ಆ್ಯಪ್ನಗರ

ಪಾಕ್‌ ಸೈನಿಕರ ಫೋಟೋ ಶೇರ್‌: ಯುವಕ ಪೊಲೀಸರ ವಶಕ್ಕೆ

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಈ ಸಂದರ್ಭದಲ್ಲಿ ಪಾಕಿಸ್ತಾನ ಸೈನಿಕರ ಫೋಟೋಗಳನ್ನು ತನ್ನ ಫೇಸ್‌ಬುಕ್‌ ಖಾತೆ ಮೂಲಕ ಶೇರ್‌ ಮಾಡಿದ ವ್ಯಕ್ತಿಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Vijaya Karnataka 28 Feb 2019, 5:00 am
ಕೆ.ಆರ್‌.ಪೇಟೆ: ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಈ ಸಂದರ್ಭದಲ್ಲಿ ಪಾಕಿಸ್ತಾನ ಸೈನಿಕರ ಫೋಟೋಗಳನ್ನು ತನ್ನ ಫೇಸ್‌ಬುಕ್‌ ಖಾತೆ ಮೂಲಕ ಶೇರ್‌ ಮಾಡಿದ ವ್ಯಕ್ತಿಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Vijaya Karnataka Web pakistani soldiers photo sharing a youth arrested by police
ಪಾಕ್‌ ಸೈನಿಕರ ಫೋಟೋ ಶೇರ್‌: ಯುವಕ ಪೊಲೀಸರ ವಶಕ್ಕೆ


ಪಟ್ಟಣದ ತಾಲೂಕು ಕಚೇರಿ ರಸ್ತೆಯಲ್ಲಿರುವ ಗುಜರಿ ಅಂಗಡಿ ಮಾಲೀಕ ಶಫಿ ಪೊಲೀಸರು ವಶಕ್ಕೊಳಗಾದ ಆರೋಪಿ.

ಪಾಕಿಸ್ತಾನದ ಯೋಧನೊಬ್ಬ ಪಾಕಿಸ್ತಾನದ ಧ್ವಜಕ್ಕೆ ಮುತ್ತಿಡುತ್ತಿರುವ ಫೋಟೋಗಳನ್ನು ಫೇಸ್‌ಬುಕ್‌ ಖಾತೆಯಲ್ಲಿ ಶೇರ್‌ ಮಾಡುವ ಮೂಲಕ ಪಟ್ಟಣದಲ್ಲಿ ಅಶಾಂತಿ ಉಂಟು ಮಾಡುವ ಪ್ರಯತ್ನವನ್ನು ಈತ ಮಾಡಿದ್ದಾರೆ. ಈತನನ್ನು ತಾಲೂಕಿನಿಂದ ಗಡಿಪಾರು ಮಾಡಬೇಕು. ಜತೆಗೆ ಕಠಿಣ ಕ್ರಮ ಜರುಗಿಸಬೇಕೆಂದು ವಿಶ್ವ ಹಿಂದೂ ಪರಿಷತ್‌ ಮಾಜಿ ಅಧ್ಯಕ್ಷ , ಜಿಪಂ ಸದಸ್ಯ ಡಾ.ಎಸ್‌.ಕೃಷ್ಣಮೂರ್ತಿ ಸೇರಿದಂತೆ ನಾನಾ ಸಂಘಟನೆಗಳು ಪಟ್ಟಣದ ಪೊಲೀಸ್‌ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ ಒತ್ತಾಯಿಸಿದರು.

ಈತ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಪ್ರಧಾನಿ ಮೋದಿ ವಿರೋಧಿ ಪೋಸ್ಟ್‌ಗಳು ಜತೆಗೆ ಪಾಕಿಸ್ತಾನ ಪರ, ಮೆದು ಧೋರಣೆ, ನಿಲುವು ವ್ಯಕ್ತಪಡಿಸಿ ಪೋಸ್ಟ್‌ಗಳನ್ನು ಶೇರ್‌ ಮಾಡಿರುವ ಈತನ ವಿರುದ್ಧ ದೇಶದ್ರೋಹದ ಕಾನೂನಿನ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಡಾ.ಎಸ್‌.ಕೃಷ್ಣಮೂರ್ತಿ ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ