ಆ್ಯಪ್ನಗರ

ನಾನಾ ಬೇಡಿಕೆ: ರೈತ ಸಂಘದ ಪ್ರತಿಭಟನೆ

ತಾಲೂಕು ಕಚೇರಿಯಲ್ಲಿ ನಡೆಯುತ್ತಿ ರುವ ಭ್ರಷ್ಟಾಚಾರವನ್ನು ತಡೆಗಟ್ಟುವಂತೆ ಒತ್ತಾಯಿಸಿ ರೈತ ಸಂಘದ ಕಾರ‌್ಯಕರ್ತರು ಪ್ರತಿಭಟನೆ ನಡೆಸಿದರು.

Vijaya Karnataka 22 Nov 2017, 5:15 am
ಮಳವಳ್ಳಿ: ತಾಲೂಕು ಕಚೇರಿಯಲ್ಲಿ ನಡೆಯುತ್ತಿ ರುವ ಭ್ರಷ್ಟಾಚಾರವನ್ನು ತಡೆಗಟ್ಟುವಂತೆ ಒತ್ತಾಯಿಸಿ ರೈತ ಸಂಘದ ಕಾರ‌್ಯಕರ್ತರು ಪ್ರತಿಭಟನೆ ನಡೆಸಿದರು.
Vijaya Karnataka Web nana demand protest of peasant association
ನಾನಾ ಬೇಡಿಕೆ: ರೈತ ಸಂಘದ ಪ್ರತಿಭಟನೆ


ಪಟ್ಟಣದ ಅನಂತ್‌ರಾಮನ್ ವತ್ತದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಬಳಿಕ ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ತಾಲೂಕು ಕಚೇರಿಯಲ್ಲಿ ರೈತರು ಯಾವುದೇ ಕೆಲಸ ಮಾಡಿಕೊಡದೆ ತೊಂದರೆ ಕೊಡಲಾಗುತ್ತಿದೆ. ಹಣ ನೀಡದೇ ಯಾವುದೇ ಕೆಲಸ ಮಾಡುವುದಿಲ್ಲ ಎಂದು ದೂರಿದರು. ಯಾವುದೇ ಕೆಲಸ ಮಾಡಿಸಿಕೊಳ್ಳಲು ಮೂರು ನಾಲ್ಕು ದಿನಗಳು ಕಚೇರಿಯಿಂದ ಮನೆಗೆ ಮನೆಯಿಂದ ಕಚೇರಿಗೆ ಅಲೆಯುವಂತಾಗಿದೆ. ಈ ಸಂಬಂದ ಯಾವುದೇ ಅಧಿಕಾರಿಗಳು ಕ್ರಮಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಬರದ ನಡುವೆಯೂ ರೈತರು ಬೆಳೆ ಬೆಳೆದಿದ್ದಾರೆ. ಆದರೆ ಬೆಳೆ ಬರುತ್ತಿರುವ ರೋಗದ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡುತ್ತಿಲ್ಲ. ರೇಷ್ಮೆ ಮಾರುಕಟ್ಟೆಯಲ್ಲಿ ಹರಾಜಿನಲ್ಲಿ ರೈತರಿಗೆ ಅನ್ಯಾಯವಾಗುತ್ತಿದೆ ಇದರ ಬಗ್ಗೆ ಯಾವುದೇ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ದೂರಿದರು.

ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ತಹಸೀಲ್ದಾರ್ ದಿನೇಶ್‌ಚಂದ್ರ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಶಿವರುದ್ರ, ಶಂಕರೇಗೌಡ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ