ಆ್ಯಪ್ನಗರ

ವೈದ್ಯಾಧಿಕಾರಿಗೆ ಸಂಸದೆ ಸುಮಲತಾ ತರಾಟೆ

ಸಾರ್ವಜನಿಕ ಆಸ್ಪತ್ರೆ ಲೋಪದೋಷ ಸರಿಪಡಿಸಲು ಸೂಚನೆ ವಿಕ ಸುದ್ದಿಲೋಕ ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲಸ ಕಾರ್ಯಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ಸಾಕಷ್ಟು ದೂರುಗಳು ...

Vijaya Karnataka 14 Aug 2019, 5:00 am
ಸಾರ್ವಜನಿಕ ಆಸ್ಪತ್ರೆ ಲೋಪದೋಷ ಸರಿಪಡಿಸಲು ಸೂಚನೆ
Vijaya Karnataka Web mp sumalatha took meeting in malavalli
ವೈದ್ಯಾಧಿಕಾರಿಗೆ ಸಂಸದೆ ಸುಮಲತಾ ತರಾಟೆ

ಮಳವಳ್ಳಿ: ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲಸ ಕಾರ್ಯಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ಸಾಕಷ್ಟು ದೂರುಗಳು ಬಂದಿವೆ ಎಂದು ಲೋಕಸಭೆ ಸದಸ್ಯೆ ಸುಮಾಲತಾ ಅಂಬರೀಷ್‌ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.

ಪಟ್ಟಣದ ಡಾ.ಅಬೇಡ್ಕರ್‌ ಸಮುದಾಯ ಭವನದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡುವುದಿಲ್ಲ. ರೋಗಿಗಳೊಂದಿಗೆ ಸರಿಯಾಗಿ ವರ್ತಿಸುವುದಿಲ್ಲ ಎಂಬುದು ಸೇರಿದಂತೆ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಆದರೆ ಅಧಿಕಾರಿಗಳು ಮಾತ್ರ ಎಲ್ಲವೂ ಸರಿಯಾಗಿದೆ ಎಂದು ಸಿದ್ಧ ಉತ್ತರ ನೀಡುತ್ತೀರಿ. ಮೊದಲು ಸಾರ್ವಜನಿಕರಿಂದ ಮಾಹಿತಿ ಪಡೆದು ನಂತರ ನಿಮ್ಮೊಂದಿಗೆ ಮಾತನಾಡುತ್ತೇನೆ ಎಂದು ವೈದ್ಯಾಧಿಕಾರಿಗೆ ತರಾಟೆ ತೆಗೆದುಕೊಂಡರು. ಆರೋಗ್ಯದ ವಿಚಾರದಲ್ಲಿ ಉದಾಸೀನತೆ ಬೇಡ. ಬಡ ಜನರ ಆರೋಗ್ಯದ ಜತೆ ಚೆಲ್ಲಾಟವಾಡುವುದು ಬೇಡ ಎಂದು ಹೇಳಿದರು. ಶಾಲೆಗಳಲ್ಲಿ ಬಾಲಕಿಯರ ಶೌಚಾಲಯಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ. ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕೆಂದು ಶಿಕ್ಷ ಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೃಷಿ, ರೇಷ್ಮೆ, ತೋಟಗಾರಿಕೆ, ಕಂದಾಯ ಸೇರಿದಂತೆ ಹಲವು ಇಲಾಖೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು. ಎಲ್ಲ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕ ಯೋಜನೆಗಳನ್ನು ಅನುಷ್ಠಾನದ ವಿಚಾರದಲ್ಲಿ ಜನರೊಂದಿಗೆ ಸೂಕ್ತವಾಗಿ ಸ್ಪಂದಿಸಬೇಕು ಎಂದು ಸುಮಲತಾ ತಿಳಿಸಿದರು. ನಂತರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ತಹಸೀಲ್ದಾರ್‌ ಚಂದ್ರಮೌಳಿ, ಡಿವೈಎಸ್‌ಪಿ ಶೈಲೇಂದ್ರ. ವೃತ್ತ ನಿರೀಕ್ಷ ಗ್ರಾಮಾಂತರ ಠಾಣೆ ಧರ್ಮೇಂದ್ರ, ಪಟ್ಟಣ ಠಾಣೆ ವೃತ್ತ ನಿರೀಕ್ಷ ಕ ರಮೇಶ್‌, ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ವೀರಭದ್ರಪ್ಪ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ