ಆ್ಯಪ್ನಗರ

ನಾನಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ತಾಲೂಕಿನ ಎಚ್.ಮಲ್ಲಿಗೆರೆ ಗ್ರಾಮದಲ್ಲಿ ಸಮಾಜಕಲ್ಯಾಣ ಇಲಾಖೆಯಿಂದ 10 ಲಕ್ಷ ರೂ.ಗಳಲ್ಲಿ ನಿರ್ಮಾಣ ಮಾಡುತ್ತಿರುವ ಡಾ. ಬಿ.ಆರ್.ಅಂಬೇಡ್ಕರ್ ಭವನ ಕಾಮಗಾರಿಗೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಗುದ್ದಲಿ ಪೂಜೆ ನೆರವೇರಿಸಿದರು.

ವಿಕ ಸುದ್ದಿಲೋಕ 6 Jul 2016, 5:16 am
ಮಂಡ್ಯ : ತಾಲೂಕಿನ ಎಚ್.ಮಲ್ಲಿಗೆರೆ ಗ್ರಾಮದಲ್ಲಿ ಸಮಾಜಕಲ್ಯಾಣ ಇಲಾಖೆಯಿಂದ 10 ಲಕ್ಷ ರೂ.ಗಳಲ್ಲಿ ನಿರ್ಮಾಣ ಮಾಡುತ್ತಿರುವ ಡಾ. ಬಿ.ಆರ್.ಅಂಬೇಡ್ಕರ್ ಭವನ ಕಾಮಗಾರಿಗೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಗುದ್ದಲಿ ಪೂಜೆ ನೆರವೇರಿಸಿದರು.
Vijaya Karnataka Web nana driving the development work
ನಾನಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ


ಬಳಿಕ ಮಾತನಾಡಿದ ಅವರು, ಮಾದೇಗೌಡನ ಕೊಪ್ಪಲು ಗ್ರಾಮದಲ್ಲಿ 25ಲಕ್ಷ ರೂ.ವೆಚ್ಚದಲ್ಲಿ ಪಶು ಚಿಕಿತ್ಸಾಲಯ, 24 ಲಕ್ಷರೂ. ವೆಚ್ಚದಲ್ಲಿ ಮಾರಚಾಕನಹಳ್ಳಿ ಗ್ರಾ.ಪಂ. ಕಟ್ಟಡ ನಿರ್ಮಾಣ, ಹೆಳವನಹಳ್ಳಿ ಗ್ರಾಮದ ಕಾಲುವೆ ನಿರ್ಮಾಣ ಸೇರಿದಂತೆ ನಾನಾ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತುಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾಮಗಾರಿ ನಡೆಯುವಾಗ ಸ್ಥಳೀಯರು ಗಮನಿಸಬೇಕು, ಕಾಮಗಾರಿ ಕಳಪೆ ಗುಣಮಟ್ಟದಿಂದ ನಡೆಯದ ಹಾಗೆ ನೋಡಿಕೊಳ್ಳಬೇಕು. ಈ ನಡುವೆಯೂ ಕಳಪೆ ಕಾಮಗಾರಿ ನಡೆದೆರೆ ಗುತ್ತಿಗೆದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮುಂದಿನ ದಿನಗಳಲ್ಲಿ ಸುಮಾರು 1 ಕೋಟಿ ರೂ.ವೆಚ್ಚದಲ್ಲಿ ಕೆರೆಗಳ ಹೂಳೆತ್ತುವ ಕಾಮಗಾರಿ ಹಮ್ಮಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಅಳಿವಿನಂಚಿನಲ್ಲಿರುವ ಕೆರೆಗಳಿಗೆ ಮರು ಜೀವ ನೀಡಲಾಗುವುದು ಎಂದು ಭರವಸೆ ನೀಡಿದರು.

ಗ್ರಾಪಂ ಅಧ್ಯಕ್ಷೆ ಪಾರ್ವತಮ್ಮ, ಗ್ರಾಪಂ ಮಾಜಿ ಸದಸ್ಯ ಪರಂದಾಮ, ರೈತ ಮುಖಂಡರಾದ ಸುರೇಶ್, ಸುಚೀಂದ್ರ, ಮರಿಲಿಂಗೇಗೌಡ, ಯೋಗೇಶ್ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ