ಆ್ಯಪ್ನಗರ

ಮೈಷುಗರ್ ಕಾರ್ಖಾನೆ ಖಾಸಗಿಗೆ ವಹಿಸಲು ಹುನ್ನಾರ

ಸರಕಾರ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗಿ ಸಂಸ್ಥೆಗೆ ವಹಿಸಿಕೊಡುವ ಹುನ್ನಾರ ನಡೆಸುತ್ತಿದೆ ಎಂದು ರೈತ ಸಂಘದ ರಾಜ್ಯ ವಿಭಾಗೀಯ ಕಾರ್ಯದರ್ಶಿ ರಾಮಕಷ್ಣಯ್ಯ ಆರೋಪಿಸಿದರು.

Vijaya Karnataka 19 Dec 2018, 8:40 pm
ಮದ್ದೂರು: ಸರಕಾರ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗಿ ಸಂಸ್ಥೆಗೆ ವಹಿಸಿಕೊಡುವ ಹುನ್ನಾರ ನಡೆಸುತ್ತಿದೆ ಎಂದು ರೈತ ಸಂಘದ ರಾಜ್ಯ ವಿಭಾಗೀಯ ಕಾರ್ಯದರ್ಶಿ ರಾಮಕಷ್ಣಯ್ಯ ಆರೋಪಿಸಿದರು.
Vijaya Karnataka Web my sugar factory
ಮೈಷುಗರ್ ಕಾರ್ಖಾನೆ ಖಾಸಗಿಗೆ ವಹಿಸಲು ಹುನ್ನಾರ


ತಾಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿ ರೈತ ಸಂಘದ ವತಿಯಿಂದ ಆಯೋಜಿಸಿದ್ದ ರೈತನಾಯಕ ದಿ.ಅಶೋಕ್ ಅವರ 5ನೇ ವರ್ಷದ ಪುಣ್ಯ ಸ್ಮರಣೆ ಕಾರ‌್ಯಕ್ರಮದ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

‘‘ಮೈಷುಗರ್ ಸಕ್ಕರೆ ಕಾರ್ಖಾನೆ ರೋಗ ಪೀಡಿತವೆಂಬ ಕಾರಣಕ್ಕಾಗಿ ಸರಕಾರ ಖಾಸಗಿ ಸಂಸ್ಥೆಗೆ ವಹಿಸಲು ಮುಂದಾಗಿದ್ದು, ಇದನ್ನು ರೈತರ ಸಂಘ ವಿರೋಧಿಸುತ್ತದೆ. ಜಿಲ್ಲಾಡಳಿತ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ ರೈತರ ಹಿತಕಾಯದಿದ್ದಲ್ಲಿ ಬಹತ್ ಪ್ರತಿಭಟನೆ ಹಮ್ಮಿಕೊಳ್ಳುವ ಎಚ್ಚರಿಕೆ,’’ ನೀಡಿದರು.

‘‘ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರಕಾರವು ರೈತರ ಹೆಸರೇಳಿ ಅಧಿಕಾರಕ್ಕೆ ಬಂದು ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಕಾರ್ಖಾನೆ ಆಡಳಿತ ಮಂಡಳಿ ಅಧಿಕಾರಿಗಳು ಸಮರ್ಪಕ ವಾಗಿ ಕರ್ತವ್ಯ ನಿರ್ವಹಿಸದ ಹಿನ್ನೆಲೆಯಲ್ಲಿ ನಷ್ಟ ಉಂಟಾಗಿದೆ ಎಂದು ದೂರಿದರಲ್ಲದೇ ಸರಕಾರ ಕೂಡಲೇ ಅನುದಾನ ಬಿಡುಗಡೆಗೊಳಿಸಿ ಕಾರ್ಖಾನೆ ಯ ಪುನಶ್ಚೇತನಕ್ಕೆ ಅಗತ್ಯ ಕ್ರಮವಹಿಸಬೇಕು,’’ ಎಂದು ಹೇಳಿದರು.

‘‘ಜಿಲ್ಲೆಯ ರೈತರ ಹಿತ ಕಡೆಗಣಿಸಿ ಖಾಸಗಿ ಸಂಸ್ಥೆಗೆ ವಹಿಸಲು ಮುಂದಾದಲ್ಲಿ ಮುಂದಾಗುವ ಅನಾಹುತಕ್ಕೆ ಸರಕಾರವೇ ನೇರ ಹೊಣೆಯಾಗ ಲಿದೆ. ಈಗಾಗಲೇ ರೈತರು ಕಾರ್ಖಾನೆಯಲ್ಲಿ ಕಬ್ಬು ಅರೆಯುವಂತೆ ಒತ್ತಾಯ ಮಾಡುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ,’’ ಎಂದು ದೂರಿದರು.

5ನೇ ವರ್ಷದ ಪುಣ್ಯ ಸ್ಮರಣೆ : ರೈತ ನಾಯಕ ದಿ. ವಿ.ಅಶೋಕ್ ಅವರ ಐದನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ರೈತ ಸಂಘದ ಕಾರ‌್ಯಕರ್ತರು ಅಶೋಕ್ ಅವರ ಸಮಾಧಿ ಬಳಿ ತೆರಳಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಘೋಷಣೆ ಕೂಗಿದರು.

ಬಳಿಕ ಮಾತನಾಡಿದ ರೈತ ಸಂಘದ ಮುಖಂಡ ವರದರಾಜು, ‘‘ಅಶೋಕ್ ಅವರು ರೈತಪರ ಹೋರಾಟದ ಮುಂಚೂಣಿ ಸ್ಥಾನದಲ್ಲಿದ್ದು ಹಲವಾರು ಸಮಸ್ಯೆಗಳ ವಿರುದ್ಧ ನಿರಂತರ ಹೋರಾಟ ಹಮ್ಮಿಕೊಳ್ಳುವ ಮೂಲಕ ರೈತ ಪರ ದನಿಎತ್ತಿದ್ದರು. ರಾಜ್ಯ ಸೇರಿದಂತೆ ಜಿಲ್ಲೆಯಲ್ಲಿ ತಮ್ಮದೇ ಆದ ಛಾಪು ಮೂಡಿಸುವ ಮೂಲಕ ರೈತರ ಬೆನ್ನೆಲುಬಾಗಿದ್ದ ಅಶೋಕ್ ಅವರ ನಿಧನದಿಂದಾಗಿ ರೈತರಿಗೆ ತುಂಬಲಾರದ ನಷ್ಟ ಉಂಟಾಗಿದ್ದು ಸರಕಾರ ರೈತರ ಬೇಡಿಕೆಗಳ ಈಡೇರಿಕೆಗೆ ಅಗತ್ಯ ಕ್ರಮವಹಿಸಬೇಕು,’’ ಎಂದರು.

ಸಂಘಟನೆಯ ಪದಾಧಿಕಾರಿಗಳಾದ ಲಿಂಗಪ್ಪಾಜಿ, ಗೊಲ್ಲರದೊಡ್ಡಿ ಅಶೋಕ್, ರವಿಕುಮಾರ್, ಅಲೋಕ್‌ಕುಮಾರ್, ಸಿದ್ದೇಗೌಡ,ಪುಟ್ಟಸ್ವಾಮಿ, ರಮೇಶ್, ಸೀನಪ್ಪ, ಉಮೇಶ್, ಸತೀಶ್, ವಿಎಸ್‌ಎಸ್‌ಎನ್‌ಬಿ ಮಾಜಿ ಅಧ್ಯಕ್ಷ ಪುಟ್ಟರಾಮು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ