯಾಗಿವೆ. ಇದರ ಫಲಾನುಭವಿಗಳು ಮತ್ತು ಮಹಿಳಾ ಮತದಾರರು, ಕಾಂಗ್ರೆಸ್ ಕೈ ಹಿಡಿಬೇಕು. ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ವಿರೋಧಿಗಳ ಅಪಪ್ರಚಾರದಿಂದ ಕಾಂಗ್ರೆಸ್ ಪಕ್ಷ ಹೆಚ್ಚಿನ ಸೀಟುಗಳನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ, ನಮ್ಮ ಅಧಿಕಾರದ ಅವಧಿಯಲ್ಲಿ ರಾಜ್ಯ ಅಭಿವೃದ್ಧಿಯತ್ತ ಸಾಗಿದೆ ಎಂದರು.
ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನಲೆ ಜಿಲ್ಲೆಯಲ್ಲಿ 'ಸ್ಟಾರ್ ಪ್ರಚಾರಕಿ'ಯಾಗಿ ಕೆಲಸ ಮಾಡಲು ಹೈಕಮಾಂಡ್ ನನಗೆ ಜವಾಬ್ದಾರಿ ನೀಡಿದೆ. ಸದ್ಯ ನಗರಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದೇನೆ. ಕಾಂಗ್ರೆಸ್ ಪಕ್ಷದ 'ಸ್ಟಾರ್ ಪ್ರಚಾರಕ'ರಾದ ಮಾಜಿ ಸಚಿವ ಅಂಬರೀಷ್ ಅವರು ನಗರಸಭೆ ಚುನಾಣೆಯಲ್ಲಿ ಪ್ರಚಾರ ನಡೆಸುವಂತೆ ಕೋರಲಾಗುವುದು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಈ ಜವಾಬ್ದಾರಿ ನಿರ್ವಹಿಸಬೇಕು. ಮಾಜಿ ಸಂಸದೆ ರಮ್ಯಾ ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ. ಅವರು ಪ್ರಚಾರ ಕಾರ್ಯದಲ್ಲಿ ಭಾಗಹಿಸುವ ಕುರಿತ ಮಾಹಿತಿ ಇಲ್ಲ. ಪಕ್ಷ ನನಗೆ ನೀಡಿರುವ ಜವಾಬ್ದಾರಿಯನ್ನು ಪಾಲಿಸಲಿದ್ದೇನೆ ಎಂದು ತಿಳಿಸಿದರು.
ನಗರದಲ್ಲಿ ಕಾಂಗ್ರೆಸ್ ಪಕ್ಷದ ಪರ ಮತದಾರರಲ್ಲಿ ಒಳ್ಳೆಯ ಅಭಿಪ್ರಾಯವಿದೆ. ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದ್ದೇವೆ. ಮಹಿಳೆಯರಿಗೆ ರಾಜಕೀಯ ಸ್ಥಾನಮಾನ, ಪ್ರಾತಿನಿಧ್ಯ ದೊರಕಿಸಲು ಶ್ರಮಿಸಿರುವ ನಮ್ಮ ಪಕ್ಷಕ್ಕೆ ಮಹಿಳಾ ಮತದಾರರು ಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಸಿ.ಡಿ.ಗಂಗಾಧರ್, ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ರಾಮಕೃಷ್ಣ, ಮುಖಂಡರಾದ ಸಿದ್ದರಾಮೇಗೌಡ, ಲೋಕೇಶ್, ಬೇಲೂರು ಸೋಮಶೇಖರ್, ರಫೀ, ರುದ್ರಪ್ಪ ಹಾಜರಿದ್ದರು.
* ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರಕಾರ ದೇವಸ್ಥಾನಗಳ ಹುಂಡಿ ಹಣವನ್ನು ಬಿಡುತ್ತಿಲ್ಲ ಎಂದು ಬಿಜೆಪಿ ಪಕ್ಷದ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. ಆದರೆ, ಸಮ್ಮಿಶ್ರ ಆರ್ಥಿಕ ಸಂಪನ್ಮೂಲ ಕ್ರೋಡೀಕರಣ ಮಾಡಿ ರೈತರ ಸಾಲಮನ್ನಾ ಮಾಡಲು ಹೋರಾಟ ನಡೆಸುತ್ತಿದೆ. ಹೀಗಾಗಿ ಸಾರ್ವಜನಿಕರ ಹಣವನ್ನು ಸಾರ್ವಜನಿಕರಿಗೆ ತಲುಪುವಂತೆ ಮಾಡಿವುದು ತಪ್ಪಲ್ಲ.
ಮೋಟಮ್ಮ, ಮಾಜಿ ಸಚಿವೆ.
ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದ ವೇಳೆ ಜನಸಾಮಾನ್ಯರ ಸರ್ವಾಂಗೀಣ ಅಭಿವೃದ್ಧಿಯತ್ತ ಗಮನಹರಿಸಿದೆ. ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರಕಾರ ಅನೇಕ ಭಾಗ್ಯಗಳನ್ನು ನೀಡಿ ಜನಪರ ಆಡಳಿತ ನಡೆಸಿದೆ. ಸದ್ಯದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಬೇಕೆಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಮೈತ್ರಿ, ಮಾತೃಪೂರ್ಣ, ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಯೋಜನೆಗಳು ಕಾಂಗ್ರೆಸ್ ಸರಕಾರದ ಕೊಡುಗೆಯಾಗಿವೆ. ಇದರ ಫಲಾನುಭವಿಗಳು ಮತ್ತು ಮಹಿಳಾ ಮತದಾರರು, ಕಾಂಗ್ರೆಸ್ ಕೈ ಹಿಡಿಬೇಕು. ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ವಿರೋಧಿಗಳ ಅಪಪ್ರಚಾರದಿಂದ ಕಾಂಗ್ರೆಸ್ ಪಕ್ಷ ಹೆಚ್ಚಿನ ಸೀಟುಗಳನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಆದರೆ, ನಮ್ಮ ಅಧಿಕಾರದ ಅವಧಿಯಲ್ಲಿ ರಾಜ್ಯ ಅಭಿವೃದ್ಧಿಯತ್ತ ಸಾಗಿದೆ ಎಂದರು.
ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನಲೆ ಜಿಲ್ಲೆಯಲ್ಲಿ 'ಸ್ಟಾರ್ ಪ್ರಚಾರಕಿ'ಯಾಗಿ ಕೆಲಸ ಮಾಡಲು ಹೈಕಮಾಂಡ್ ನನಗೆ ಜವಾಬ್ದಾರಿ ನೀಡಿದೆ. ಸದ್ಯ ನಗರಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದೇನೆ. ಕಾಂಗ್ರೆಸ್ ಪಕ್ಷದ 'ಸ್ಟಾರ್ ಪ್ರಚಾರಕ'ರಾದ ಮಾಜಿ ಸಚಿವ ಅಂಬರೀಷ್ ಅವರು ನಗರಸಭೆ ಚುನಾಣೆಯಲ್ಲಿ ಪ್ರಚಾರ ನಡೆಸುವಂತೆ ಕೋರಲಾಗುವುದು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಈ ಜವಾಬ್ದಾರಿ ನಿರ್ವಹಿಸಬೇಕು. ಮಾಜಿ ಸಂಸದೆ ರಮ್ಯಾ ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ. ಅವರು ಪ್ರಚಾರ ಕಾರ್ಯದಲ್ಲಿ ಭಾಗಹಿಸುವ ಕುರಿತ ಮಾಹಿತಿ ಇಲ್ಲ. ಪಕ್ಷ ನನಗೆ ನೀಡಿರುವ ಜವಾಬ್ದಾರಿಯನ್ನು ಪಾಲಿಸಲಿದ್ದೇನೆ ಎಂದು ತಿಳಿಸಿದರು.
ನಗರದಲ್ಲಿ ಕಾಂಗ್ರೆಸ್ ಪಕ್ಷದ ಪರ ಮತದಾರರಲ್ಲಿ ಒಳ್ಳೆಯ ಅಭಿಪ್ರಾಯವಿದೆ. ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದ್ದೇವೆ. ಮಹಿಳೆಯರಿಗೆ ರಾಜಕೀಯ ಸ್ಥಾನಮಾನ, ಪ್ರಾತಿನಿಧ್ಯ ದೊರಕಿಸಲು ಶ್ರಮಿಸಿರುವ ನಮ್ಮ ಪಕ್ಷಕ್ಕೆ ಮಹಿಳಾ ಮತದಾರರು ಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಸಿ.ಡಿ.ಗಂಗಾಧರ್, ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ರಾಮಕೃಷ್ಣ, ಮುಖಂಡರಾದ ಸಿದ್ದರಾಮೇಗೌಡ, ಲೋಕೇಶ್, ಬೇಲೂರು ಸೋಮಶೇಖರ್, ರಫೀ, ರುದ್ರಪ್ಪ ಹಾಜರಿದ್ದರು.
* ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರಕಾರ ದೇವಸ್ಥಾನಗಳ ಹುಂಡಿ ಹಣವನ್ನು ಬಿಡುತ್ತಿಲ್ಲ ಎಂದು ಬಿಜೆಪಿ ಪಕ್ಷದ ನಾಯಕರು ವ್ಯಂಗ್ಯವಾಡುತ್ತಿದ್ದಾರೆ. ಆದರೆ, ಸಮ್ಮಿಶ್ರ ಆರ್ಥಿಕ ಸಂಪನ್ಮೂಲ ಕ್ರೋಡೀಕರಣ ಮಾಡಿ ರೈತರ ಸಾಲಮನ್ನಾ ಮಾಡಲು ಹೋರಾಟ ನಡೆಸುತ್ತಿದೆ. ಹೀಗಾಗಿ ಸಾರ್ವಜನಿಕರ ಹಣವನ್ನು ಸಾರ್ವಜನಿಕರಿಗೆ ತಲುಪುವಂತೆ ಮಾಡಿವುದು ತಪ್ಪಲ್ಲ.
ಮೋಟಮ್ಮ, ಮಾಜಿ ಸಚಿವೆ.